AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ಪಠ್ಯಗಳಲ್ಲಿ ಮಲಾಲಾ ಯೂಸುಫ್​ಝೈ ಹೆಸರು; ವಿರೋಧ ವ್ಯಕ್ತಪಡಿಸಿದ ಪಾಕಿಸ್ತಾನಿ ಪ್ರಜೆಗಳು

ಕರಾಚಿಯಲ್ಲಿರುವ ಸರ್ಕಾರಿ ಶಾಲೆಯೊಂದಕ್ಕೆ ಯೂಸಫ್ ಮಲಾಲಾರ ಹೆಸರನ್ನು ಇಡಲಾಗಿತ್ತು. ಸರ್ಕಾರದ ಈ ನಿರ್ಣಯಕ್ಕೂ ಆಕ್ಷೇಪ ವ್ಯಕ್ತಪಡಿಸಿರುವ ಪಾಕಿಸ್ತಾನದ ಕೆಲವು ಪ್ರಜೆಗಳು, ಶಾಲೆಯ ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಮಲಾಲಾರ ಹೆಸರನ್ನು ಶಾಲೆಗೆ ಇಡಬಾರದು ಎಂದು ಒತ್ತಾಯಿಸಿದ್ದಾರೆ.

ಶಾಲಾ ಪಠ್ಯಗಳಲ್ಲಿ ಮಲಾಲಾ ಯೂಸುಫ್​ಝೈ  ಹೆಸರು; ವಿರೋಧ ವ್ಯಕ್ತಪಡಿಸಿದ ಪಾಕಿಸ್ತಾನಿ ಪ್ರಜೆಗಳು
ಮಲಾಲಾ ಯೂಸಫ್
TV9 Web
| Edited By: |

Updated on:Jul 11, 2021 | 5:52 PM

Share

ಪಾಕಿಸ್ತಾನದ ಅತ್ಯಂತ ಪ್ರಮುಖ ವ್ಯಕ್ತಿಗಳು ಎಂದು ಉಲ್ಲೇಖಿಸಲಾದ ಶಾಲಾ ಪಠ್ಯದ ಭಾಗದಲ್ಲಿ ಯುವ ಹೋರಾಟಗಾರ್ತಿ ಮಲಾಲಾ ಯೂಸುಫ್​ಝೈ ಅವರ ಹೆಸರನ್ನು ತೆಗೆದುಹಾಕುವಂತೆ ಪಾಕಿಸ್ತಾನದ ಪ್ರಜೆಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗ್ರಹಿಸುತ್ತಿದ್ದಾರೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಪಠ್ಯದಲ್ಲಿ ಸದ್ಯ ಇರುವ ಮಲಾಲಾ ಯೂಸುಫ್​ಝೈ​ ಅವರ ಹೆಸರನ್ನು ಪಠ್ಯದಲ್ಲಿ ಯಾವುದೇ ಕಾರಣಕ್ಕೂ ಸೇರಸಬಾರದು ಎಂದು ಪಾಕಿಸ್ತಾನದ ನೆಟ್ಟಿಗರು ಒತ್ತಾಯಿಸುತ್ತಿದ್ದಾರೆ.

ಸಾಮಾಜಿಕ ಮಾಧ್ಯಮವೊಂದರ ಬಳಕೆದಾರರೊಬ್ಬರು ಈ ಪುಸ್ತಕದ ಚಿತ್ರವನ್ನು ಹಂಚಿಕೊಂಡಿದ್ದು, ಇದರಲ್ಲಿ ಅಲಮಾ ಇಕ್ಬಾಲ್, ಚೌಧರಿ ರಹಮತ್ ಅಲಿ, ಲಿಯಾಕತ್ ಅಲಿ ಖಾನ್, ಮೊಹಮ್ಮದ್ ಅಲಿ ಜಿನ್ನಾ, ಬೇಗಂ ರಾಣಾ ಲಿಯಾಕತ್ ಅಲಿ ಮತ್ತು ಅಬ್ದುಲ್ ಸಿತಾರ್ ಅವರ ಚಿತ್ರಗಳ ಜತೆ ಮಲಾಲಾ ಯೂಸುಫ್​ಝೈ ಅವರ ಚಿತ್ರಗಳೂ ಸಹ ಇದ್ದು, ಸಾಮಾಜಿಕ ಜಾಲತಾಣಿಗರೊಬ್ಬರು ಈ ಪುಸ್ತಕದ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಕರಾಚಿಯಲ್ಲಿರುವ ಸರ್ಕಾರಿ ಶಾಲೆಯೊಂದಕ್ಕೆ ಮಲಾಲಾ ಯೂಸುಫ್​ಝೈರ ಹೆಸರನ್ನು ಇಡಲಾಗಿತ್ತು. ಸರ್ಕಾರದ ಈ ನಿರ್ಣಯಕ್ಕೂ ಆಕ್ಷೇಪ ವ್ಯಕ್ತಪಡಿಸಿರುವ ಪಾಕಿಸ್ತಾನದ ಕೆಲವು ಪ್ರಜೆಗಳು, ಶಾಲೆಯ ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಮಲಾಲಾರ ಹೆಸರನ್ನು ಶಾಲೆಗೆ ಇಡಬಾರದು ಎಂದು ಒತ್ತಾಯಿಸಿದ್ದಾರೆ.

ಮಾನವ ಹಕ್ಕುಗಳ ಹೋರಾಟಗಾರ ಕಪಿಲ್ ದೇವ್ ಈ ಕುರಿತು ಟ್ವೀಟ್ ಮಾಡಿದ್ದು, ಸಿಂಧ್ ಪ್ರಾಂತ್ಯದ ಶಿಕ್ಷಣ ಮಂತ್ರಿಗಳ ಬಳಿ ನಾವು ಸರ್ಕಾರಿ ಶಾಲೆಗೆ ಮಲಾಲಾ ಯೂಸುಫ್​ಝೈರ ಹೆಸರನ್ನು ಇಟ್ಟ ನಿರ್ಣಯವನ್ನು ಮರು ಪರಿಶೀಲಿಸುವಂತೆ ನಾವು ಆಗ್ರಹಿಸಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: 

ಭಾರತ ಪಾಕ್ ಒಳ್ಳೆಯ ಗೆಳೆಯರಾಗಬೇಕು; ಕನಸು ಬಿಚ್ಚಿಟ್ಟ ಮಲಾಲಾ ಯೂಸುಫ್

2500 ಕೋಟಿ ರೂ.ಮೌಲ್ಯದ ಹೆರಾಯಿನ್​ ವಶಪಡಿಸಿಕೊಂಡ ದೆಹಲಿ ಪೊಲೀಸರು; ಅಫ್ಘಾನಿಸ್ತಾನದಿಂದ ಪೂರೈಕೆ, ಪಾಕಿಸ್ತಾನದಿಂದ ಧನ ಸಹಾಯ !

(Pakistani people demands exclusion of Malala Yousafzai from school books)

Published On - 5:48 pm, Sun, 11 July 21

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು