AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ; 8 ಜನ ಸಾವು

ಪೇಶಾವರದ ಚೆಕ್‌ಪಾಯಿಂಟ್‌ನಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 8 ಜನ ಪಾಕಿಸ್ತಾನಿ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ; 8 ಜನ ಸಾವು
ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ
ಸುಷ್ಮಾ ಚಕ್ರೆ
|

Updated on: Oct 26, 2024 | 7:04 PM

Share

ಪೇಶಾವರ: ಪಾಕಿಸ್ತಾನ ದೇಶದ ವಾಯುವ್ಯ ಭಾಗದಲ್ಲಿ ಚೆಕ್‌ಪಾಯಿಂಟ್‌ನಲ್ಲಿ ನಡೆದ ಆತ್ಮಹತ್ಯಾ ದಾಳಿಯಲ್ಲಿ 8 ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ, ಐವರು ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನಿ ಪೊಲೀಸರು ಹೇಳಿದ್ದಾರೆ. ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಕಾರ್ಯ ನಿರ್ವಹಿಸುವ ಮತ್ತು ಹೆಚ್ಚಾಗಿ ಮಿಲಿಟರಿ ಮತ್ತು ಪೊಲೀಸರನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನಿ ತಾಲಿಬಾನ್ ಮೇಲೆ ಅನುಮಾನ ಬೀಳುವ ಸಾಧ್ಯತೆಯಿದೆ.

ಉತ್ತರ ವಜಿರಿಸ್ತಾನದಲ್ಲಿ ಈ ದಾಳಿ ನಡೆದಿದ್ದು, ಗಾಯಗೊಂಡವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿಯೂ ಸಹ ಟ್ಯಾಂಕ್ ಜಿಲ್ಲೆಯಲ್ಲಿ ಮಿಲಿಟರಿ ಬೆಂಗಾವಲು ಪಡೆಗೆ ರಿಮೋಟ್ ನಿಯಂತ್ರಿತ ಬಾಂಬ್ ಸಿಡಿದಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಇದನ್ನೂ ಓದಿ: ಪಾಕಿಸ್ತಾನದ ನೆಲದಲ್ಲಿ ಉಗ್ರವಾದದ ವಿರುದ್ಧ ಗುಡುಗಿದ ಜೈಶಂಕರ್ 

ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಉತ್ತರ ವಜಿರಿಸ್ತಾನ್‌ನ ಮೀರ್ ಅಲಿ ಪ್ರದೇಶದಲ್ಲಿ ಕಾರ್ ಬಾಂಬ್ ಸ್ಫೋಟ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿ ಅಮ್ಜದ್ ಖಾನಂದ್ ಹೇಳಿದ್ದಾರೆ. ಈ ದಾಳಿಯಲ್ಲಿ ಗಾಯಗೊಂಡವರ ಸ್ಥಿತಿ ಗಂಭೀರವಾಗಿದೆ. ಆಂತರಿಕ ಸಚಿವ ಮೊಹ್ಸಿನ್ ನಖ್ವಿ ಈ ದಾಳಿಯನ್ನು ಖಂಡಿಸಿದ್ದಾರೆ ಮತ್ತು ಸಂತ್ರಸ್ತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.

ಅಫ್ಘಾನಿಸ್ತಾನದ ಗಡಿಯಲ್ಲಿರುವ ಉತ್ತರ ವಜೀರಿಸ್ತಾನ್ ಬುಡಕಟ್ಟು ಜಿಲ್ಲೆಯ ಮೀರ್ ಅಲಿ ತಹಸಿಲ್‌ನಲ್ಲಿರುವ ಅಸ್ಲಾಮ್ ಚೆಕ್ ಪೋಸ್ಟ್‌ನಲ್ಲಿ ಈ ಸ್ಫೋಟ ಸಂಭವಿಸಿದೆ. ಈ ಸ್ಫೋಟದಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಮಿರಾನ್ ಶಾ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ

2021ರಲ್ಲಿ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಧಿಕಾರಕ್ಕೆ ಮರಳಿದ ನಂತರ ಪಾಕಿಸ್ತಾನವು ಭಯೋತ್ಪಾದನೆಯ ಉಲ್ಬಣವನ್ನು ಅನುಭವಿಸಿದೆ. ಹೆಚ್ಚಿನ ಭಯೋತ್ಪಾದಕ ಘಟನೆಗಳು ನೆರೆಯ ರಾಷ್ಟ್ರವಾದ ಖೈಬರ್ ಪಖ್ತುಂಕ್ವಾ ಮತ್ತು ಬಲೂಚಿಸ್ತಾನ್ ಗಡಿಯಲ್ಲಿರುವ ಪ್ರಾಂತ್ಯಗಳಲ್ಲಿ ವರದಿಯಾಗಿದೆ. ಈ ತಿಂಗಳು ಉತ್ತರ ವಜಿರಿಸ್ತಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಸುಮಾರು ಒಂದು ಡಜನ್ ಉಗ್ರರನ್ನು ಹೊಡೆದುರುಳಿಸಲಾಗಿದೆ. ಈ ತಿಂಗಳ ಆರಂಭದಲ್ಲಿ ಸೆಂಟರ್ ಫಾರ್ ರಿಸರ್ಚ್ ಅಂಡ್ ಸೆಕ್ಯುರಿಟಿ ಸ್ಟಡೀಸ್ (CRSS) ಥಿಂಕ್ ಟ್ಯಾಂಕ್ ಪ್ರಕಟಿಸಿದ ವರದಿಯ ಪ್ರಕಾರ, 2024ರ ಮೂರನೇ ತ್ರೈಮಾಸಿಕದಲ್ಲಿ ಭಯೋತ್ಪಾದಕ ಹಿಂಸಾಚಾರ ಮತ್ತು ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳ ಸಾವು-ನೋವುಗಳಲ್ಲಿ ತೀವ್ರ ಹೆಚ್ಚಳ ಕಂಡುಬಂದಿದೆ ಮತ್ತು ಹಿಂಸಾಚಾರದಲ್ಲಿ ಶೇ. 90ರಷ್ಟು ಏರಿಕೆಯಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ