AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಕ್ಕಟ್ಟಿನ ಕುರಿತು ಸುಪ್ರೀಂಕೋರ್ಟ್ ಸಮಂಜಸ ಆದೇಶ ನೀಡಲಿದೆ ಎಂದ ಪಾಕ್ ಸಿಜೆಪಿ; ಪಿಟಿಐ ಸಭೆ ಕರೆದ ಇಮ್ರಾನ್ ಖಾನ್

ಮಾಧ್ಯಮ ವರದಿಯ ಪ್ರಕಾರ ಪ್ರಸ್ತುತ ಪರಿಸ್ಥಿತಿಯ ಕಾನೂನುಬದ್ಧತೆಯನ್ನು ನ್ಯಾಯಾಲಯವು ಪರಿಗಣಿಸುತ್ತದೆ ಅದು "ಸಮಂಜಸವಾದ ಆದೇಶವನ್ನು" ನೀಡುತ್ತದೆ ಎಂದು ಪಾಕಿಸ್ತಾನದ ಮುಖ್ಯ ನ್ಯಾಯಮೂರ್ತಿ ಉಮರ್ ಅಟಾ ಬಂಡಿಯಲ್ ಹೇಳಿದ್ದಾರೆ.

ಬಿಕ್ಕಟ್ಟಿನ ಕುರಿತು ಸುಪ್ರೀಂಕೋರ್ಟ್ ಸಮಂಜಸ ಆದೇಶ ನೀಡಲಿದೆ ಎಂದ ಪಾಕ್ ಸಿಜೆಪಿ; ಪಿಟಿಐ ಸಭೆ ಕರೆದ ಇಮ್ರಾನ್ ಖಾನ್
ಇಸ್ಲಾಮಾಬಾದ್​​ನಲ್ಲಿ ಕಂಡ ಪೋಸ್ಟರ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Apr 04, 2022 | 4:32 PM

Share

ಇಸ್ಲಾಮಾಬಾದ್: ರಾಷ್ಟ್ರೀಯ ಅಸೆಂಬ್ಲಿ (National Assembly) ಉಪ ಸ್ಪೀಕರ್ ಖಾಸಿಮ್ ಸೂರಿ ಅವರು ಪ್ರಧಾನಿ ಇಮ್ರಾನ್ ಖಾನ್ (Imran Khan) ವಿರುದ್ಧ ಅವಿಶ್ವಾಸ ನಿರ್ಣಯವನ್ನು ವಜಾಗೊಳಿಸಿದ ನಂತರ ಮತ್ತು ಸ್ಥಳೀಯ ಸಂಸತ್ತನ್ನು ವಿಸರ್ಜನೆ ಮಾಡಿದ ನಂತರ ನಡೆಯುತ್ತಿರುವ ರಾಜಕೀಯ ಅಡೆತಡೆಗಳ ಕುರಿತು ಪಾಕಿಸ್ತಾನದ ಸುಪ್ರೀಂಕೋರ್ಟ್ (Supreme Court) ಸೋಮವಾರ ಸುಮೊಟೊ ವಿಚಾರಣೆಯನ್ನು ನಡೆಸಿದೆ. ಮಾಧ್ಯಮ ವರದಿಯ ಪ್ರಕಾರ, ಪ್ರಸ್ತುತ ಪರಿಸ್ಥಿತಿಯ ಕಾನೂನುಬದ್ಧತೆಯನ್ನು ನ್ಯಾಯಾಲಯವು ಪರಿಗಣಿಸುತ್ತದೆ ಅದು “ಸಮಂಜಸವಾದ ಆದೇಶವನ್ನು” ನೀಡುತ್ತದೆ ಎಂದು ಪಾಕಿಸ್ತಾನದ ಮುಖ್ಯ ನ್ಯಾಯಮೂರ್ತಿ (CJP) ಉಮರ್ ಅಟಾ ಬಂಡಿಯಲ್ ಹೇಳಿದ್ದಾರೆ. ಮತ್ತೊಂದು ಬೆಳವಣಿಗೆಯಲ್ಲಿ ಖಾನ್ ಮಂಗಳವಾರ ಪಿಟಿಐ ಸಂಸದೀಯ ಮಂಡಳಿಯ ಸಭೆಯನ್ನು ಕರೆದಿದ್ದಾರೆ. ಪಾಕಿಸ್ತಾನದ ‘ದಿ ನೇಷನ್’ ಅನ್ನು ಉಲ್ಲೇಖಿಸಿ ಎಎನ್ಐ ವರದಿ ಮಾಡಿದ್ದು, ಮುಂದಿನ ಚುನಾವಣೆಗೆ ಟಿಕೆಟ್ ಹಂಚಿಕೆ ಕುರಿತು ಚರ್ಚಿಸಬಹುದಾದ ಸಂಸದೀಯ ಮಂಡಳಿಯ ಸಭೆಯ ಅಧ್ಯಕ್ಷತೆಯನ್ನು ಖಾನ್ ವಹಿಸಲಿದ್ದಾರೆ ಎಂದು ಹೇಳಿದೆ. ಸಿಜೆಪಿ, ನ್ಯಾಯಮೂರ್ತಿ ಇಜಾಜುಲ್ ಅಹ್ಸನ್, ನ್ಯಾಯಮೂರ್ತಿ ಮಜರ್ ಆಲಂ ಖಾನ್ ಮಿಯಾಂಖೇಲ್, ನ್ಯಾಯಮೂರ್ತಿ ಮುನಿಬ್ ಅಖ್ತರ್ ಮತ್ತು ನ್ಯಾಯಮೂರ್ತಿ ಜಮಾಲ್ ಖಾನ್ ಮಂಡೋಖೈಲ್ ಅವರನ್ನೊಳಗೊಂಡ ಅಲರ್ಜರ್ ಪೀಠವು ವಿಚಾರಣೆ ನಡೆಸುತ್ತಿದೆ.

ಸಂಸತ್ತಿನ 342 ಸದಸ್ಯರ ಕೆಳಮನೆಯಲ್ಲಿ ಬಹುಮತವನ್ನು ಕಳೆದುಕೊಂಡಿದ್ದ ಪ್ರಧಾನಿ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ಡೆಪ್ಯುಟಿ ಸ್ಪೀಕರ್ ಖಾಸಿಮ್ ಸೂರಿ ತಿರಸ್ಕರಿಸಿದ ಕೆಲವೇ ನಿಮಿಷಗಳಲ್ಲಿ, ಪ್ರಧಾನಿ ಖಾನ್ ಅವರ ಸಲಹೆಯ ಮೇರೆಗೆ ಅಧ್ಯಕ್ಷ ಆರಿಫ್ ಅಲ್ವಿ ರಾಷ್ಟ್ರೀಯ ಅಸೆಂಬ್ಲಿಯನ್ನು (NA) ವಿಸರ್ಜಿಸಿದ್ದರು.

ನಿಯೋಜಿತ ಪ್ರಧಾನಿ ಹುದ್ದೆಗೆ ಪಿಟಿಐ ಅಧ್ಯಕ್ಷರಿಗೆ ಎರಡು ಹೆಸರುಗಳನ್ನು ಕಳುಹಿಸಿದೆ: ಫವಾದ್ ಚೌಧರಿ “ಪಿಟಿಐ ಅಧ್ಯಕ್ಷ ಆರಿಫ್ ಅಲ್ವಿ ಅವರಿಗೆ ಹಂಗಾಮಿ ಪ್ರಧಾನಿ ಹುದ್ದೆಗೆ ಎರಡು ಹೆಸರುಗಳನ್ನು ಕಳುಹಿಸಿದೆ” ಎಂದು ಕೇಂದ್ರ ಸಚಿವ ಫವಾದ್ ಚೌಧರಿ ಹೇಳಿದ್ದಾರೆ. ವಿಪಕ್ಷವು 7 ದಿನಗಳಲ್ಲಿ ಹೆಸರನ್ನು ಅಂತಿಮಗೊಳಿಸದಿದ್ದರೆ, ಪಿಟಿಐ ಸೂಚಿಸಿದ ಹೆಸರುಗಳಿಂದಲೇ ಉಸ್ತುವಾರಿ ಪ್ರಧಾನ ಮಂತ್ರಿ ಆಗುತ್ತಾರೆ ಎಂದು ಪಾಕಿಸ್ತಾನದ ARY ನ್ಯೂಸ್ ವರದಿ ಮಾಡಿದೆ.

ಇದನ್ನೂ ಓದಿ: ಇಮ್ರಾನ್ ಖಾನ್ ಸದ್ಯಕ್ಕೆ ಸೇಫ್; ಅವಿಶ್ವಾಸ ನಿರ್ಣಯ ವಜಾಗೊಳಿಸಿ ಏಪ್ರಿಲ್ 25ರವರೆಗೆ ಪಾಕಿಸ್ತಾನದ ಸಂಸತ್ ಕಲಾಪ ಮುಂದೂಡಿದ ಸ್ಪೀಕರ್

Published On - 4:31 pm, Mon, 4 April 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ