ಇಷ್ಟಪಟ್ಟವನೊಂದಿಗೆ ಮದುವೆಯಾಗಲು ಒಪ್ಪಲಿಲ್ಲ ಎಂದು ತನ್ನ ಕುಟುಂಬದ 13 ಮಂದಿಯನ್ನು ಕೊಂದ ಯುವತಿ

ತಾನು ಇಷ್ಟಪಟ್ಟ ವ್ಯಕ್ತಿಯೊಂದಿಗೆ ಮದುವೆಯಾಗಲು ಅವಕಾಶ ನೀಡದಿದ್ದಕ್ಕೆ ಯುವತಿಯೊಬ್ಬಳು ತನ್ನ ಕುಟುಂಬದ 13 ಮಂದಿಯನ್ನು ಹತ್ಯೆ ಮಾಡಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದ್ದು, ಯುವತಿ ತನ್ನ ಕುಟುಂಬದ 13 ಸದಸ್ಯರಿಗೆ ಊಟದಲ್ಲಿ ವಿಷ ಬೆರೆಸಿ ಹತ್ಯೆ ಮಾಡಿದ್ದಾಳೆ.

ಇಷ್ಟಪಟ್ಟವನೊಂದಿಗೆ ಮದುವೆಯಾಗಲು ಒಪ್ಪಲಿಲ್ಲ ಎಂದು ತನ್ನ ಕುಟುಂಬದ 13 ಮಂದಿಯನ್ನು ಕೊಂದ ಯುವತಿ
ಪ್ರೀತಿ Image Credit source: Deathwithdignity.org
Follow us
|

Updated on: Oct 08, 2024 | 12:25 PM

ತಾನು ಇಷ್ಟಪಟ್ಟ ವ್ಯಕ್ತಿಯೊಂದಿಗೆ ಮದುವೆಯಾಗಲು ಅವಕಾಶ ನೀಡದಿದ್ದಕ್ಕೆ ಯುವತಿಯೊಬ್ಬಳು ತನ್ನ ಕುಟುಂಬದ 13 ಮಂದಿಯನ್ನು ಹತ್ಯೆ ಮಾಡಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದ್ದು, ಯುವತಿ ತನ್ನ ಕುಟುಂಬದ 13 ಸದಸ್ಯರಿಗೆ ಊಟದಲ್ಲಿ ವಿಷ ಬೆರೆಸಿ ಹತ್ಯೆ ಮಾಡಿದ್ದಾಳೆ.

ಆಕೆ ಹೇಳುವ ಪ್ರಕಾರ ಆಕೆ ಇಷ್ಟಪಟ್ಟವನ್ನು ಮದುವೆಯಾಗಲು ಅವರು ಒಪ್ಪಿರಲಿಲ್ಲ, ಖೈರಪುರ ಸಮೀಪದ ಹೈಬತ್ ಖಾನ್ ಬ್ರೋಹಿ ಗ್ರಾಮದಲ್ಲಿ ಆಗಸ್ಟ್ 19 ರಂದು ಈ ಘಟನೆ ಸಂಭವಿಸಿದೆ. ತನ್ನ ಇಷ್ಟದ ಹುಡುಗನನ್ನು ಮದುವೆಯಾಗಲು ಮನೆಯವರು ಒಪ್ಪದ ಕಾರಣ ಯುವತಿ ಕೋಪಗೊಂಡಿದ್ದಳು. ನಂತರ ತನ್ನ ಪ್ರಿಯಕರನೊಂದಿಗೆ ಸಂಚು ರೂಪಿಸಿ, ಆಕೆಯ ಪೋಷಕರು ಸೇರಿದಂತೆ ಕುಟುಂಬ ಸದಸ್ಯರಿಗೆ ವಿಷ ಉಣಿಸಿದ್ದಾಳೆ.

ಆಹಾರ ಸೇವಿಸಿದ ನಂತರ ಎಲ್ಲಾ 13 ಸದಸ್ಯರು ಅಸ್ವಸ್ಥಗೊಂಡರು ಮತ್ತು ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಎಲ್ಲರೂ ಕೊನೆಯುಸಿರೆಳೆದರು. ಮರಣೋತ್ತರ ಪರೀಕ್ಷೆ ಮಾಡಿದಾಗ ಈ ಜನರು ವಿಷಪೂರಿತ ಆಹಾರದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಇನಾಯತ್ ಶಾ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಅಪ್ರಾಪ್ತ ಬಾಲಕಿಯ ಅಪಹರಿಸಿ ಆ್ಯಸಿಡ್​ ಎರಚಿದ ದುಷ್ಕರ್ಮಿಗಳು

ಪೊಲೀಸರು ಕೂಲಂಕುಷವಾಗಿ ತನಿಖೆ ನಡೆಸಿದಾಗ ಮನೆಯಲ್ಲಿ ರೊಟ್ಟಿ ಮಾಡಲು ಬಳಸುವ ಗೋಧಿ ಹಿಟ್ಟಿಗೆ ಮಗಳು ಮತ್ತು ಆಕೆಯ ಗೆಳೆಯ ವಿಷ ಹಾಕಿರುವುದು ಗೊತ್ತಾಗಿದೆ ಎಂದರು.

ಸಾಕಷ್ಟು ಪ್ರಯತ್ನಗಳ ಹೊರತಾಗಿಯೂ ಆಕೆ ಕುಟುಂಬವು ಇಷ್ಟಪಟ್ಟ ಹುಡುಗನನ್ನು ಮದುವೆಯಾಗಲು ಅವಕಾಶ ಮಾಡಿಕೊಟ್ಟಿರಲಿಲ್ಲ. ಹಾಗಾಗಿ ಗೆಳೆಯನ ಸಹಾಯದಿಂದ ಎಲ್ಲರನ್ನೂ ಹತ್ಯೆ ಮಾಡಿದ್ದಾಳೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಲೋಕಾಯುಕ್ತ ದಾಳಿ, ಹುಮ್ನಾಬಾದ್ ಸಾರಿಗೆ ತನಿಖಾ ಕಚೇರಿ ಸಿಬ್ಬಂದಿಗೆ ಶಾಕ್!
ಲೋಕಾಯುಕ್ತ ದಾಳಿ, ಹುಮ್ನಾಬಾದ್ ಸಾರಿಗೆ ತನಿಖಾ ಕಚೇರಿ ಸಿಬ್ಬಂದಿಗೆ ಶಾಕ್!
ಬಿಗ್ ಬಾಸ್​ನಲ್ಲಿ ದರ್ಶನ್ ವಿಚಾರ ಏಕೆ ಬರಲಿಲ್ಲ?
ಬಿಗ್ ಬಾಸ್​ನಲ್ಲಿ ದರ್ಶನ್ ವಿಚಾರ ಏಕೆ ಬರಲಿಲ್ಲ?
ಕ್ಯಾಪ್ಟನ್​ಗೆ ಲೈನ್ ಹಾಕೋಕೆ ಆರಂಭಿಸಿದ ಜಗದೀಶ್
ಕ್ಯಾಪ್ಟನ್​ಗೆ ಲೈನ್ ಹಾಕೋಕೆ ಆರಂಭಿಸಿದ ಜಗದೀಶ್
ನವರಾತ್ರಿ 6ನೇ ದಿನ ಕಾತ್ಯಾಯಿನಿ ದೇವಿ ಆರಾಧನೆ ಮಹತ್ವ ತಿಳಿಯಿರಿ
ನವರಾತ್ರಿ 6ನೇ ದಿನ ಕಾತ್ಯಾಯಿನಿ ದೇವಿ ಆರಾಧನೆ ಮಹತ್ವ ತಿಳಿಯಿರಿ
ಈ ರಾಶಿಯವರು ಸರ್ಕಾರಿ ಉದ್ಯೋಗದಲ್ಲಿ ಹೆಚ್ಚಿನ‌ ಪ್ರಗತಿ ಕಾಣಲಿದ್ದಾರೆ
ಈ ರಾಶಿಯವರು ಸರ್ಕಾರಿ ಉದ್ಯೋಗದಲ್ಲಿ ಹೆಚ್ಚಿನ‌ ಪ್ರಗತಿ ಕಾಣಲಿದ್ದಾರೆ
45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್