ಭಾರತದೊಂದಿಗಿನ ಉದ್ವಿಗ್ನತೆ ಕಡಿಮೆ ಮಾಡಲು ರಷ್ಯಾದ ಮೊರೆ ಹೋದ ಪಾಕ್

ಭಾರತದೊಂದಿಗಿನ ಸಂಬಂಧವನ್ನು ಸರಿಪಡಿಸಿಕೊಳ್ಳಲು ಪಾಕಿಸ್ತಾನವು ರಷ್ಯಾದ ಸಹಾಯ ಕೋರಿದೆ. ಇಬ್ಬರ ನಡುವಿನ ಉದ್ವಿಗ್ನತೆ ಕಡಿಮೆ ಮಾಡಲು ಮಧ್ಯಸ್ಥಿಕೆವಹಿಸಬೇಕೆಂದು ಮನವಿ ಮಾಡಿದೆ. 1966 ರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಸಶಸ್ತ್ರ ಸಂಘರ್ಷವನ್ನು ಕೊನೆಗೊಳಿಸಲು ಸಹಾಯ ಮಾಡಿದ ತಾಷ್ಕೆಂಟ್ ಮಾತುಕತೆಗಳ ಸಮಯದಲ್ಲಿ ರಷ್ಯಾ ಮಾಡಿದಂತೆ, ಈ ದ್ವಿಮುಖ ಸಂಬಂಧವನ್ನು ಬಳಸಿಕೊಂಡು ಮಧ್ಯಸ್ಥಿಕೆವಹಿಸಬಹುದು ಎಂದು ಆಶಿಸಿದರು.

ಭಾರತದೊಂದಿಗಿನ ಉದ್ವಿಗ್ನತೆ ಕಡಿಮೆ ಮಾಡಲು ರಷ್ಯಾದ ಮೊರೆ ಹೋದ ಪಾಕ್
ರಷ್ಯಾದ ಮಾಸ್ಕೋದಲ್ಲಿರುವ ಪಾಕಿಸ್ತಾನ ರಾಯಭಾರಿ ಮೊಹಮ್ಮದ್ ಖಾಲಿದ್ ಜಮಾಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಪರಿಸ್ಥಿತಿಯನ್ನು ಶಮನಗೊಳಿಸಲು ರಷ್ಯಾದ ಸಹಾಯವನ್ನು ಕೋರಿದ್ದರು. 1966ರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಸಶಸ್ತ್ರ ಸಂಘರ್ಷವನ್ನು ಕೊನೆಗೊಳಿಸಲು ಸಹಾಯ ಮಾಡಿದ ತಾಷ್ಕೆಂಟ್ ಮಾತುಕತೆಗಳ ಸಮಯದಲ್ಲಿ ರಷ್ಯಾ ಮಾಡಿದಂತೆ ಈ ದ್ವಿಮುಖ ಸಂಬಂಧವನ್ನು ಬಳಸಿಕೊಂಡು ಮಧ್ಯಸ್ಥಿಕೆ ವಹಿಸಬಹುದು ಎಂದು ಅವರ ಮನವಿ ಮಾಡಿದ್ದಾರೆ.

Updated on: May 05, 2025 | 9:29 AM

ಇಸ್ಲಾಮಾಬಾದ್, ಮೇ 05: ಪಹಲ್ಗಾಮ್​(Pahalgam)ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 26 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದಾದ ಬಳಿಕ ಪಾಕಿಸ್ತಾನ ಹಾಗೂ ಭಾರತದ ನಡುವೆ ಉದ್ವಿಗ್ನತೆ ಉಂಟಾಗಿದೆ. ಅದನ್ನು ಶಮನ ಮಾಡಲು ಪಾಕಿಸ್ತಾನವು ರಷ್ಯಾದ ಮೊರೆ ಹೋಗಿದೆ. ಉದ್ವಿಗ್ನತೆಯನ್ನು ಶಮನಗೊಳಿಸಲು ಪಾಕಿಸ್ತಾನವು ರಷ್ಯಾದ ರಾಜತಾಂತ್ರಿಕ ಹಸ್ತಕ್ಷೇಪವನ್ನು ಕೋರಿದೆ.

ಮಾಸ್ಕೋದಲ್ಲಿರುವ ಪಾಕಿಸ್ತಾನ ರಾಯಭಾರಿ ಮೊಹಮ್ಮದ್ ಖಾಲಿದ್ ಜಮಾಲಿ ಅವರು ಪರಿಸ್ಥಿತಿಯನ್ನು ಶಮನಗೊಳಿಸಲು ರಷ್ಯಾದ ಸಹಾಯವನ್ನು ಔಪಚಾರಿಕವಾಗಿ ಕೋರಿದ್ದಾರೆ. 1966 ರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಸಶಸ್ತ್ರ ಸಂಘರ್ಷವನ್ನು ಕೊನೆಗೊಳಿಸಲು ಸಹಾಯ ಮಾಡಿದ ತಾಷ್ಕೆಂಟ್ ಮಾತುಕತೆಗಳ ಸಮಯದಲ್ಲಿ ರಷ್ಯಾ ಮಾಡಿದಂತೆ, ಈ ದ್ವಿಮುಖ ಸಂಬಂಧವನ್ನು ಬಳಸಿಕೊಂಡು ಮಧ್ಯಸ್ಥಿಕೆವಹಿಸಬಹುದು ಎಂದು ಆಶಿಸಿದರು.

ಪಾಕಿಸ್ತಾನದ ಉಪ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಇಶಾಕ್ ದಾರ್ ಅವರು ಲಾವ್ರೊವ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದಾರೆ ಎಂದು ಪಾಕಿಸ್ತಾನ ವಿದೇಶಾಂಗ ಕಚೇರಿಯ ಹೇಳಿಕೆ ತಿಳಿಸಿದೆ. ಲಾವ್ರೊವ್ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದರು ಮತ್ತು ಸಮಸ್ಯೆಗಳನ್ನು ಪರಿಹರಿಸಲು ರಾಜತಾಂತ್ರಿಕತೆಯ ಮಹತ್ವವನ್ನು ಒತ್ತಿ ಹೇಳಿದರು. ಎರಡೂ ಕಡೆಯವರು ಸಂಯಮದಿಂದ ವರ್ತಿಸಬೇಕು ಮತ್ತು ಉದ್ವಿಗ್ನತೆಯನ್ನು ತಪ್ಪಿಸಬೇಕು ಎಂದರು.

ಮತ್ತಷ್ಟು ಓದಿ: ಭಾರತಕ್ಕೆ ಹೆದರಿ ಮಧ್ಯರಾತ್ರಿಯಲ್ಲಿ ನಿರ್ಧಾರ ತೆಗೆದುಕೊಳ್ಳುತ್ತಿದೆ ಪಾಕ್, ನಾಳೆ ವಿಶೇಷ ಅಧಿವೇಶನ

2019 ರ ಪುಲ್ವಾಮಾ ದಾಳಿಯ ನಂತರ ಕಣಿವೆಯಲ್ಲಿ ನಡೆದ ಅತ್ಯಂತ ಭೀಕರ ದಾಳಿ ಪಹಲ್ಗಾಮ್​ನಲ್ಲಿ ನಡೆದಿದ್ದು, 26 ಮಂದಿ ಪ್ರಾಣ ಕಳೆದುಕೊಂಡಿದ್ದರು. ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ಮತ್ತಷ್ಟು ಹಳಸಿದೆ.

ಭಾರತವು ಎರಡು ದೇಶಗಳ ನಡುವಿನ ನೀರು ಹಂಚಿಕೆಯನ್ನು ನಿಯಂತ್ರಿಸುವ 1960 ರ ಸಿಂಧೂ ಒಪ್ಪಂದವನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿತು. ಇದಕ್ಕೂ ಮೊದಲು ಏಪ್ರಿಲ್ 24 ರಂದು, ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕರು ಮತ್ತು ಅವರ ಬೆಂಬಲಿಗರನ್ನು ಶಿಕ್ಷಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಪ್ರತಿಜ್ಞೆ ಮಾಡಿದರು.

ಪಹಲ್ಗಾಮ್ ಭಯೋತ್ಪಾದಕ ದಾಳಿ
2019 ರಲ್ಲಿ 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ನಡೆದ ಅತಿದೊಡ್ಡ ಭಯೋತ್ಪಾದಕ ದಾಳಿಗಳಲ್ಲಿ ಇದು ಒಂದಾಗಿದೆ. ಭಯೋತ್ಪಾದಕ ದಾಳಿಯ ನಂತರ, ಭದ್ರತಾ ಪಡೆಗಳು ಕಾರಣರಾದ ಭಯೋತ್ಪಾದಕರನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ದಾಳಿಯ ನಂತರ ಭದ್ರತೆಯನ್ನು ಹೆಚ್ಚಿಸಲಾಗಿದೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:23 am, Mon, 5 May 25

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us