AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ರೆಸ್ಟೋರೆಂಟ್​ನಲ್ಲಿ ನೀರಿನ ಬಾಟಲಿ ಬದಲು ಮಕ್ಕಳಿಗೆ ಆ್ಯಸಿಡ್ ನೀಡಿದ ಮ್ಯಾನೇಜರ್ ಬಂಧನ

ರೆಸ್ಟೋರೆಂಟ್​ನಲ್ಲಿ ನೀರಿನ ಬದಲು ಆ್ಯಸಿಡ್ ಬಾಟಲಿ ನೀಡಿದ ಮ್ಯಾನೇಜರ್​ ಅನ್ನು ಲಾಹೋರ್ ಪೊಲೀಸರು ಬಂಧಿಸಿದ್ದಾರೆ. ರೆಸ್ಟೋರೆಂಟ್​ನಲ್ಲಿ ನಡೆದ ಪಾರ್ಟಿಯೊಂದರಲ್ಲಿ ಇಬ್ಬರು ಮಕ್ಕಳಿಗೆ ನೀರಿನ ಬಾಟಲಿಯಲ್ಲಿ ಆ್ಯಸಿಡ್ ಕೊಟ್ಟಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಪಾಕಿಸ್ತಾನದ ರೆಸ್ಟೋರೆಂಟ್​ನಲ್ಲಿ ನೀರಿನ ಬಾಟಲಿ ಬದಲು ಮಕ್ಕಳಿಗೆ ಆ್ಯಸಿಡ್ ನೀಡಿದ ಮ್ಯಾನೇಜರ್ ಬಂಧನ
Water
TV9 Web
| Edited By: |

Updated on: Oct 04, 2022 | 10:35 AM

Share

ರೆಸ್ಟೋರೆಂಟ್​ನಲ್ಲಿ ನೀರಿನ ಬದಲು ಆ್ಯಸಿಡ್ ಬಾಟಲಿ ನೀಡಿದ ಮ್ಯಾನೇಜರ್​ ಅನ್ನು ಲಾಹೋರ್ ಪೊಲೀಸರು ಬಂಧಿಸಿದ್ದಾರೆ. ರೆಸ್ಟೋರೆಂಟ್​ನಲ್ಲಿ ನಡೆದ ಪಾರ್ಟಿಯೊಂದರಲ್ಲಿ ಇಬ್ಬರು ಮಕ್ಕಳಿಗೆ ನೀರಿನ ಬಾಟಲಿಯಲ್ಲಿ ಆ್ಯಸಿಡ್ ಕೊಟ್ಟಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸೆಪ್ಟೆಂಬರ್ 27 ರಂದು ಐತಿಹಾಸಿಕ ಗ್ರೇಟರ್ ಇಕ್ಬಾಲ್ ಪಾರ್ಕ್‌ನ ಪೊಯೆಟ್ ರೆಸ್ಟೋರೆಂಟ್ ನಲ್ಲಿ ಈ ಘಟನೆ ಸಂಭವಿಸಿದೆ. ಮಕ್ಕಳು ಆಸ್ಪತ್ರೆಯಲ್ಲಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ.

ಎಫ್‌ಐಆರ್‌ನ ಪ್ರಕಾರ, ಮುಹಮ್ಮದ್ ಆದಿಲ್ ಅವರು ಪೊಯೆಟ್ ರೆಸ್ಟೋರೆಂಟ್‌ನಲ್ಲಿ ಕುಟುಂಬ ಹುಟ್ಟುಹಬ್ಬದ ಪಾರ್ಟಿಯನ್ನು ಆಯೋಜಿಸಿದ್ದರು. ಸಿಬ್ಬಂದಿಯು ನೀರಿನ ಬಾಟಲಿ ಕೊಟ್ಟ ಬಳಿಕ ಮಕ್ಕಳು ಅದರಲ್ಲಿ ಕೈತೊಳೆದುಕೊಂಡರು, ಸ್ವಲ್ಪ ಸಮಯದ ನಂತರ ಮಕ್ಕಳು ಅಳಲು ಆರಂಭಿಸಿದರು. ಆಮೇಲೆ ಕೈಗಳನ್ನು ನೋಡಿದ ಬಳಿಕ ಅದು ನೀರಾಗಿರಲಿಲ್ಲ, ಬದಲಾಗಿ ಆ್ಯಸಿಡ್ ಆಗಿತ್ತು ಎಂಬುದು ತಿಳಿದುಬಂದಿದೆ. ಕೈಗಳಲ್ಲಿ ಸುಟ್ಟ ಗಾಯಗಳಾಗಿತ್ತು. ಬೊಮ್ಮೆಗಳು ಬಂದಿದ್ದವು.

ಇದೇ ವೇಳೆ ಅವರ ಎರಡೂವರೆ ವರ್ಷದ ಮಗು ವಾಜಿಹಾ ಮತ್ತೊಂದು ನೀರಿನ ಬಾಟಲಿಯಲ್ಲಿದ್ದ ಆ್ಯಸಿಡ್ ಕುಡಿದಿದ್ದರಿಂದ ವಾಂತಿ ಮಾಡಿಕೊಳ್ಳಲು ಶುರು ಮಾಡಿದ್ದಳು. ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವಾಜಿಹಾ ಸ್ಥಿತಿ ಚಿಂತಾಜನಕವಾಗಿದೆ.

ಪೊಲೀಸರು ರೆಸ್ಟೋರೆಂಟ್ ಮ್ಯಾನೇಜರ್ ಮತ್ತು ಇತರ ಐದು ಉದ್ಯೋಗಿಗಳ ವಿರುದ್ಧ ಪಾಕಿಸ್ತಾನ ದಂಡ ಸಂಹಿತೆಯ ಸೆಕ್ಷನ್ 336 ಬಿ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

“ನಾವು ರೆಸ್ಟೋರೆಂಟ್ ಮ್ಯಾನೇಜರ್ ಮುಹಮ್ಮದ್ ಜಾವೇದ್ ಅವರನ್ನು ಬಂಧಿಸಿದ್ದೇವೆ ಮತ್ತು ದೂರುದಾರರು ಸೂಚಿಸಿದ ಇತರರನ್ನು ಬಂಧಿಸಲು ದಾಳಿ ನಡೆಸಲಾಗುತ್ತಿದೆ” ಎಂದು ಪೊಲೀಸ್ ಅಧಿಕಾರಿ ತಾಹಿರ್ ವಕಾಸ್ ಸೋಮವಾರ ಪಿಟಿಐಗೆ ತಿಳಿಸಿದ್ದಾರೆ. ತನಿಖೆ ಪೂರ್ಣಗೊಳ್ಳುವವರೆಗೆ ರೆಸ್ಟೋರೆಂಟ್​ ಅನ್ನು ತೆರೆಯುವುದಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.

ಇತರೆ ದೇಶಗಳ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ