AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ರೆಸ್ಟೋರೆಂಟ್​ನಲ್ಲಿ ನೀರಿನ ಬಾಟಲಿ ಬದಲು ಮಕ್ಕಳಿಗೆ ಆ್ಯಸಿಡ್ ನೀಡಿದ ಮ್ಯಾನೇಜರ್ ಬಂಧನ

ರೆಸ್ಟೋರೆಂಟ್​ನಲ್ಲಿ ನೀರಿನ ಬದಲು ಆ್ಯಸಿಡ್ ಬಾಟಲಿ ನೀಡಿದ ಮ್ಯಾನೇಜರ್​ ಅನ್ನು ಲಾಹೋರ್ ಪೊಲೀಸರು ಬಂಧಿಸಿದ್ದಾರೆ. ರೆಸ್ಟೋರೆಂಟ್​ನಲ್ಲಿ ನಡೆದ ಪಾರ್ಟಿಯೊಂದರಲ್ಲಿ ಇಬ್ಬರು ಮಕ್ಕಳಿಗೆ ನೀರಿನ ಬಾಟಲಿಯಲ್ಲಿ ಆ್ಯಸಿಡ್ ಕೊಟ್ಟಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಪಾಕಿಸ್ತಾನದ ರೆಸ್ಟೋರೆಂಟ್​ನಲ್ಲಿ ನೀರಿನ ಬಾಟಲಿ ಬದಲು ಮಕ್ಕಳಿಗೆ ಆ್ಯಸಿಡ್ ನೀಡಿದ ಮ್ಯಾನೇಜರ್ ಬಂಧನ
Water
TV9 Web
| Edited By: |

Updated on: Oct 04, 2022 | 10:35 AM

Share

ರೆಸ್ಟೋರೆಂಟ್​ನಲ್ಲಿ ನೀರಿನ ಬದಲು ಆ್ಯಸಿಡ್ ಬಾಟಲಿ ನೀಡಿದ ಮ್ಯಾನೇಜರ್​ ಅನ್ನು ಲಾಹೋರ್ ಪೊಲೀಸರು ಬಂಧಿಸಿದ್ದಾರೆ. ರೆಸ್ಟೋರೆಂಟ್​ನಲ್ಲಿ ನಡೆದ ಪಾರ್ಟಿಯೊಂದರಲ್ಲಿ ಇಬ್ಬರು ಮಕ್ಕಳಿಗೆ ನೀರಿನ ಬಾಟಲಿಯಲ್ಲಿ ಆ್ಯಸಿಡ್ ಕೊಟ್ಟಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸೆಪ್ಟೆಂಬರ್ 27 ರಂದು ಐತಿಹಾಸಿಕ ಗ್ರೇಟರ್ ಇಕ್ಬಾಲ್ ಪಾರ್ಕ್‌ನ ಪೊಯೆಟ್ ರೆಸ್ಟೋರೆಂಟ್ ನಲ್ಲಿ ಈ ಘಟನೆ ಸಂಭವಿಸಿದೆ. ಮಕ್ಕಳು ಆಸ್ಪತ್ರೆಯಲ್ಲಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ.

ಎಫ್‌ಐಆರ್‌ನ ಪ್ರಕಾರ, ಮುಹಮ್ಮದ್ ಆದಿಲ್ ಅವರು ಪೊಯೆಟ್ ರೆಸ್ಟೋರೆಂಟ್‌ನಲ್ಲಿ ಕುಟುಂಬ ಹುಟ್ಟುಹಬ್ಬದ ಪಾರ್ಟಿಯನ್ನು ಆಯೋಜಿಸಿದ್ದರು. ಸಿಬ್ಬಂದಿಯು ನೀರಿನ ಬಾಟಲಿ ಕೊಟ್ಟ ಬಳಿಕ ಮಕ್ಕಳು ಅದರಲ್ಲಿ ಕೈತೊಳೆದುಕೊಂಡರು, ಸ್ವಲ್ಪ ಸಮಯದ ನಂತರ ಮಕ್ಕಳು ಅಳಲು ಆರಂಭಿಸಿದರು. ಆಮೇಲೆ ಕೈಗಳನ್ನು ನೋಡಿದ ಬಳಿಕ ಅದು ನೀರಾಗಿರಲಿಲ್ಲ, ಬದಲಾಗಿ ಆ್ಯಸಿಡ್ ಆಗಿತ್ತು ಎಂಬುದು ತಿಳಿದುಬಂದಿದೆ. ಕೈಗಳಲ್ಲಿ ಸುಟ್ಟ ಗಾಯಗಳಾಗಿತ್ತು. ಬೊಮ್ಮೆಗಳು ಬಂದಿದ್ದವು.

ಇದೇ ವೇಳೆ ಅವರ ಎರಡೂವರೆ ವರ್ಷದ ಮಗು ವಾಜಿಹಾ ಮತ್ತೊಂದು ನೀರಿನ ಬಾಟಲಿಯಲ್ಲಿದ್ದ ಆ್ಯಸಿಡ್ ಕುಡಿದಿದ್ದರಿಂದ ವಾಂತಿ ಮಾಡಿಕೊಳ್ಳಲು ಶುರು ಮಾಡಿದ್ದಳು. ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವಾಜಿಹಾ ಸ್ಥಿತಿ ಚಿಂತಾಜನಕವಾಗಿದೆ.

ಪೊಲೀಸರು ರೆಸ್ಟೋರೆಂಟ್ ಮ್ಯಾನೇಜರ್ ಮತ್ತು ಇತರ ಐದು ಉದ್ಯೋಗಿಗಳ ವಿರುದ್ಧ ಪಾಕಿಸ್ತಾನ ದಂಡ ಸಂಹಿತೆಯ ಸೆಕ್ಷನ್ 336 ಬಿ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

“ನಾವು ರೆಸ್ಟೋರೆಂಟ್ ಮ್ಯಾನೇಜರ್ ಮುಹಮ್ಮದ್ ಜಾವೇದ್ ಅವರನ್ನು ಬಂಧಿಸಿದ್ದೇವೆ ಮತ್ತು ದೂರುದಾರರು ಸೂಚಿಸಿದ ಇತರರನ್ನು ಬಂಧಿಸಲು ದಾಳಿ ನಡೆಸಲಾಗುತ್ತಿದೆ” ಎಂದು ಪೊಲೀಸ್ ಅಧಿಕಾರಿ ತಾಹಿರ್ ವಕಾಸ್ ಸೋಮವಾರ ಪಿಟಿಐಗೆ ತಿಳಿಸಿದ್ದಾರೆ. ತನಿಖೆ ಪೂರ್ಣಗೊಳ್ಳುವವರೆಗೆ ರೆಸ್ಟೋರೆಂಟ್​ ಅನ್ನು ತೆರೆಯುವುದಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.

ಇತರೆ ದೇಶಗಳ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?