Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಗ್ರ ಹಫೀಜ್ ಸಯೀದ್ ಗಡಿಪಾರಿಗೆ ಭಾರತ ಮನವಿ ಮಾಡಿದೆ ಆದರೆ… ಪಾಕಿಸ್ತಾನ ಹೇಳಿದ್ದೇನು?

ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸಯೀದ್​ನನ್ನು ಹಸ್ತಾಂತರಿಸುವಂತೆ ಭಾರತೀಯ ಅಧಿಕಾರಿಗಳಿಂದ ಮನವಿ ಸ್ವೀಕರಿಸಲಾಗಿದೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವಾಲಯದ ವಕ್ತಾರರಾದ ಮುಮ್ತಾಜ್ ಜಹ್ರಾ ಬಲೋಚ್ ಹೇಳಿದ್ದಾರೆ.

ಉಗ್ರ ಹಫೀಜ್ ಸಯೀದ್ ಗಡಿಪಾರಿಗೆ ಭಾರತ ಮನವಿ ಮಾಡಿದೆ ಆದರೆ... ಪಾಕಿಸ್ತಾನ ಹೇಳಿದ್ದೇನು?
ಉಗ್ರ ಹಫೀಜ್ ಸಯೀದ್ ಗಡಿಪಾರಿಗೆ ಭಾರತ ಮನವಿ ಮಾಡಿದೆ ಆದರೆ... ಪಾಕಿಸ್ತಾನ ಹೇಳಿದ್ದೇನು?
Follow us
TV9 Web
| Updated By: Ganapathi Sharma

Updated on: Dec 30, 2023 | 10:16 AM

ನವದೆಹಲಿ, ಡಿಸೆಂಬರ್ 30: ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಸಂಸ್ಥಾಪಕ ಮತ್ತು 2008 ರ ಮುಂಬೈ ಭಯೋತ್ಪಾದನಾ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್‌ನನ್ನು (Hafiz Saeed) ಹಸ್ತಾಂತರಿಸುವಂತೆ ಭಾರತ ಮನವಿ ಮಾಡಿದೆ ಎಂದು ಪಾಕಿಸ್ತಾನ ಶುಕ್ರವಾರ ದೃಢಪಡಿಸಿದೆ. ವಿಶ್ವಸಂಸ್ಥೆಯ ನಿಷೇಧಿತ ಭಯೋತ್ಪಾದಕರ ಪಟ್ಟಿಯಲ್ಲಿರುವ ಸಯೀದ್ ಹಲವಾರು ಭಯೋತ್ಪಾದನೆ ಕೃತ್ಯಗಳಲ್ಲಿ ಶಾಮೀಲಾಗಿದ್ದಕ್ಕಾಗಿ ಭಾರತೀಯ ತನಿಖಾ ಸಂಸ್ಥೆಗಳಿಗೆ ಬೇಕಾಗಿದ್ದಾನೆ.

ಪಾಕಿಸ್ತಾನ ಮೂಲದ ಸಯೀದ್‌ನನ್ನು ಹಸ್ತಾಂತರಿಸುವಂತೆ ಕೆಲವು ದಾಖಲೆಗಳೊಂದಿಗೆ ಇತ್ತೀಚೆಗೆ ಇಸ್ಲಾಮಾಬಾದ್‌ಗೆ ಮನವಿ ಮಾಡಲಾಗಿತ್ತು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಶುಕ್ರವಾರ ತಿಳಿಸಿದ್ದಾರೆ.

ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸಯೀದ್​ನನ್ನು ಹಸ್ತಾಂತರಿಸುವಂತೆ ಭಾರತೀಯ ಅಧಿಕಾರಿಗಳಿಂದ ಮನವಿ ಸ್ವೀಕರಿಸಲಾಗಿದೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವಾಲಯದ ವಕ್ತಾರರಾದ ಮುಮ್ತಾಜ್ ಜಹ್ರಾ ಬಲೋಚ್ ಹೇಳಿದ್ದಾರೆ.

ಆದಾಗ್ಯೂ, ಎರಡೂ ದೇಶಗಳ ನಡುವೆ ಯಾವುದೇ ಹಸ್ತಾಂತರ ಒಪ್ಪಂದ ಏರ್ಪಟ್ಟಿಲ್ಲ ಎಂದೂ ಅವರು ತಿಳಿಸಿದ್ದಾರೆ. ಪಾಕಿಸ್ತಾನ ಮತ್ತು ಭಾರತದ ನಡುವೆ ಯಾವುದೇ ದ್ವಿಪಕ್ಷೀಯ ಹಸ್ತಾಂತರ ಒಪ್ಪಂದ ಅಸ್ತಿತ್ವದಲ್ಲಿಲ್ಲ ಎಂಬುದನ್ನು ಗಮನಿಸಬೇಕಿದೆ ಎಂದು ಅವರು ಹೇಳಿದ್ದಾರೆ.

ಭಾರತ ಮತ್ತು ಪಾಕಿಸ್ತಾನದ ನಡುವೆ ಯಾವುದೇ ಹಸ್ತಾಂತರ ಒಪ್ಪಂದವಿಲ್ಲದಿದ್ದರೂ ಹಸ್ತಾಂತರ ಸಾಧ್ಯ ಎಂದು ಕೆಲವು ಮಂದಿ ಕಾನೂನು ತಜ್ಞರ ಹೇಳಿಕೆಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ‘ಪಿಟಿಐ’ ವರದಿ ಮಾಡಿದೆ

ಹಫೀಜ್ ಸಯೀದ್ ಮತ್ತು ಆತನ ನಿಕಟವರ್ತಿಗಳ ವಿರುದ್ಧ 23 ಎಫ್‌ಐಆರ್‌ಗಳನ್ನು ದಾಖಲಿಸಿದ ನಂತರ ಪಾಕಿಸ್ತಾನಿ ಭಯೋತ್ಪಾದನಾ ನಿಗ್ರಹ ದಳ (CTD) 2019 ರ ಜುಲೈಯಲ್ಲಿ ಆತನನ್ನು ಬಂಧಿಸಿತ್ತು. ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ ಎರಡು ಪ್ರಕರಣಗಳಲ್ಲಿ ಪಾಕಿಸ್ತಾನದ ಭಯೋತ್ಪಾದನಾ-ವಿರೋಧಿ ನ್ಯಾಯಾಲಯವು ಆತನಿಗೆ 2022 ರ ಏಪ್ರಿಲ್​​​ನಲ್ಲಿ 33 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು.

ಇದನ್ನೂ ಓದಿ: ಸುಟ್ಟ ಮುಖ, ಬೆತ್ತಲೆಯಾದ ದೇಹಗಳು ಪತ್ತೆ; ಹಮಾಸ್ ದಾಳಿ ವೇಳೆ ಲೈಂಗಿಕ ದೌರ್ಜನ್ಯದ ಭೀಕರತೆ ಬಿಚ್ಚಿಟ್ಟ ವರದಿ

2008 ರ ಮುಂಬೈ ಭಯೋತ್ಪಾದನಾ ದಾಳಿಯು ಆರು ಅಮೆರಿಕನ್ನರು ಸೇರಿದಂತೆ 166 ಜನರನ್ನು ಬಲಿ ತೆಗೆದುಕೊಂಡಿತ್ತು. ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದರು.

ವಿದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ