AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ಪಾಕಿಸ್ತಾನ ಗಡಿಯಲ್ಲಿ ಮಗುವಿಗೆ ಜನ್ಮ ನೀಡಿದ ಪಾಕ್​ ಮಹಿಳೆ; ನವಜಾತ ಶಿಶುವಿಗೆ ಬಾರ್ಡರ್​ ಎಂದು ಹೆಸರಿಟ್ಟ ದಂಪತಿ !

ಬಾಲಂ ರಾಮ್​ ಹೊರತಾಗಿ ಇದೇ ಗಡಿಯಲ್ಲಿ ಸಿಲುಕಿರುವ ಲಾಗ್ಯಾ ರಾಮ್​​ ತನ್ನ ಮಗುವಿಗೆ ಭರತ್​ ಎಂದು ನಾಮಕರಣ ಮಾಡಿದ್ದಾರೆ. ಲಾಗ್ಯಾ ರಾಮ್​ ತನ್ನ ಸೋದರನನ್ನು ಭೇಟಿ ಮಾಡಲು 2020ರಲ್ಲಿ ಜೋಧ್​ಪುರಕ್ಕೆ ತೆರಳಿದ್ದರು. ಅಲ್ಲಿಯೇ ಪತ್ನಿ ಮಗುವಿಗೆ ಜನ್ಮ ನೀಡಿದ್ದರು.

ಭಾರತ-ಪಾಕಿಸ್ತಾನ ಗಡಿಯಲ್ಲಿ ಮಗುವಿಗೆ ಜನ್ಮ ನೀಡಿದ ಪಾಕ್​ ಮಹಿಳೆ; ನವಜಾತ ಶಿಶುವಿಗೆ ಬಾರ್ಡರ್​ ಎಂದು ಹೆಸರಿಟ್ಟ ದಂಪತಿ !
ನವಜಾತ ಶಿಶುವಿನೊಂದಿಗೆ ಬಾಲಂ ರಾಮ್​
TV9 Web
| Edited By: |

Updated on: Dec 06, 2021 | 12:10 PM

Share

ಕಳೆದ 70 ದಿನಗಳಿಂದಲೂ ಭಾರತ-ಪಾಕಿಸ್ತಾನ ಅಟ್ಟಾರಿ ಗಡಿಯಲ್ಲಿ ಸಿಲುಕಿರುವ ಪಾಕಿಸ್ತಾನಿ ದಂಪತಿ, ತಮ್ಮ ನವಜಾತ ಶಿಶುವಿಗೆ ‘ಬಾರ್ಡರ್​’ ಎಂದು ಹೆಸರಿಟ್ಟಿದ್ದಾರೆ. ಗಡಿಯಲ್ಲೇ ವಾಸವಾಗಿರುವ ನಿಂಬು ಬಾಯಿ ಮತ್ತು ಬಾಲಂ ರಾಮ್​ ದಂಪತಿಗೆ ಡಿಸೆಂಬರ್​ 2ರಂದು ಮಗು ಜನಿಸಿದೆ. ಪಾಕಿಸ್ತಾನದ ಪಂಜಾಬ್​ ಪ್ರಾಂತ್ಯದ ರಾಜನ್​ಪುರ ಜಿಲ್ಲೆಯವರಾಗಿರುವ ಇವರು, ಸುಮಾರು 97 ಪಾಕಿಸ್ತಾನಿ ಪ್ರಜೆಗಳೊಟ್ಟಿಗೆ ಕಳೆದ 70 ದಿನಗಳಿಂದಲೂ ಇಲ್ಲಿಯೇ ಇದ್ದಾರೆ.  ನಿಂಬು ಬಾಯಿಗೆ ಡಿಸೆಂಬರ್​ 2ರಂದು ಹೆರಿಗೆ ನೋವು ಕಾಣಿಸಿಕೊಂಡಿತ್ತು. ಅಲ್ಲಿನ ಸ್ಥಳೀಯ ಹಳ್ಳಿಗಳ ಮಹಿಳೆಯರೇ ಆಕೆಗೆ ಸಹಾಯ ಮಾಡಿದ್ದರು. ಮಹಿಳೆ ಮತ್ತು ಆಕೆಯ ನವಜಾತ ಶಿಶುವಿಗೆ ವೈದ್ಯಕೀಯ ಸೌಲಭ್ಯವನ್ನೂ ಒದಗಿಸಿಕೊಟ್ಟಿದ್ದರು. 

ಅವರು ಗಡಿಯಲ್ಲಿ ಸಿಲುಕಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಬಾಲಂ ರಾಮ್​, ನಾವು ತೀರ್ಥಯಾತ್ರೆಗಾಗಿ ಭಾರತಕ್ಕೆ ಬಂದಿದ್ದೆವು. ಆದರೆ ಇದೀಗ ವಾಪಸ್​ ಹೋಗಲು ಗಡಿಯ ಬಳಿ ಬಂದರೆ ಒಂದಷ್ಟು ದಾಖಲೆಗಳನ್ನು ಕೇಳುತ್ತಿದ್ದಾರೆ. ಆ ಅಗತ್ಯ ದಾಖಲೆಗಳು ನಮ್ಮ ಬಳಿ ಇಲ್ಲ. ಇಲ್ಲೀಗ ನಾವು 97 ಮಂದಿ ಸಿಲುಕಿದ್ದೇವೆ. ಅದರಲ್ಲಿ 47 ಮಂದಿ ಮಕ್ಕಳೇ ಆಗಿದ್ದಾರೆ. ಅವರಲ್ಲೂ ಆರು ಮಕ್ಕಳು ಒಂದುವರ್ಷಕ್ಕಿಂತಲೂ ಕೆಳಗಿನವು. ಭಾರತದಲ್ಲಿ ಹುಟ್ಟಿವೆ ಎಂದು ತಿಳಿಸಿದ್ದಾರೆ.

ಬಾಲಂ ರಾಮ್​ ಹೊರತಾಗಿ ಇದೇ ಗಡಿಯಲ್ಲಿ ಸಿಲುಕಿರುವ ಲಾಗ್ಯಾ ರಾಮ್​​ ತನ್ನ ಮಗುವಿಗೆ ಭರತ್​ ಎಂದು ನಾಮಕರಣ ಮಾಡಿದ್ದಾರೆ. ಲಾಗ್ಯಾ ರಾಮ್​ ತನ್ನ ಸೋದರನನ್ನು ಭೇಟಿ ಮಾಡಲು 2020ರಲ್ಲಿ ಜೋಧ್​ಪುರಕ್ಕೆ ತೆರಳಿದ್ದರು. ಅಲ್ಲಿಯೇ ಪತ್ನಿ ಮಗುವಿಗೆ ಜನ್ಮ ನೀಡಿದ್ದರು. ಆ ಮಗುವಿಗೆ ಭರತ್ ಎಂದು ಹೆಸರಿಡಲಾಗಿದೆ. ಜೋಧ್​ಪುರದಿಂದ ಅಟ್ಟಾರಿ ಗಡಿಯವರೆಗೆ ಬಂದರೆ ಅವರಿಗೂ ಇನ್ನೂ ಪಾಕ್​ಗೆ ಮರಳಲು ಸಾಧ್ಯವಾಗಲಿಲ್ಲ.  ಇನ್ನೂ ಹಲವರು ಇದೇ ಗಡಿಯ ಅಂತಾರಾಷ್ಟ್ರೀಯ ಚೆಕ್​ಪೋಸ್ಟ್​ ಬಳಿ ಬೀಡುಬಿಟ್ಟಿದ್ದಾರೆ. ಪಾಕಿಸ್ತಾನಿ ರೇಂಜರ್​ಗಳು ಅಗತ್ಯ ದಾಖಲೆ ತೋರಿಸಿದ ವಿನಃ ಯಾರನ್ನೂ ಬಿಡುವುದಿಲ್ಲ ಎನ್ನುತ್ತಿದ್ದಾರೆ. ಕೊರೊನಾ ಕಾರಣಕ್ಕೆ ಗಡಿ ನಿಯಮಗಳಲ್ಲೆ ಇನ್ನಷ್ಟು ಬಿಗಿಯಾಗಿದ್ದು, ಇವರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಇದನ್ನೂ ಓದಿ: ಶಾಲೆ, ಕಾಲೇಜುಗಳಲ್ಲಿ ಕೋವಿಡ್ ಸೋಂಕು ಹೆಚ್ಚಳ ಆತಂಕ ತಂದಿದೆ: ಅಲಾರಂ ಬೆಲ್​​ ಹೊಡೆದ ಶಿಕ್ಷಣ ಸಚಿವ ಬಿ ಸಿ ನಾಗೇಶ್

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ