AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜಮ್ಮು ಕಾಶ್ಮೀರ ಭಾರತದ ಪ್ರಮುಖ ಭಾಗ’ ಎಂದ ಅಮೆರಿಕಕ್ಕೆ ಪಾಕಿಸ್ತಾನದಿಂದ ಸಮನ್ಸ್!

ಭಾರತದಲ್ಲಿನ ಅಮೆರಿಕ ರಾಯಭಾರಿ ಸೆರ್ಗಿಯೋ ಗೋರ್ ಅವರು ಜಮ್ಮು ಮತ್ತು ಕಾಶ್ಮೀರ ಭೇಟಿಯ ವೇಳೆ ನೀಡಿದ ಹೇಳಿಕೆಯನ್ನು ಖಂಡಿಸಿ, ಪಾಕಿಸ್ತಾನವು ಇಂದು ಇಸ್ಲಮಾಬಾದ್‌ನಲ್ಲಿರುವ ಅಮೆರಿಕದ ಹಿರಿಯ ರಾಯಭಾರಿಗೆ ಸಮನ್ಸ್ ಜಾರಿ ಮಾಡಿದೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಪಾಕಿಸ್ತಾನದ ವಿದೇಶಾಂಗ ಸಚಿವಾಲಯವು, ಇಸ್ಲಾಮಾಬಾದ್‌ನಲ್ಲಿರುವ ಅಮೆರಿಕ ರಾಯಭಾರಿಯನ್ನು ಕರೆಸಿ ಗೋರ್ ಅವರ ಹೇಳಿಕೆ ವಿರುದ್ಧ "ತೀವ್ರ ಪ್ರತಿಭಟನೆ" ದಾಖಲಿಸಲಾಗಿದೆ ಎಂದು ತಿಳಿಸಿದೆ.

'ಜಮ್ಮು ಕಾಶ್ಮೀರ ಭಾರತದ ಪ್ರಮುಖ ಭಾಗ' ಎಂದ ಅಮೆರಿಕಕ್ಕೆ ಪಾಕಿಸ್ತಾನದಿಂದ ಸಮನ್ಸ್!
Omar Abdullak And Sergio GorImage Credit source: PTI
ಸುಷ್ಮಾ ಚಕ್ರೆ
|

Updated on:Aug 19, 2026 | 11:32 PM

Share

ಇಸ್ಲಮಾಬಾದ್, ಆಗಸ್ಟ್ 19: ಭಾರತದಲ್ಲಿನ ಅಮೆರಿಕ ರಾಯಭಾರಿ ಸೆರ್ಗಿಯೋ ಗೋರ್ ಜಮ್ಮು ಮತ್ತು ಕಾಶ್ಮೀರವನ್ನು (Jammu and Kashmir) ‘ಭಾರತದ ಪ್ರಮುಖ ಭಾಗ’ ಎಂದು ಬಣ್ಣಿಸಿರುವುದು ಪಾಕಿಸ್ತಾನಕ್ಕೆ ತೀವ್ರ ಕಳವಳ ಮೂಡಿಸಿದೆ. ಸೆರ್ಗಿಯೋ ಗೋರ್ ಅವರ ಈ ಹೇಳಿಕೆ “ವಾಸ್ತವಕ್ಕೆ ದೂರವಾದದ್ದು” ಎಂದು ಕಿಡಿಕಾರಿರುವ ಪಾಕಿಸ್ತಾನ, ತನ್ನ ಆಕ್ಷೇಪವನ್ನು ದಾಖಲಿಸಲು ಇಸ್ಲಮಾಬಾದ್‌ನಲ್ಲಿರುವ ಅಮೆರಿಕದ ಹಿರಿಯ ರಾಯಭಾರಿಗೆ ಸಮನ್ಸ್ ಜಾರಿ ಮಾಡಿದೆ.

ಅಮೆರಿಕದ ರಾಯಭಾರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಜಮ್ಮು-ಕಾಶ್ಮೀರಕ್ಕೆ 2 ದಿನಗಳ ಭೇಟಿ ನೀಡಿದ್ದ ಸೆರ್ಗಿಯೋ ಗೋರ್, ಶ್ರೀನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುವಾಗ ಈ ಮಹತ್ವದ ಹೇಳಿಕೆ ನೀಡಿದ್ದರು. ಜಮ್ಮು-ಕಾಶ್ಮೀರ ಭೇಟಿಯ ವೇಳೆ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರನ್ನು ಭೇಟಿಯಾದ ನಂತರ ಮಾತನಾಡಿದ್ದ ಸೆರ್ಗಿಯೋ ಗೋರ್, “ಜಮ್ಮು ಮತ್ತು ಕಾಶ್ಮೀರ ಭಾರತದ ಅತ್ಯಂತ ಪ್ರಮುಖ ಭಾಗವಾಗಿದೆ. ನಾನು ಮೊದಲ ಬಾರಿಗೆ ಇಲ್ಲಿಗೆ ಭೇಟಿ ನೀಡುತ್ತಿದ್ದೇನೆ. ಪ್ರಕೃತಿ ಸೌಂದರ್ಯದಿಂದ ಕಂಗೊಳಿಸುವ ಈ ಪ್ರದೇಶಕ್ಕೆ ಬಂದಿರುವುದು ಸಂತಸ ತಂದಿದೆ” ಎಂದು ಹೇಳಿದ್ದರು. ಅಲ್ಲದೆ, ಜಮ್ಮು-ಕಾಶ್ಮೀರದಲ್ಲಿ ಭದ್ರತಾ ವಾತಾವರಣ ಸುಧಾರಿಸಿರುವುದನ್ನು ಶ್ಲಾಘಿಸಿದ್ದ ಅವರು, ಪ್ರಸ್ತುತ ಜಾರಿಯಲ್ಲಿರುವ ಅಮೆರಿಕದ ಪ್ರಯಾಣ ಸಲಹೆಗಳನ್ನು ಸಡಿಲಗೊಳಿಸುವ ಸುಳಿವು ನೀಡಿದ್ದರು.

ಇದನ್ನೂ ಓದಿ: ‘ಜಮ್ಮು ಕಾಶ್ಮೀರ ಭಾರತದ ಮುಖ್ಯ ಭಾಗ’; ಐತಿಹಾಸಿಕ ಭೇಟಿ ವೇಳೆ ಅಮೆರಿಕ ರಾಯಭಾರಿ ಸೆರ್ಗಿಯೋ ಮಹತ್ವದ ಹೇಳಿಕೆ

ಪಾಕಿಸ್ತಾನದ ತೀವ್ರ ಆಕ್ಷೇಪ:

ಸೆರ್ಗಿಯೋ ಗೋರ್ ಅವರ ಹೇಳಿಕೆ ಹೊರಬೀಳುತ್ತಿದ್ದಂತೆಯೇ ಪಾಕಿಸ್ತಾನದ ವಿದೇಶಾಂಗ ಸಚಿವಾಲಯವು ಇಸ್ಲಮಾಬಾದ್‌ನಲ್ಲಿರುವ ಅಮೆರಿಕದ ಹಿರಿಯ ರಾಜತಾಂತ್ರಿಕ ಅಧಿಕಾರಿಯನ್ನು ಕರೆಸಿ ಆಕ್ಷೇಪ ದಾಖಲಿಸಿದೆ. ಜಮ್ಮು ಮತ್ತು ಕಾಶ್ಮೀರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿವಾದಿತ ಪ್ರದೇಶವಾಗಿದ್ದು, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ (UNSC) ನಿರ್ಣಯಗಳಿಗೆ ಬದ್ಧವಾಗಿ ಇತ್ಯರ್ಥವಾಗಬೇಕಿದೆ ಎಂದು ಪಾಕಿಸ್ತಾನ ವಾದಿಸಿದೆ.

ಜಮ್ಮು ಮತ್ತು ಕಾಶ್ಮೀರವು ಭಾರತದ ಅವಿಭಾಜ್ಯ ಅಂಗ ಎಂಬುದನ್ನು ಅಮೆರಿಕದ ಉನ್ನತ ರಾಯಭಾರಿಯೊಬ್ಬರು ಬಹಿರಂಗವಾಗಿ ಪುನರುಚ್ಚರಿಸಿರುವುದು ಭಾರತದ ರಾಜತಾಂತ್ರಿಕ ನಿಲುವಿಗೆ ದೊರೆತ ದೊಡ್ಡ ಬೆಂಬಲವೆಂದು ವಿಶ್ಲೇಷಿಸಲಾಗಿದೆ. ಅಮೆರಿಕ ಜಮ್ಮು ಕಾಶ್ಮೀರದ ಪ್ರಯಾಣದ ಎಚ್ಚರಿಕೆಯನ್ನು ಸಡಿಲಗೊಳಿಸಿದರೆ ಈ ಪ್ರದೇಶದಲ್ಲಿ ವಿದೇಶಿ ಹೂಡಿಕೆ ಹಾಗೂ ಪ್ರವಾಸೋದ್ಯಮಕ್ಕೆ ಮತ್ತಷ್ಟು ಉತ್ತೇಜನ ಸಿಗಲಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 11:27 pm, Wed, 19 August 26

Follow Us
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?