AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು ಪಾಕಿಸ್ತಾನದಲ್ಲಿದ್ದಿದ್ದರೆ ಇಷ್ಟೊತ್ತಿಗೆ ನಿಮ್ಮನ್ನು ಕಿಡ್ನ್ಯಾಪ್​ ಮಾಡ್ತಿದ್ದೆ, ಕ್ಯಾಬ್ ಡ್ರೈವರ್ ಮಾತು ಕೇಳಿ ಬೆಚ್ಚಿಬಿದ್ದ ಕೆನಡಾ ಮಹಿಳೆ ​

ಪಾಕಿಸ್ತಾನಿ ಕ್ಯಾಬ್ ಚಾಲಕನೊಬ್ಬ ಕೆನಡಾದ ಮಹಿಳಾ ಪ್ರಯಾಣಿಕರೊಬ್ಬರ ಬಳಿ ಒಂದೊಮ್ಮೆ ನೀವು ಪಾಕಿಸ್ತಾನದಲ್ಲಿದ್ದಿದ್ದರೆ ಇಷ್ಟೊತ್ತಿಗೆ ಕಿಡ್ನ್ಯಾಪ್​ ಮಾಡುತ್ತಿದ್ದೆ ಎಂದು ಹೇಳಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ನೀವು ಪಾಕಿಸ್ತಾನದಲ್ಲಿದ್ದಿದ್ದರೆ ಇಷ್ಟೊತ್ತಿಗೆ ನಿಮ್ಮನ್ನು ಕಿಡ್ನ್ಯಾಪ್​ ಮಾಡ್ತಿದ್ದೆ, ಕ್ಯಾಬ್ ಡ್ರೈವರ್ ಮಾತು ಕೇಳಿ ಬೆಚ್ಚಿಬಿದ್ದ ಕೆನಡಾ ಮಹಿಳೆ ​
ಪಾಕಿಸ್ತಾನಿ ಡ್ರೈವರ್
ನಯನಾ ರಾಜೀವ್
|

Updated on: May 15, 2024 | 10:39 AM

Share

ನೀವು ಒಂದೊಮ್ಮೆ ಪಾಕಿಸ್ತಾನ(Pakistan)ದಲ್ಲಿದ್ದಿದ್ದರೆ ಇಷ್ಟೊತ್ತಿಗೆ ನಿಮ್ಮನ್ನು ಕಿಡ್ನ್ಯಾಪ್(Kidnap)​ ಮಾಡುತ್ತಿದ್ದೆ ಎಂದ ಪಾಕಿಸ್ತಾನಿ ಕ್ಯಾಬ್​ ಚಾಲಕನ ಮಾತು ಕೇಳಿ ಒಮ್ಮೆ ಕೆನಡಾ ಮಹಿಳೆ ದಿಗ್ಭ್ರಮೆಗೊಂಡರು. ಪಾಕಿಸ್ತಾನಿ ಚಾಲಕನ ಈ ಮಾತು ಆ ಸಮಯದಲ್ಲಿ ಭಯ ಉಂಟು ಮಾಡುವುದರ ಜತೆಗೆ ಆಕ್ರೋಶವನ್ನೂ ಹುಟ್ಟುಹಾಕಿತ್ತು.

ಪಾಕಿಸ್ತಾನದಲ್ಲಿ ಹೀಗೆ ಈ ಸಮಯದಲ್ಲಿ ಒಂಟಿಯಾಗಿ ಸಿಕ್ಕಿದ್ದರೆ ಅಪಹರಿಸುತ್ತಿದ್ದರು, ಕೆನಡಾದಲ್ಲಿ ಕಾನೂನು ಕಠಿಣವಾಗಿರುವ ಕಾರಣ ಯಾರಿಂದಲೂ ಹೆಣ್ಣುಮಕ್ಕಳನ್ನು ಮುಟ್ಟಲು ಸಾಧ್ಯವಿಲ್ಲ ಎನ್ನುವ ಮಾತನಾಡಿದ್ದಾನೆ.

ಈ ವೀಡಿಯೊ ತ್ವರಿತವಾಗಿ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಶೇರ್​ ಮಾಡಲಾಯಿತು, ವ್ಯಾಪಕ ಖಂಡನೆ ಕೂಡ ವ್ಯಕ್ತವಾಯಿತು ಮತ್ತು ಪಾಕಿಸ್ತಾನಿ ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಡವೂ ಕೇಳಿಬಂದಿತ್ತು. ಕೆಲವು ಸಂಸ್ಕೃತಿಗಳಲ್ಲಿ ಆಳವಾಗಿ ಬೇರೂರಿರುವ ಸ್ತ್ರೀದ್ವೇಷ ಮತ್ತು ಮಹಿಳಾ ಸುರಕ್ಷತೆಯ ಕೊರತೆಯನ್ನು ಎತ್ತಿ ತೋರಿಸಿದ್ದಾರೆ.

ಅವರು ಪ್ರಪಂಚದ ಯಾವುದೇ ಭಾಗದಲ್ಲಿ ವಾಸಿಸಬಹುದು, ಅವರ ಮನಸ್ಥಿತಿ ಒಂದೇ ಆಗಿರುತ್ತದೆ ಎಂದು ಕೆಲವರು ಹೇಳಿದ್ದಾರೆ. ಇದು ಪಾಕಿಸ್ತಾನಿ ಜನರ ಮನಸ್ಥಿತಿಯನ್ನು ತೋರಿಸುತ್ತದೆ. ಮಹಿಳೆಯರಿಗೆ ಗೌರವವಿಲ್ಲ ಎಂಬುದು ಸ್ಪಷ್ಟವಾಗುತ್ತದೆ ಎಂದು ಮತ್ತೊಬ್ಬರು ಕಮೆಂಟ್​ ಮಾಡಿದ್ದಾರೆ.

ಮತ್ತಷ್ಟು ಓದಿ: ಪಾಕಿಸ್ತಾನ ಕೈಗೆ ಬಳೆ ತೊಟ್ಟಿಲ್ಲ, ಅಣು ಬಾಂಬ್ ಇಟ್ಕೊಂಡಿದೆ: ರಾಜನಾಥ್ ಸಿಂಗ್​ಗೆ ಟಾಂಟ್ ಕೊಟ್ಟ ಫಾರೂಕ್ ಅಬ್ದುಲ್ಲಾ

ಇನ್ನೂ ಕೆಲವರು ಪಾಕಿಸ್ತಾನಿ ಚಾಲಕನ ಪರವಾಗಿ ಮಾತನಾಡಿದ್ದು, ಇದು ಮುಸ್ಲಿಮರು ಅಥವಾ ಯಾವುದರ ಬಗ್ಗೆ ಅಲ್ಲ. ಅವರು ಕೇವಲ ಪಾಕಿಸ್ತಾನದಲ್ಲಿ ನಡೆಯುವ ಕಾನೂನು ಬಾಹಿರ ಚಟುವಟಿಕೆಗಳ ಬಗ್ಗೆ ವಿವರಿಸಿದ್ದಾರೆ ಎಂದು ಹೇಳಿದ್ದಾರೆ.

ವಿಡಿಯೋ ಇಲ್ಲಿದೆ

ಅವರು ಹಿಂದೂ, ಕ್ರಿಶ್ಚಿಯನ್ ಅಥವಾ ಮುಸ್ಲಿಂ ಆಗಿರಬಹುದು ಮತ್ತು ಯಾರಾದರೂ ಅಪರಾಧ ಮಾಡಬಹುದು ಮತ್ತು ಅದರಿಂದ ಅಲ್ಲಿ ಸುಲಭವಾಗಿ ತಪ್ಪಿಸಿಕೊಳ್ಳಬಹುದು ಎಂಬುದನ್ನು ಅರ್ಥಮಾಡಿಕೊಳ್ಳಬೇಕು ಎಂದರು. ಪಾಕಿಸ್ತಾನದಂತಹ ದೇಶಗಳಲ್ಲಿ ಮತ್ತು ಬಾಂಗ್ಲಾದೇಶದ ಕೆಲವು ಭಾಗಗಳಲ್ಲಿ ಇದು ತುಂಬಾ ಸಾಮಾನ್ಯವಾಗಿದೆ ಎಂದು ಇನ್ನೂ ಕೆಲವರು ವಾದಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು