AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ಪಠ್ಯಗಳಲ್ಲಿ ಮಲಾಲಾ ಯೂಸುಫ್​ಝೈ ಹೆಸರು; ವಿರೋಧ ವ್ಯಕ್ತಪಡಿಸಿದ ಪಾಕಿಸ್ತಾನಿ ಪ್ರಜೆಗಳು

ಕರಾಚಿಯಲ್ಲಿರುವ ಸರ್ಕಾರಿ ಶಾಲೆಯೊಂದಕ್ಕೆ ಯೂಸಫ್ ಮಲಾಲಾರ ಹೆಸರನ್ನು ಇಡಲಾಗಿತ್ತು. ಸರ್ಕಾರದ ಈ ನಿರ್ಣಯಕ್ಕೂ ಆಕ್ಷೇಪ ವ್ಯಕ್ತಪಡಿಸಿರುವ ಪಾಕಿಸ್ತಾನದ ಕೆಲವು ಪ್ರಜೆಗಳು, ಶಾಲೆಯ ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಮಲಾಲಾರ ಹೆಸರನ್ನು ಶಾಲೆಗೆ ಇಡಬಾರದು ಎಂದು ಒತ್ತಾಯಿಸಿದ್ದಾರೆ.

ಶಾಲಾ ಪಠ್ಯಗಳಲ್ಲಿ ಮಲಾಲಾ ಯೂಸುಫ್​ಝೈ  ಹೆಸರು; ವಿರೋಧ ವ್ಯಕ್ತಪಡಿಸಿದ ಪಾಕಿಸ್ತಾನಿ ಪ್ರಜೆಗಳು
ಮಲಾಲಾ ಯೂಸಫ್
TV9 Web
| Edited By: |

Updated on:Jul 11, 2021 | 5:52 PM

Share

ಪಾಕಿಸ್ತಾನದ ಅತ್ಯಂತ ಪ್ರಮುಖ ವ್ಯಕ್ತಿಗಳು ಎಂದು ಉಲ್ಲೇಖಿಸಲಾದ ಶಾಲಾ ಪಠ್ಯದ ಭಾಗದಲ್ಲಿ ಯುವ ಹೋರಾಟಗಾರ್ತಿ ಮಲಾಲಾ ಯೂಸುಫ್​ಝೈ ಅವರ ಹೆಸರನ್ನು ತೆಗೆದುಹಾಕುವಂತೆ ಪಾಕಿಸ್ತಾನದ ಪ್ರಜೆಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗ್ರಹಿಸುತ್ತಿದ್ದಾರೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಪಠ್ಯದಲ್ಲಿ ಸದ್ಯ ಇರುವ ಮಲಾಲಾ ಯೂಸುಫ್​ಝೈ​ ಅವರ ಹೆಸರನ್ನು ಪಠ್ಯದಲ್ಲಿ ಯಾವುದೇ ಕಾರಣಕ್ಕೂ ಸೇರಸಬಾರದು ಎಂದು ಪಾಕಿಸ್ತಾನದ ನೆಟ್ಟಿಗರು ಒತ್ತಾಯಿಸುತ್ತಿದ್ದಾರೆ.

ಸಾಮಾಜಿಕ ಮಾಧ್ಯಮವೊಂದರ ಬಳಕೆದಾರರೊಬ್ಬರು ಈ ಪುಸ್ತಕದ ಚಿತ್ರವನ್ನು ಹಂಚಿಕೊಂಡಿದ್ದು, ಇದರಲ್ಲಿ ಅಲಮಾ ಇಕ್ಬಾಲ್, ಚೌಧರಿ ರಹಮತ್ ಅಲಿ, ಲಿಯಾಕತ್ ಅಲಿ ಖಾನ್, ಮೊಹಮ್ಮದ್ ಅಲಿ ಜಿನ್ನಾ, ಬೇಗಂ ರಾಣಾ ಲಿಯಾಕತ್ ಅಲಿ ಮತ್ತು ಅಬ್ದುಲ್ ಸಿತಾರ್ ಅವರ ಚಿತ್ರಗಳ ಜತೆ ಮಲಾಲಾ ಯೂಸುಫ್​ಝೈ ಅವರ ಚಿತ್ರಗಳೂ ಸಹ ಇದ್ದು, ಸಾಮಾಜಿಕ ಜಾಲತಾಣಿಗರೊಬ್ಬರು ಈ ಪುಸ್ತಕದ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಕರಾಚಿಯಲ್ಲಿರುವ ಸರ್ಕಾರಿ ಶಾಲೆಯೊಂದಕ್ಕೆ ಮಲಾಲಾ ಯೂಸುಫ್​ಝೈರ ಹೆಸರನ್ನು ಇಡಲಾಗಿತ್ತು. ಸರ್ಕಾರದ ಈ ನಿರ್ಣಯಕ್ಕೂ ಆಕ್ಷೇಪ ವ್ಯಕ್ತಪಡಿಸಿರುವ ಪಾಕಿಸ್ತಾನದ ಕೆಲವು ಪ್ರಜೆಗಳು, ಶಾಲೆಯ ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಮಲಾಲಾರ ಹೆಸರನ್ನು ಶಾಲೆಗೆ ಇಡಬಾರದು ಎಂದು ಒತ್ತಾಯಿಸಿದ್ದಾರೆ.

ಮಾನವ ಹಕ್ಕುಗಳ ಹೋರಾಟಗಾರ ಕಪಿಲ್ ದೇವ್ ಈ ಕುರಿತು ಟ್ವೀಟ್ ಮಾಡಿದ್ದು, ಸಿಂಧ್ ಪ್ರಾಂತ್ಯದ ಶಿಕ್ಷಣ ಮಂತ್ರಿಗಳ ಬಳಿ ನಾವು ಸರ್ಕಾರಿ ಶಾಲೆಗೆ ಮಲಾಲಾ ಯೂಸುಫ್​ಝೈರ ಹೆಸರನ್ನು ಇಟ್ಟ ನಿರ್ಣಯವನ್ನು ಮರು ಪರಿಶೀಲಿಸುವಂತೆ ನಾವು ಆಗ್ರಹಿಸಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: 

ಭಾರತ ಪಾಕ್ ಒಳ್ಳೆಯ ಗೆಳೆಯರಾಗಬೇಕು; ಕನಸು ಬಿಚ್ಚಿಟ್ಟ ಮಲಾಲಾ ಯೂಸುಫ್

2500 ಕೋಟಿ ರೂ.ಮೌಲ್ಯದ ಹೆರಾಯಿನ್​ ವಶಪಡಿಸಿಕೊಂಡ ದೆಹಲಿ ಪೊಲೀಸರು; ಅಫ್ಘಾನಿಸ್ತಾನದಿಂದ ಪೂರೈಕೆ, ಪಾಕಿಸ್ತಾನದಿಂದ ಧನ ಸಹಾಯ !

(Pakistani people demands exclusion of Malala Yousafzai from school books)

Published On - 5:48 pm, Sun, 11 July 21

ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ