AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ: ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಮಗಳ ಕಾಲು ಕತ್ತರಿಸಿದ ಅಪ್ಪ

ಸೋಬಿಯಾ ಬಟೂಲ್ ಶಾ ಎಂಬ ಮಹಿಳೆ ಗಂಡನಿಂದ ವಿಚ್ಛೇದನ ಕೋರಿದ್ದಳು. ಆತ ಯಾವತ್ತೂ ಕುಟುಂಬದ ಜವಾಬ್ದಾರಿ ತೆಗೆದುಕೊಂಡಿಲ್ಲ, ಆತ ನನ್ನ ಮೇಲೆ ಹಲ್ಲೆ ನಡೆಸುತ್ತಿದ್ದ, ನಿಂದಿಸುತ್ತಿದ್ದ. ಈ ದೌರ್ಜನ್ಯದಿಂದ ಬೇಸತ್ತು ವಿಚ್ಛೇದನ ಕೋರಿದ್ದಕ್ಕಾಗಿ ನನ್ನ ಕಾಲುಗಳನ್ನು ಕತ್ತರಿಸಲಾಗಿದೆ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ.

ಪಾಕಿಸ್ತಾನ: ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಮಗಳ ಕಾಲು ಕತ್ತರಿಸಿದ ಅಪ್ಪ
ಪಾಕಿಸ್ತಾನದ ಪೊಲೀಸ್
ರಶ್ಮಿ ಕಲ್ಲಕಟ್ಟ
|

Updated on: Jul 27, 2024 | 8:34 AM

Share

ಲಾಹೋರ್ ಜುಲೈ 27: ಗಂಡ ದೌರ್ಜನ್ಯವೆಸಗುತ್ತಿದ್ದಾನೆ ಹಾಗಾಗಿ ವಿಚ್ಛೇದನ (divorce)ಬೇಕು ಎಂದು ಅರ್ಜಿ ಸಲ್ಲಿಸಿದ ಮಹಿಳೆಯ ಕಾಲುಗಳನ್ನು ಆಕೆಯ ಅಪ್ಪ ಮತ್ತು ಸಂಬಂಧಿಕರು ಸೇರಿ ಕತ್ತರಿಸಿದ ಘಟನೆಯೊಂದು ಪಾಕಿಸ್ತಾನದಲ್ಲಿ (Pakistan) ನಡೆದಿದೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ. ಪಾಕಿಸ್ತಾನದ ಪಿತೃಪ್ರಧಾನ ಸಮಾಜಗಳಲ್ಲಿ, ಮಹಿಳೆಯರ ಅಧೀನತೆಯನ್ನು ಶಾಶ್ವತಗೊಳಿಸಲು ಹಿಂಸೆಯನ್ನು ಸಾಮಾಜಿಕ ಕಾರ್ಯವಿಧಾನವಾಗಿ ಬಳಸಲಾಗಿದೆ ಎಂದು ಹೇಳಲಾಗಿದೆ.

ಸೋಬಿಯಾ ಬಟೂಲ್ ಶಾ ಎಂಬ ಮಹಿಳೆ ಗಂಡನಿಂದ ವಿಚ್ಛೇದನ ಕೋರಿದ್ದಳು. ಆತ ಯಾವತ್ತೂ ಕುಟುಂಬದ ಜವಾಬ್ದಾರಿ ತೆಗೆದುಕೊಂಡಿಲ್ಲ, ಆತ ನನ್ನ ಮೇಲೆ ಹಲ್ಲೆ ನಡೆಸುತ್ತಿದ್ದ, ನಿಂದಿಸುತ್ತಿದ್ದ. ಈ ದೌರ್ಜನ್ಯದಿಂದ ಬೇಸತ್ತು ವಿಚ್ಛೇದನ ಕೋರಿದ್ದಕ್ಕಾಗಿ ನನ್ನ ಕಾಲುಗಳನ್ನು ಕತ್ತರಿಸಲಾಗಿದೆ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ.  ಗುಲ್ ಟೌನ್‌ನಲ್ಲಿ ಆ ಕೃತ್ಯ ನಡೆದಿದೆ. ಮಹಿಳೆಗೆ ಇದು ತೀವ್ರವಾದ ದೈಹಿಕ ಮತ್ತು ಮಾನಸಿಕ ಆಘಾತವನ್ನು ಉಂಟು ಮಾಡಿದ್ದು, ಆಕೆ ಮತ್ತೆಂದೂ ನಡೆಯಲು ಸಾಧ್ಯವಾಗದ ಹಾಗೆ ಅಂಗ ವೈಕಲ್ಯವುಂಟಾಗಿದೆ ಎಂದು ವರದಿ ತಿಳಿಸಿದೆ.

ಸೋಬಿಯಾಳ ತಂದೆ ಸೈಯದ್ ಮುಸ್ತಫಾ ಷಾ ಮತ್ತು ಆಕೆಯ ಚಿಕ್ಕಪ್ಪಂದಿರಾದ ಸೈಯದ್ ಕುರ್ಬಾನ್ ಷಾ, ಎಹ್ಸಾನ್ ಶಾ, ಶಾ ನವಾಜ್ ಮತ್ತು ಮುಷ್ತಾಕ್ ಷಾ ಎಂಬವರು ಕೊಡಲಿಯಿಂದ ಕಾಲು ಕತ್ತರಿಸಿ ಓಡಿ ಹೋಗಿದ್ದಾರೆ. ರಕ್ತದ ಮಡುವಿನಲ್ಲಿ ಒದ್ದಾಡುತ್ತಾ ಆಕೆ ಸಹಾಯಕ್ಕಾಗಿ ಬೇಡುತ್ತಿದ್ದರು ಎಂದು ಜಿಯೋ ನ್ಯೂಸ್ ವರದಿ ಹೇಳಿದೆ.  ಪೊಲೀಸರು ಅಪರಾಧ ಸ್ಥಳಕ್ಕೆ ತಲುಪಿದ ತಕ್ಷಣ ಸೋಬಿಯಾ ಅವರನ್ನು ನವಾಬ್ ಶಾ ಆಸ್ಪತ್ರೆಗೆ ಸಾಗಿಸಲಾಯಿತು.

ತನ್ನ ಪತಿ ತನ್ನನ್ನು ನಿಂದಿಸುತ್ತಾನೆ. ಇಬ್ಬರು ಮಕ್ಕಳನ್ನು ಕೂಡಾ ನೋಡುವ ಜವಾಬ್ದಾರಿ ಆತನಿಗಿಲ್ಲ. ಕರಾಚಿಯಲ್ಲಿ ನಾನು ಒಬ್ಬಳೇ ಎಲ್ಲವನ್ನೂ ನಿಭಾಯಿಸಿಕೊಂಡು ಹೋಗುತ್ತಿದ್ದೇನೆ ಎಂದು ಮಹಿಳೆ ಪೊಲೀಸರಿಗೆ ಹೇಳಿದ್ದಾರೆ. ನಾನು ಪಡುತ್ತಿರುವ ಕಷ್ಟ, ಅನುಭವಿಸುತ್ತಿರುವ ದೌರ್ಜನ್ಯ ಬಗ್ಗೆ ಪೋಷಕರಲ್ಲಿ ಹೇಳುತ್ತಲೇ ಇದ್ದೆ. ಅವರು ಇದಕ್ಕೆ ಕಿವಿಗೊಡಲೇ ಇಲ್ಲ. ಹೀಗೆಲ್ಲ ಗಂಡನ ಬಗ್ಗೆ ದೂರುವುದು ಅವಮಾನ ಎಂದು ಕುಟುಂಬ ಆಕೆಯ ಮಾತನ್ನು ತಳ್ಳಿತ್ತು ಎಂದು ಮಹಿಳೆ ಹೇಳಿರುವುದಾಗಿ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ.

ದೌರ್ಜನ್ಯದಿಂದ ಕೂಡಿದ ವೈವಾಹಿಕ ಸಂಬಂಧದಿಂದ ಹೊರಬರಲು ನಿರ್ಧರಿಸಿದ ನಂತರ, ಸೋಬಿಯಾ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಇದು  ಆಕೆಯ ತಂದೆ ಮತ್ತು ಚಿಕ್ಕಪ್ಪನನ್ನು ಕೆರಳಿಸಿತ್ತು.

ಸೋಬಿಯಾ ಬಗ್ಗೆ ಕೋಪಗೊಂಡ ಪೋಷಕರು ಆಕೆ ಪತಿ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವ ಮೂಲಕ ಕುಟುಂಬಕ್ಕೆ ಅವಮಾನ ಮಾಡಿದ್ದಾಳೆ ಎಂದು ಸಿಟ್ಟುಗೊಂಡಿದ್ದರು ಎಂದಿದ್ದಾರೆ ಪೊಲೀಸರು. ಆಕೆ ತನ್ನ ಪ್ರಕರಣವನ್ನು ಹಿಂಪಡೆಯಲು ನಿರಾಕರಿಸಿದಾಗ, ಅವರು ಆಕೆಯ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿದ್ದಾರೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ.

ಇದನ್ನೂ ಓದಿ: ಅಮೆರಿಕದಲ್ಲಿ ನಕಲಿ ಕ್ಯಾನ್ಸರ್ ಔಷಧಿ ಮಾರಾಟ; ಭಾರತೀಯ ಮೂಲದ ವ್ಯಕ್ತಿಯ ಬಂಧನ

ನೌಶರೋಫೆರೋಜ್‌ನ ಹಿರಿಯ ಪೊಲೀಸ್ ಅಧೀಕ್ಷಕರು (ಎಸ್‌ಎಸ್‌ಪಿ) ಎಲ್ಲಾ ಆರೋಪಿಗಳ ವಿರುದ್ಧ ಕ್ರಮ ಮತ್ತು ಸಂತ್ರಸ್ತೆಯ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಸ್ಥಳೀಯ ಠಾಣಾಧಿಕಾರಿ (ಎಸ್‌ಎಚ್‌ಒ) ಅವರಿಗೆ ಆದೇಶಿಸಿದರು. ನಿರ್ದೇಶನಗಳಿಗೆ ಪ್ರತಿಕ್ರಿಯಿಸಿದ ಪೊಲೀಸರು ಇಲ್ಲಿಯವರೆಗೆ ಒಬ್ಬ ಶಂಕಿತ ಮುಷ್ತಾಕ್ ಷಾನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಉಳಿದ ಅಪರಾಧಿಗಳ ಹುಡುಕಾಟ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ