AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಚುನಾವಣೆ ನಡೆಸಿದ ರೀತಿಯನ್ನು ಶ್ಲಾಘಿಸಿದ ಪಾಕಿಸ್ತಾನದ ನಾಯಕ ಶಿಬ್ಲಿ ಫರಾಝ್

"ಎಷ್ಟು ಸರಾಗವಾಗಿ ಅಧಿಕಾರವನ್ನು ವರ್ಗಾಯಿಸಲಾಯಿತು. ನಾವು ಕೂಡ ಅದೇ ಪರಿಸ್ಥಿತಿಯಲ್ಲಿರಲು ಬಯಸುತ್ತೇವೆ. ಈ ದೇಶವು ನ್ಯಾಯಸಮ್ಮತತೆಗಾಗಿ ಹೋರಾಡುತ್ತಿದೆ. ಇಲ್ಲಿ, ಚುನಾವಣೆಯಲ್ಲಿ ಸೋತವರು ಒಪ್ಪಿಕೊಳ್ಳುವುದಿಲ್ಲ ಮತ್ತು ವಿಜೇತರು ಅವರ ಸ್ವಂತ ಇಚ್ಛೆಯಂತೆ ಚುನಾಯಿತರಾಗುತ್ತಾರೆ. ಈ ರೀತಿಯ ವಿಧಾನವು ನಮ್ಮ ರಾಜಕೀಯ ವ್ಯವಸ್ಥೆಯನ್ನು ಟೊಳ್ಳು ಮಾಡಿದೆ ಎಂದು ಫರಾಝ್ ಹೇಳಿದ್ದಾರೆ.

ಭಾರತದಲ್ಲಿ ಚುನಾವಣೆ ನಡೆಸಿದ ರೀತಿಯನ್ನು ಶ್ಲಾಘಿಸಿದ ಪಾಕಿಸ್ತಾನದ ನಾಯಕ ಶಿಬ್ಲಿ ಫರಾಝ್
ಸೈಯದ್ ಶಿಬ್ಲಿ ಫರಾಝ್
ರಶ್ಮಿ ಕಲ್ಲಕಟ್ಟ
|

Updated on: Jun 13, 2024 | 5:29 PM

Share

ಲಾಹೋರ್ ಜೂನ್ 13: ಪಾಕಿಸ್ತಾನದ ವಿರೋಧ ಪಕ್ಷದ ನಾಯಕ ಸೈಯದ್ ಶಿಬ್ಲಿ ಫರಾಝ್ (Syed Shibli Faraz) ಅವರು ಇತ್ತೀಚೆಗೆ ಮುಕ್ತಾಯಗೊಂಡ ಸಾರ್ವತ್ರಿಕ ಚುನಾವಣೆಗಳನ್ನು ಮುಕ್ತ ಮತ್ತು ನ್ಯಾಯಯುತ ರೀತಿಯಲ್ಲಿ ನಡೆಸಿದ್ದಕ್ಕಾಗಿ ಭಾರತವನ್ನು ಶ್ಲಾಘಿಸಿದ್ದು, ತಮ್ಮ ದೇಶದಲ್ಲಿಯೂ ಇದೇ ರೀತಿಯ ಪ್ರಕ್ರಿಯೆಯನ್ನು ಹೊಂದುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನದ (Pakistan) ಸೆನೆಟ್‌ನಲ್ಲಿ ಮಾತನಾಡಿದ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (PTI) ನಾಯಕ ಫರಾಜ್, ಲೋಕಸಭೆ ಚುನಾವಣೆಗಳಲ್ಲಿ ಅಕ್ರಮ ನಡೆದಿದೆಯೇ ಎಂದು ಭಾರತದಲ್ಲಿ ಒಂದೇ ಒಂದು ಧ್ವನಿಯೂ ಪ್ರಶ್ನಿಸಲಿಲ್ಲ.

“ನಮ್ಮ ಶತ್ರು ದೇಶದ ಉದಾಹರಣೆಯನ್ನು ಉಲ್ಲೇಖಿಸಲು ನಾನು ಬಯಸುವುದಿಲ್ಲ. ಇತ್ತೀಚೆಗೆ, ಅಲ್ಲಿ (ಭಾರತ) ಚುನಾವಣೆಗಳು ನಡೆದವು. 800 ದಶಲಕ್ಷಕ್ಕೂ ಹೆಚ್ಚು ಜನರು ತಮ್ಮ ಮತವನ್ನು ಚಲಾಯಿಸಿದ್ದಾರೆ. ಸಾವಿರಾರು ಮತ್ತು ಲಕ್ಷಗಟ್ಟಲೆ ಮತಗಟ್ಟೆಗಳಿದ್ದು, ಕೆಲವು ಮತಗಟ್ಟೆಗಳನ್ನು ಒಂದು ಸ್ಥಳದಲ್ಲಿ ಕೇವಲ ಒಬ್ಬ ಮತದಾರರಿಗಾಗಿ ಸ್ಥಾಪಿಸಲಾಗಿದೆ. ಇವಿಎಂಗಳ ಸಹಾಯದಿಂದ ಇಡೀ ತಿಂಗಳ ಪ್ರಕ್ರಿಯೆ ನಡೆಸಲಾಯಿತು. ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಒಂದೇ ಒಂದು ಧ್ವನಿ ಹೇಳುತ್ತಿದೆಯೇ? ಎಂದು ಸೈಯದ್ ಶಿಬ್ಲಿ ಫರಾಝ್ ಹೇಳಿದ್ದಾರೆ.

 ಫರಾಝ್ ಭಾರತವನ್ನು ಶ್ಲಾಘಿಸುತ್ತಿರುವುದು

“ಎಷ್ಟು ಸರಾಗವಾಗಿ ಅಧಿಕಾರವನ್ನು ವರ್ಗಾಯಿಸಲಾಯಿತು. ನಾವು ಕೂಡ ಅದೇ ಪರಿಸ್ಥಿತಿಯಲ್ಲಿರಲು ಬಯಸುತ್ತೇವೆ. ಈ ದೇಶವು ನ್ಯಾಯಸಮ್ಮತತೆಗಾಗಿ ಹೋರಾಡುತ್ತಿದೆ. ಇಲ್ಲಿ, ಚುನಾವಣೆಯಲ್ಲಿ ಸೋತವರು ಒಪ್ಪಿಕೊಳ್ಳುವುದಿಲ್ಲ ಮತ್ತು ವಿಜೇತರು ಅವರ ಸ್ವಂತ ಇಚ್ಛೆಯಂತೆ ಚುನಾಯಿತರಾಗುತ್ತಾರೆ. ಈ ರೀತಿಯ ವಿಧಾನವು ನಮ್ಮ ರಾಜಕೀಯ ವ್ಯವಸ್ಥೆಯನ್ನು ಟೊಳ್ಳು ಮಾಡಿದೆ ಎಂದು ಫರಾಝ್ ಹೇಳಿದ್ದಾರೆ. 543 ಸ್ಥಾನಗಳಿಗೆ ಲೋಕಸಭೆ ಚುನಾವಣೆ ಏಳು ಹಂತಗಳಲ್ಲಿ ನಡೆದಿದ್ದು, ಏಪ್ರಿಲ್ 19 ರಿಂದ ಪ್ರಾರಂಭವಾಗಿ ಜೂನ್ 1 ರಂದು ಕೊನೆಯ ಹಂತ ಮತ್ತು ಜೂನ್ 4 ರಂದು ಫಲಿತಾಂಶಗಳನ್ನು ಪ್ರಕಟಿಸಲಾಯಿತು.

ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಕೇಂದ್ರದಲ್ಲಿ ಸರ್ಕಾರವನ್ನು ರಚಿಸಿದ್ದು, ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ಪ್ರಧಾನಿಯಾಗಿದ್ದಾರೆ.

ಒಂದು ವಾರದ ಹಿಂದೆ ಪಾಕಿಸ್ತಾನದ ರಾಯಭಾರಿ ಹುಸೇನ್ ಹಕ್ಕಾನಿ ಕೂಡ ಭಾರತದ ಚುನಾವಣೆ ಮತ್ತು ಅದರ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಗಳಿದ್ದರು.

“ಭಾರತದ ಪ್ರಜಾಪ್ರಭುತ್ವದ ಪರಿಮಾಣದಿಂದ ಪ್ರಭಾವಿತರಾಗದಿರುವುದು ಕಷ್ಟ. 44-ದಿನಗಳ ಚುನಾವಣಾ ಪ್ರಕ್ರಿಯೆ 900 ಮಿಲಿಯನ್ ಅರ್ಹ ಮತದಾರರು, 640 ಮಿಲಿಯನ್ ಮತದಾನ (ಅವುಗಳಲ್ಲಿ ಅರ್ಧದಷ್ಟು ಮಹಿಳೆಯರು), 67% ಮತದಾನ, 1.1 ಮಿಲಿಯನ್ ಮತಗಟ್ಟೆಗಳು, 5.5 ಮಿಲಿಯನ್ ಎಲೆಕ್ಟ್ರಾನಿಕ್ ಮತಯಂತ್ರಗಳು!” ಎಂದು ಹಕ್ಕಾನಿ X ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?