AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಲೈವ್ ಚರ್ಚೆಯಲ್ಲಿ​ ಕೃಷಿ ತಜ್ಞ ಬಾಳೆಹಣ್ಣಿನ ಗಾತ್ರದ ಬಗ್ಗೆ ಹೇಳುತ್ತಿದ್ದಂತೆ ಬಿದ್ದುಬಿದ್ದು ನಕ್ಕ ಪಾಕಿಸ್ತಾನಿ ಸುದ್ದಿ ನಿರೂಪಕಿ

ವಿಡಿಯೋ ಸೋಷಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟೆ ವೈರಲ್ ಆಗಿದೆ. ಭಾರತೀಯ ಕ್ರಿಕೆಟರ್​ ಹರ್ಭಜನ್​ ಸಿಂಗ್​ ಕೂಡ ವಿಡಿಯೋ ಶೇರ್ ಮಾಡಿಕೊಂಡು ಅದಕ್ಕೆ, ಬಾಳೆ ಹಣ್ಣಿನ ಮತ್ತು ನಗುವಿನ ಇಮೋಜಿ ಕ್ಯಾಪ್ಷನ್​ ಕೊಟ್ಟಿದ್ದಾರೆ.

Video: ಲೈವ್ ಚರ್ಚೆಯಲ್ಲಿ​ ಕೃಷಿ ತಜ್ಞ ಬಾಳೆಹಣ್ಣಿನ ಗಾತ್ರದ ಬಗ್ಗೆ ಹೇಳುತ್ತಿದ್ದಂತೆ ಬಿದ್ದುಬಿದ್ದು ನಕ್ಕ ಪಾಕಿಸ್ತಾನಿ ಸುದ್ದಿ ನಿರೂಪಕಿ
ಸುದ್ದಿ ನಿರೂಪಕಿ ನಗುತ್ತಿರುವ ದೃಶ್ಯ
TV9 Web
| Edited By: |

Updated on: Nov 03, 2021 | 3:52 PM

Share

ಸಾಮಾನ್ಯವಾಗಿ ಸುದ್ದಿ ವಾಹಿನಿಗಳಲ್ಲಿ ಯಾವುದೇ ತಜ್ಞರು, ಪರಿಣತರನ್ನು ಕರೆಸಿ ಅವರೊಂದಿಗೆ ಚರ್ಚೆಗಳನ್ನು ನಡೆಸಲಾಗುತ್ತದೆ. ಹೀಗೆ ಪಾಕಿಸ್ತಾನದ ಸುದ್ದಿ ವಾಹಿನಿಯೊಂದರಲ್ಲಿ ಅಂಥ ಅತಿಥಿಯೊಬ್ಬರನ್ನು ಕರೆಸಿ, ಅವರು ಹೇಳಿದ ಬಾಳೆಹಣ್ಣಿನ ಕತೆ ಕೇಳಿ, ಸುದ್ದಿ ನಿರೂಪಕಿ ಬಿದ್ದು ಬಿದ್ದು ನಕ್ಕಿದ್ದಾರೆ. ಈ ಫನ್ನಿ ವಿಡಿಯೋ ಸೋಷಿಯಲ್​ ಮೀಡಿಯಾಗಳಲ್ಲಿ ಭರ್ಜರಿ ವೈರಲ್​ ಆಗಿದೆ. 

ಸುದ್ದಿ ನಿರೂಪಕಿಯ ಹೆಸರು ಅಲ್ವೀನಾ ಅಘಾ. ಪಾಕಿಸ್ತಾನದಲ್ಲಿ ಕೃಷಿ, ತೋಟಗಾರಿಕೆ ಅಭಿವೃದ್ಧಿ ಸಂಬಂಧ ಚರ್ಚಿಸಲು ಖವಾಜಾ ನವೀದ್ ಅಹ್ಮದ್ ಎಂಬುವರನ್ನು ಕರೆಸಲಾಗಿತ್ತು. ಅವರು ಪಾಕಿಸ್ತಾನದ ಅಭಿವೃದ್ಧಿ ಬಗ್ಗೆ ವಿಸ್ತರಿಸಲು ಬಾಳೆಹಣ್ಣಿನ ಉದಾಹರಣೆ ಕೊಡಲು ಪ್ರಾರಂಭಿಸಿದರು. ಪಾಕಿಸ್ತಾನ ಮತ್ತು ಭಾರತದಲ್ಲಿ ಬೆಳೆಯಲಾಗುವ ಬಾಳೆಹಣ್ಣುಗಳ ನಡುವಿನ ವ್ಯತ್ಯಾಸ ಹೇಳತೊಡಗಿದರು. ಮುಂಬೈನಲ್ಲಿ ಬೆಳೆಯುವ ಬಾಳೆ ಹಣ್ಣುಗಳ ಗಾತ್ರವೂ ದೊಡ್ಡದಾಗಿದ್ದು, ಪರಿಮಳವೂ ಅದ್ಭುತವಾಗಿರುತ್ತದೆ. ಒಳ್ಳೆಯ ಗುಣಮಟ್ಟದ ಹಣ್ಣುಗಳಾಗಿವೆ. ಒಂದು ಕೋಣೆಯಲ್ಲಿ ಆರೇ ಬಾಳೆಹಣ್ಣುಗಳನ್ನು ಇಟ್ಟರೂ ಸಾಕು ಇಡೀ ಕೋಣೆ ಬಾಳೆಹಣ್ಣಿನ ಪರಿಮಳದಿಂದ ತುಂಬಿಹೋಗುತ್ತದೆ ಎಂದು ವಿವರಿಸಿದ ಅವರು, ಬಾಂಗ್ಲಾದೇಶದ ಢಾಕಾದಲ್ಲಿ ಮತ್ತು ಪಾಕಿಸ್ತಾನದ ಸಿಂಧ್​ ಪ್ರಾಂತ್ಯದಲ್ಲಿ ಬೆಳೆಯುವ ಬಾಳೆಹಣ್ಣುಗಳ ಬಗ್ಗೆ ವಿವರಿಸುತ್ತ, ಅವುಗಳ ಗಾತ್ರವನ್ನು ಕೈಸನ್ನೆ ಮೂಲಕ ತೋರಿಸಿದರು. ಅಷ್ಟೇ ಅಲ್ಲ, ಪಾಕಿಸ್ತಾನದಲ್ಲಿ ಮಣ್ಣಿನ ಬಗ್ಗೆ ಹೆಚ್ಚೆಚ್ಚು ಸಂಶೋಧನೆ ಆಗಬೇಕು. ಇಲ್ಲಿನ ಮಣ್ಣನ್ನು ಪರೀಕ್ಷೆಗೆ ಒಳಪಡಿಸಬೇಕು ಎಂದು ಹೇಳಿದರು. ಆದರೆ ನಿರೂಪಕಿ ಅಲ್ವೀನಾ ಮಾತ್ರ ಬಿದ್ದುಬಿದ್ದು ನಗುತ್ತಿದ್ದರು. ನಗು ತಡೆಯಲಾಗದೆ ತಲೆತಗ್ಗಿಸಿ ಕುಳಿತುಬಿಟ್ಟರು.

ವಿಡಿಯೋ ಸೋಷಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟೆ ವೈರಲ್ ಆಗಿದೆ. ಭಾರತೀಯ ಕ್ರಿಕೆಟರ್​ ಹರ್ಭಜನ್​ ಸಿಂಗ್​ ಕೂಡ ವಿಡಿಯೋ ಶೇರ್ ಮಾಡಿಕೊಂಡು ಅದಕ್ಕೆ, ಬಾಳೆ ಹಣ್ಣಿನ ಮತ್ತು ನಗುವಿನ ಇಮೋಜಿ ಕ್ಯಾಪ್ಷನ್​ ಕೊಟ್ಟಿದ್ದಾರೆ. ಅದರಂತೆ ಹಲವರು ವಿಡಿಯೋ ಶೇರ್ ಮಾಡಿಕೊಂಡಿದ್ದಾರೆ. ಅದರಲ್ಲೊಬ್ಬರು ಕಾಮೆಂಟ್ ಮಾಡಿ, ನನಗೆ ಈ ಟಿವಿ ಆ್ಯಂಕರ್​ ನೋಡಿದರೆ ಅಯ್ಯೋ ಎನ್ನಿಸುತ್ತದೆ. ಬಹುಶ್ಯಃ ನಾನು ಆ ಜಾಗದಲ್ಲಿ ಇದ್ದಿದ್ದರೆ ಹೀಗೆ ವರ್ತಿಸುತ್ತಿದ್ದೆ ಎಂದು ಹೇಳಿಕೊಂಡಿದ್ದಾರೆ. ಈ ವಿಡಿಯೋದ ಪುಟ್ಟ ಕ್ಲಿಪ್​ ಮಾತ್ರ ಸೋಷಿಯಲ್​ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಪೂರ್ತಿ ವಿಡಿಯೋ ಪಾಕಿಸ್ತಾನದ ಈ ಸುದ್ದಿವಾಹಿನಿಯ ಯೂಟ್ಯೂಬ್​ ನಲ್ಲಿ ಅಪ್ಲೋಡ್​ ಆಗಿದೆ. ಅದರಲ್ಲಿ ನಿರೂಪಕಿ ಮತ್ತು ಆ ಅತಿಥಿ ಇಬ್ಬರೂ ಪಾಕಿಸ್ತಾನದ ಮಣ್ಣು, ಅಲ್ಲಿನ ಕೃಷಿ ವಿಶ್ವವಿದ್ಯಾಲಯ, ಬೆಳೆಗಳ ಆಮದು-ರಫ್ತು, ಲಾಭ ಇನ್ನಿತರ ವಿಚಾರಗಳ ಬಗ್ಗೆ ಚರ್ಚೆ ನಡೆಸುತ್ತಿದ್ದರು. ಅದೊಂದು ಲೈವ್​ ಕಾರ್ಯಕ್ರಮವಾಗಿತ್ತು ಎಂಬುದು ಗೊತ್ತಾಗುತ್ತದೆ.

ಇದನ್ನೂ ಓದಿ: ಮಿಲಿಟರಿ ಸಾಮರ್ಥ್ಯ ಬಲಗೊಳಿಸಲು 7965 ಕೋಟಿ ರೂ.ಮೌಲ್ಯದ ರಕ್ಷಣಾ ಉಪಕರಣಗಳ ಖರೀದಿಗೆ ಅನುಮೋದನೆ

ನಾವು ಅಂಬೇಡ್ಕರ್​ರ ಸಂವಿಧಾನದ ಪರವಾಗಿ ಇರುವವರು: ಬಿಜೆಪಿ ಪ್ರತಿಭಟನೆಗೆ ಸಿದ್ದರಾಮಯ್ಯ ತಿರುಗೇಟು

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್