AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾದದ ಬೆನ್ನಲ್ಲೇ ಕರ್ತಾರಪುರ ಗುರುದ್ವಾರದಲ್ಲಿ ತೆಗೆದಿದ್ದ ಫೋಟೋ ಡಿಲೀಟ್​ ಮಾಡಿದ ಪಾಕಿಸ್ತಾನಿ ಮಾಡೆಲ್​; ನನ್ನನ್ನು ಕ್ಷಮಿಸಿ ಎಂದ ರೂಪದರ್ಶಿ

ಗುರುದ್ವಾರದ ಆವರಣದಲ್ಲಿ ಮಹಿಳೆಯರು ತಲೆಯ ಮೇಲೆ ಸೆರಗು ಹೊದ್ದು ಹೋಗುತ್ತಾರೆ. ಆದರೆ ಲಾಹೋರ್​​ನ ಈ ರೂಪದರ್ಶಿ ಆ ನಿಯಮ ಪಾಲನೆ ಮಾಡಲಿಲ್ಲ ಎಂದು ಸಿಖ್ಖರು ಆರೋಪಿಸಿದ್ದರು.

ವಿವಾದದ ಬೆನ್ನಲ್ಲೇ ಕರ್ತಾರಪುರ ಗುರುದ್ವಾರದಲ್ಲಿ ತೆಗೆದಿದ್ದ ಫೋಟೋ ಡಿಲೀಟ್​ ಮಾಡಿದ ಪಾಕಿಸ್ತಾನಿ ಮಾಡೆಲ್​; ನನ್ನನ್ನು ಕ್ಷಮಿಸಿ ಎಂದ ರೂಪದರ್ಶಿ
ವಿವಾದ ಸೃಷ್ಟಿಸಿದ್ದ ಪಾಕಿಸ್ತಾನದ ರೂಪದರ್ಶಿ
TV9 Web
| Edited By: |

Updated on:Nov 30, 2021 | 11:59 AM

Share

ದೆಹಲಿ: ಕರ್ತಾರಪುರದ ಗುರುದ್ವಾರ ದರ್ಬಾರ್​ ಸಾಹೀಬ್​​ ಎದುರು ಫೋಟೋಶೂಟ್​ ಮಾಡಿಸಿ ವಿವಾದ ಸೃಷ್ಟಿಸಿದ್ದ ಪಾಕಿಸ್ತಾನದ ರೂಪದರ್ಶಿ ಸೌಲೇಹಾ ಇದೀಗ ಕ್ಷಮೆ ಕೋರಿದ್ದಾರೆ. ಕರ್ತಾರಪುರದ ಗುರುದ್ವಾರ ದರ್ಬಾರ್​ ಸಾಹೀಬ್​ ಸಿಖ್ಖರ ಪವಿತ್ರ ಯಾತ್ರಾಸ್ಥಳ. ಆದರೆ ಅಲ್ಲಿ ಪಾಕ್​ನ ಮಾಡೆಲ್​ ಸೌಲೇಹಾ ಎಂಬುವವರು ವಿವಿಧ ಪೋಸ್​ ಕೊಟ್ಟು ಫೋಟೋಶೂಟ್​ ಮಾಡಿಸಿಕೊಂಡು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಆದರೆ ಆ ಫೋಟೋ ನೋಡಿ ನೆಟ್ಟಿಗರು, ಅದರಲ್ಲೂ ಸಿಖ್​ ಸಮುದಾಯದವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಈಕೆ ತಲೆಯ ಮೇಲೆ ಏನೂ ಹೊದ್ದುಕೊಳ್ಳದೆ, ಹೇಗೆಂದರೆ ಹಾಗೆ ಫೋಟೋ ತೆಗೆಸಿಕೊಂಡಿದ್ದಾರೆ. ಈ ಮೂಲಕ ಸಿಖ್ಖರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪ ವ್ಯಕ್ತವಾಗಿತ್ತು.

ಸೋಷಿಯಲ್​ ಮೀಡಿಯಾದಲ್ಲಿ ಟೀಕೆ, ವ್ಯಂಗ್ಯ, ವಿರೋಧ ವ್ಯಕ್ತವಾದ ಬೆನ್ನಲ್ಲೇ ರೂಪದರ್ಶಿ ಸೌಲೇಹಾ ತಮ್ಮ ಫೋಟೋಗಳನ್ನೆಲ್ಲ ಡಿಲೀಟ್​ ಮಾಡಿ, ಇನ್​ಸ್ಟಾಗ್ರಾಂನಲ್ಲಿ  ಕ್ಷಮೆ ಕೇಳಿದ್ದಾರೆ. ನನಗೆ ಯಾರಿಗೂ ಅವಮಾನ ಮಾಡುವ, ಯಾರ ಭಾವನೆಗೂ ಧಕ್ಕೆ ಉಂಟು ಮಾಡುವ ಉದ್ದೇಶ ಇರಲಿಲ್ಲ. ಕರ್ತಾರಪುರ ಸಾಹೀಬ್​ಗೆ ಪ್ರವಾಸಕ್ಕೆ ಹೋಗಿದ್ದೆ. ಅದರ ನೆನಪಿಗಾಗಿ ಫೋಟೋಗಳನ್ನು ತೆಗೆಸಿಕೊಂಡಿದ್ದೆ. ಕರ್ತಾರಪುರದ ಇತಿಹಾಸ, ಸಿಖ್​ ಸಮುದಾಯದ ಆಚರಣೆ ಬಗ್ಗೆ ತಿಳಿದುಕೊಳ್ಳುವ ಸಲುವಾಗಿ ನಾನು ಅಲ್ಲಿಗೆ ಹೋಗಿದ್ದೆ. ನಾನು ಒಂದು ಸಮುದಾಯದ ಸಂಸ್ಕೃತಿ, ನಂಬಿಕೆಗೆ ಧಕ್ಕೆ ತಂದಿದ್ದೇನೆ ಎಂದು ಹೇಳಲಾಗುತ್ತಿದೆ. ಹಾಗೆ ಭಾವಿಸಬೇಡಿ. ನನ್ನ ಮನಸಲ್ಲಿ ಅಂಥ ಭಾವನೆ ಇರಲಿಲ್ಲ, ದಯವಿಟ್ಟು ಕ್ಷಮಿಸಿ ಎಂದು ತಮ್ಮ ಇನ್​ಸ್ಟಾಗ್ರಾಂ ಪೇಜ್​​ನಲ್ಲಿ ಬರೆದುಕೊಂಡಿದ್ದಾರೆ.   ಅಂದಹಾಗೆ, ಈ ರೂಪದರ್ಶಿಯ ಫೋಟೋಗಳನ್ನು ಮನ್ನತ್​ ಕ್ಲಾಥಿಂಗ್​ ಬ್ರ್ಯಾಂಡ್​ ಕೂಡ ತನ್ನ ಇನ್​ಸ್ಟಾಗ್ರಾಂನಲ್ಲಿ ಶೇರ್​ ಮಾಡಿಕೊಂಡಿತ್ತು. ಆದರೆ ಸಿಖ್​ ಸಮುದಾಯದ ವಿರೋಧದ ನಂತರ ಅದೂ ಕೂಡ ಡಿಲೀಟ್​ ಮಾಡಿದೆ. ಹಾಗೇ, ಇದು ಖಂಡಿತ ಯಾವುದೇ ವಸ್ತ್ರದ ಪ್ರಮೋಶನ್​​​ಗೆ ಮಾಡಿದ ಫೋಟೋಶೂಟ್ ಆಗಿರಲಿಲ್ಲ ಎಂದೂ ಮನ್ನಥ್​ ಕ್ಲಾಥಿಂಗ್​ ಮತ್ತು ಸೌಲೇಹಾ ಇಬ್ಬರೂ ಸ್ಪಷ್ಟಪಡಿಸಿದ್ದಾರೆ.

ಗುರುದ್ವಾರದ ಆವರಣದಲ್ಲಿ ಮಹಿಳೆಯರು ತಲೆಯ ಮೇಲೆ ಸೆರಗು ಹೊದ್ದು ಹೋಗುತ್ತಾರೆ. ಇದು ನಮ್ಮ ಸಂಪ್ರದಾಯ. ಆದರೆ ಲಾಹೋರ್​​ನ ಈ ರೂಪದರ್ಶಿ ಆ ನಿಯಮ ಪಾಲನೆ ಮಾಡಲಿಲ್ಲ. ಇದು ನಮ್ಮ ಸಂಸ್ಕೃತಿಗೆ ಮಾಡಿದ ಅವಮಾನ ಎಂದು ಸಿಖ್​ ಸಮುದಾಯದ ಪ್ರಮುಖರು ಧ್ವನಿ ಎತ್ತಿದ್ದರು. ಅಷ್ಟೇ ಅಲ್ಲ, ಪಾಕಿಸ್ತಾನ ಪೊಲೀಸರೂ ಕೂಡ ಮನ್ನಥ್​ ಕ್ಲಾಥಿಂಗ್​ ಮತ್ತು ರೂಪದರ್ಶಿ ಸೌಲೇಹಾರ ವಿಚಾರಣೆ ಪ್ರಕ್ರಿಯೆ ನಡೆಸಿದ್ದಾರೆ.

ಇದನ್ನೂ ಓದಿ: Financial changes: ಡಿಸೆಂಬರ್ 1ರಿಂದ ಜಾರಿ ಆಗಬಹುದಾದ ಪ್ರಮುಖ ಹಣಕಾಸು ವಿಚಾರದ ಬದಲಾವಣೆಗಳಿವು

Published On - 11:57 am, Tue, 30 November 21

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ