ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ; 8 ಜನ ಸಾವು

ಪೇಶಾವರದ ಚೆಕ್‌ಪಾಯಿಂಟ್‌ನಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 8 ಜನ ಪಾಕಿಸ್ತಾನಿ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ; 8 ಜನ ಸಾವು
ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ

Updated on: Oct 26, 2024 | 7:04 PM

ಪೇಶಾವರ: ಪಾಕಿಸ್ತಾನ ದೇಶದ ವಾಯುವ್ಯ ಭಾಗದಲ್ಲಿ ಚೆಕ್‌ಪಾಯಿಂಟ್‌ನಲ್ಲಿ ನಡೆದ ಆತ್ಮಹತ್ಯಾ ದಾಳಿಯಲ್ಲಿ 8 ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ, ಐವರು ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನಿ ಪೊಲೀಸರು ಹೇಳಿದ್ದಾರೆ. ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಕಾರ್ಯ ನಿರ್ವಹಿಸುವ ಮತ್ತು ಹೆಚ್ಚಾಗಿ ಮಿಲಿಟರಿ ಮತ್ತು ಪೊಲೀಸರನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನಿ ತಾಲಿಬಾನ್ ಮೇಲೆ ಅನುಮಾನ ಬೀಳುವ ಸಾಧ್ಯತೆಯಿದೆ.

ಉತ್ತರ ವಜಿರಿಸ್ತಾನದಲ್ಲಿ ಈ ದಾಳಿ ನಡೆದಿದ್ದು, ಗಾಯಗೊಂಡವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿಯೂ ಸಹ ಟ್ಯಾಂಕ್ ಜಿಲ್ಲೆಯಲ್ಲಿ ಮಿಲಿಟರಿ ಬೆಂಗಾವಲು ಪಡೆಗೆ ರಿಮೋಟ್ ನಿಯಂತ್ರಿತ ಬಾಂಬ್ ಸಿಡಿದಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಇದನ್ನೂ ಓದಿ: ಪಾಕಿಸ್ತಾನದ ನೆಲದಲ್ಲಿ ಉಗ್ರವಾದದ ವಿರುದ್ಧ ಗುಡುಗಿದ ಜೈಶಂಕರ್ 

ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಉತ್ತರ ವಜಿರಿಸ್ತಾನ್‌ನ ಮೀರ್ ಅಲಿ ಪ್ರದೇಶದಲ್ಲಿ ಕಾರ್ ಬಾಂಬ್ ಸ್ಫೋಟ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿ ಅಮ್ಜದ್ ಖಾನಂದ್ ಹೇಳಿದ್ದಾರೆ. ಈ ದಾಳಿಯಲ್ಲಿ ಗಾಯಗೊಂಡವರ ಸ್ಥಿತಿ ಗಂಭೀರವಾಗಿದೆ. ಆಂತರಿಕ ಸಚಿವ ಮೊಹ್ಸಿನ್ ನಖ್ವಿ ಈ ದಾಳಿಯನ್ನು ಖಂಡಿಸಿದ್ದಾರೆ ಮತ್ತು ಸಂತ್ರಸ್ತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.

ಅಫ್ಘಾನಿಸ್ತಾನದ ಗಡಿಯಲ್ಲಿರುವ ಉತ್ತರ ವಜೀರಿಸ್ತಾನ್ ಬುಡಕಟ್ಟು ಜಿಲ್ಲೆಯ ಮೀರ್ ಅಲಿ ತಹಸಿಲ್‌ನಲ್ಲಿರುವ ಅಸ್ಲಾಮ್ ಚೆಕ್ ಪೋಸ್ಟ್‌ನಲ್ಲಿ ಈ ಸ್ಫೋಟ ಸಂಭವಿಸಿದೆ. ಈ ಸ್ಫೋಟದಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಮಿರಾನ್ ಶಾ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ

2021ರಲ್ಲಿ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಧಿಕಾರಕ್ಕೆ ಮರಳಿದ ನಂತರ ಪಾಕಿಸ್ತಾನವು ಭಯೋತ್ಪಾದನೆಯ ಉಲ್ಬಣವನ್ನು ಅನುಭವಿಸಿದೆ. ಹೆಚ್ಚಿನ ಭಯೋತ್ಪಾದಕ ಘಟನೆಗಳು ನೆರೆಯ ರಾಷ್ಟ್ರವಾದ ಖೈಬರ್ ಪಖ್ತುಂಕ್ವಾ ಮತ್ತು ಬಲೂಚಿಸ್ತಾನ್ ಗಡಿಯಲ್ಲಿರುವ ಪ್ರಾಂತ್ಯಗಳಲ್ಲಿ ವರದಿಯಾಗಿದೆ. ಈ ತಿಂಗಳು ಉತ್ತರ ವಜಿರಿಸ್ತಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಸುಮಾರು ಒಂದು ಡಜನ್ ಉಗ್ರರನ್ನು ಹೊಡೆದುರುಳಿಸಲಾಗಿದೆ. ಈ ತಿಂಗಳ ಆರಂಭದಲ್ಲಿ ಸೆಂಟರ್ ಫಾರ್ ರಿಸರ್ಚ್ ಅಂಡ್ ಸೆಕ್ಯುರಿಟಿ ಸ್ಟಡೀಸ್ (CRSS) ಥಿಂಕ್ ಟ್ಯಾಂಕ್ ಪ್ರಕಟಿಸಿದ ವರದಿಯ ಪ್ರಕಾರ, 2024ರ ಮೂರನೇ ತ್ರೈಮಾಸಿಕದಲ್ಲಿ ಭಯೋತ್ಪಾದಕ ಹಿಂಸಾಚಾರ ಮತ್ತು ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳ ಸಾವು-ನೋವುಗಳಲ್ಲಿ ತೀವ್ರ ಹೆಚ್ಚಳ ಕಂಡುಬಂದಿದೆ ಮತ್ತು ಹಿಂಸಾಚಾರದಲ್ಲಿ ಶೇ. 90ರಷ್ಟು ಏರಿಕೆಯಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow Us