AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ರೆಸ್ಟೋರೆಂಟ್​ನಲ್ಲಿ ನೀರಿನ ಬಾಟಲಿ ಬದಲು ಮಕ್ಕಳಿಗೆ ಆ್ಯಸಿಡ್ ನೀಡಿದ ಮ್ಯಾನೇಜರ್ ಬಂಧನ

ರೆಸ್ಟೋರೆಂಟ್​ನಲ್ಲಿ ನೀರಿನ ಬದಲು ಆ್ಯಸಿಡ್ ಬಾಟಲಿ ನೀಡಿದ ಮ್ಯಾನೇಜರ್​ ಅನ್ನು ಲಾಹೋರ್ ಪೊಲೀಸರು ಬಂಧಿಸಿದ್ದಾರೆ. ರೆಸ್ಟೋರೆಂಟ್​ನಲ್ಲಿ ನಡೆದ ಪಾರ್ಟಿಯೊಂದರಲ್ಲಿ ಇಬ್ಬರು ಮಕ್ಕಳಿಗೆ ನೀರಿನ ಬಾಟಲಿಯಲ್ಲಿ ಆ್ಯಸಿಡ್ ಕೊಟ್ಟಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಪಾಕಿಸ್ತಾನದ ರೆಸ್ಟೋರೆಂಟ್​ನಲ್ಲಿ ನೀರಿನ ಬಾಟಲಿ ಬದಲು ಮಕ್ಕಳಿಗೆ ಆ್ಯಸಿಡ್ ನೀಡಿದ ಮ್ಯಾನೇಜರ್ ಬಂಧನ
Water
TV9 Web
| Updated By: ನಯನಾ ರಾಜೀವ್|

Updated on: Oct 04, 2022 | 10:35 AM

Share

ರೆಸ್ಟೋರೆಂಟ್​ನಲ್ಲಿ ನೀರಿನ ಬದಲು ಆ್ಯಸಿಡ್ ಬಾಟಲಿ ನೀಡಿದ ಮ್ಯಾನೇಜರ್​ ಅನ್ನು ಲಾಹೋರ್ ಪೊಲೀಸರು ಬಂಧಿಸಿದ್ದಾರೆ. ರೆಸ್ಟೋರೆಂಟ್​ನಲ್ಲಿ ನಡೆದ ಪಾರ್ಟಿಯೊಂದರಲ್ಲಿ ಇಬ್ಬರು ಮಕ್ಕಳಿಗೆ ನೀರಿನ ಬಾಟಲಿಯಲ್ಲಿ ಆ್ಯಸಿಡ್ ಕೊಟ್ಟಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸೆಪ್ಟೆಂಬರ್ 27 ರಂದು ಐತಿಹಾಸಿಕ ಗ್ರೇಟರ್ ಇಕ್ಬಾಲ್ ಪಾರ್ಕ್‌ನ ಪೊಯೆಟ್ ರೆಸ್ಟೋರೆಂಟ್ ನಲ್ಲಿ ಈ ಘಟನೆ ಸಂಭವಿಸಿದೆ. ಮಕ್ಕಳು ಆಸ್ಪತ್ರೆಯಲ್ಲಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ.

ಎಫ್‌ಐಆರ್‌ನ ಪ್ರಕಾರ, ಮುಹಮ್ಮದ್ ಆದಿಲ್ ಅವರು ಪೊಯೆಟ್ ರೆಸ್ಟೋರೆಂಟ್‌ನಲ್ಲಿ ಕುಟುಂಬ ಹುಟ್ಟುಹಬ್ಬದ ಪಾರ್ಟಿಯನ್ನು ಆಯೋಜಿಸಿದ್ದರು. ಸಿಬ್ಬಂದಿಯು ನೀರಿನ ಬಾಟಲಿ ಕೊಟ್ಟ ಬಳಿಕ ಮಕ್ಕಳು ಅದರಲ್ಲಿ ಕೈತೊಳೆದುಕೊಂಡರು, ಸ್ವಲ್ಪ ಸಮಯದ ನಂತರ ಮಕ್ಕಳು ಅಳಲು ಆರಂಭಿಸಿದರು. ಆಮೇಲೆ ಕೈಗಳನ್ನು ನೋಡಿದ ಬಳಿಕ ಅದು ನೀರಾಗಿರಲಿಲ್ಲ, ಬದಲಾಗಿ ಆ್ಯಸಿಡ್ ಆಗಿತ್ತು ಎಂಬುದು ತಿಳಿದುಬಂದಿದೆ. ಕೈಗಳಲ್ಲಿ ಸುಟ್ಟ ಗಾಯಗಳಾಗಿತ್ತು. ಬೊಮ್ಮೆಗಳು ಬಂದಿದ್ದವು.

ಇದೇ ವೇಳೆ ಅವರ ಎರಡೂವರೆ ವರ್ಷದ ಮಗು ವಾಜಿಹಾ ಮತ್ತೊಂದು ನೀರಿನ ಬಾಟಲಿಯಲ್ಲಿದ್ದ ಆ್ಯಸಿಡ್ ಕುಡಿದಿದ್ದರಿಂದ ವಾಂತಿ ಮಾಡಿಕೊಳ್ಳಲು ಶುರು ಮಾಡಿದ್ದಳು. ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವಾಜಿಹಾ ಸ್ಥಿತಿ ಚಿಂತಾಜನಕವಾಗಿದೆ.

ಪೊಲೀಸರು ರೆಸ್ಟೋರೆಂಟ್ ಮ್ಯಾನೇಜರ್ ಮತ್ತು ಇತರ ಐದು ಉದ್ಯೋಗಿಗಳ ವಿರುದ್ಧ ಪಾಕಿಸ್ತಾನ ದಂಡ ಸಂಹಿತೆಯ ಸೆಕ್ಷನ್ 336 ಬಿ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

“ನಾವು ರೆಸ್ಟೋರೆಂಟ್ ಮ್ಯಾನೇಜರ್ ಮುಹಮ್ಮದ್ ಜಾವೇದ್ ಅವರನ್ನು ಬಂಧಿಸಿದ್ದೇವೆ ಮತ್ತು ದೂರುದಾರರು ಸೂಚಿಸಿದ ಇತರರನ್ನು ಬಂಧಿಸಲು ದಾಳಿ ನಡೆಸಲಾಗುತ್ತಿದೆ” ಎಂದು ಪೊಲೀಸ್ ಅಧಿಕಾರಿ ತಾಹಿರ್ ವಕಾಸ್ ಸೋಮವಾರ ಪಿಟಿಐಗೆ ತಿಳಿಸಿದ್ದಾರೆ. ತನಿಖೆ ಪೂರ್ಣಗೊಳ್ಳುವವರೆಗೆ ರೆಸ್ಟೋರೆಂಟ್​ ಅನ್ನು ತೆರೆಯುವುದಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.

ಇತರೆ ದೇಶಗಳ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?