AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ: ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಮಗಳ ಕಾಲು ಕತ್ತರಿಸಿದ ಅಪ್ಪ

ಸೋಬಿಯಾ ಬಟೂಲ್ ಶಾ ಎಂಬ ಮಹಿಳೆ ಗಂಡನಿಂದ ವಿಚ್ಛೇದನ ಕೋರಿದ್ದಳು. ಆತ ಯಾವತ್ತೂ ಕುಟುಂಬದ ಜವಾಬ್ದಾರಿ ತೆಗೆದುಕೊಂಡಿಲ್ಲ, ಆತ ನನ್ನ ಮೇಲೆ ಹಲ್ಲೆ ನಡೆಸುತ್ತಿದ್ದ, ನಿಂದಿಸುತ್ತಿದ್ದ. ಈ ದೌರ್ಜನ್ಯದಿಂದ ಬೇಸತ್ತು ವಿಚ್ಛೇದನ ಕೋರಿದ್ದಕ್ಕಾಗಿ ನನ್ನ ಕಾಲುಗಳನ್ನು ಕತ್ತರಿಸಲಾಗಿದೆ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ.

ಪಾಕಿಸ್ತಾನ: ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಮಗಳ ಕಾಲು ಕತ್ತರಿಸಿದ ಅಪ್ಪ
ಪಾಕಿಸ್ತಾನದ ಪೊಲೀಸ್
ರಶ್ಮಿ ಕಲ್ಲಕಟ್ಟ
|

Updated on: Jul 27, 2024 | 8:34 AM

Share

ಲಾಹೋರ್ ಜುಲೈ 27: ಗಂಡ ದೌರ್ಜನ್ಯವೆಸಗುತ್ತಿದ್ದಾನೆ ಹಾಗಾಗಿ ವಿಚ್ಛೇದನ (divorce)ಬೇಕು ಎಂದು ಅರ್ಜಿ ಸಲ್ಲಿಸಿದ ಮಹಿಳೆಯ ಕಾಲುಗಳನ್ನು ಆಕೆಯ ಅಪ್ಪ ಮತ್ತು ಸಂಬಂಧಿಕರು ಸೇರಿ ಕತ್ತರಿಸಿದ ಘಟನೆಯೊಂದು ಪಾಕಿಸ್ತಾನದಲ್ಲಿ (Pakistan) ನಡೆದಿದೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ. ಪಾಕಿಸ್ತಾನದ ಪಿತೃಪ್ರಧಾನ ಸಮಾಜಗಳಲ್ಲಿ, ಮಹಿಳೆಯರ ಅಧೀನತೆಯನ್ನು ಶಾಶ್ವತಗೊಳಿಸಲು ಹಿಂಸೆಯನ್ನು ಸಾಮಾಜಿಕ ಕಾರ್ಯವಿಧಾನವಾಗಿ ಬಳಸಲಾಗಿದೆ ಎಂದು ಹೇಳಲಾಗಿದೆ.

ಸೋಬಿಯಾ ಬಟೂಲ್ ಶಾ ಎಂಬ ಮಹಿಳೆ ಗಂಡನಿಂದ ವಿಚ್ಛೇದನ ಕೋರಿದ್ದಳು. ಆತ ಯಾವತ್ತೂ ಕುಟುಂಬದ ಜವಾಬ್ದಾರಿ ತೆಗೆದುಕೊಂಡಿಲ್ಲ, ಆತ ನನ್ನ ಮೇಲೆ ಹಲ್ಲೆ ನಡೆಸುತ್ತಿದ್ದ, ನಿಂದಿಸುತ್ತಿದ್ದ. ಈ ದೌರ್ಜನ್ಯದಿಂದ ಬೇಸತ್ತು ವಿಚ್ಛೇದನ ಕೋರಿದ್ದಕ್ಕಾಗಿ ನನ್ನ ಕಾಲುಗಳನ್ನು ಕತ್ತರಿಸಲಾಗಿದೆ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ.  ಗುಲ್ ಟೌನ್‌ನಲ್ಲಿ ಆ ಕೃತ್ಯ ನಡೆದಿದೆ. ಮಹಿಳೆಗೆ ಇದು ತೀವ್ರವಾದ ದೈಹಿಕ ಮತ್ತು ಮಾನಸಿಕ ಆಘಾತವನ್ನು ಉಂಟು ಮಾಡಿದ್ದು, ಆಕೆ ಮತ್ತೆಂದೂ ನಡೆಯಲು ಸಾಧ್ಯವಾಗದ ಹಾಗೆ ಅಂಗ ವೈಕಲ್ಯವುಂಟಾಗಿದೆ ಎಂದು ವರದಿ ತಿಳಿಸಿದೆ.

ಸೋಬಿಯಾಳ ತಂದೆ ಸೈಯದ್ ಮುಸ್ತಫಾ ಷಾ ಮತ್ತು ಆಕೆಯ ಚಿಕ್ಕಪ್ಪಂದಿರಾದ ಸೈಯದ್ ಕುರ್ಬಾನ್ ಷಾ, ಎಹ್ಸಾನ್ ಶಾ, ಶಾ ನವಾಜ್ ಮತ್ತು ಮುಷ್ತಾಕ್ ಷಾ ಎಂಬವರು ಕೊಡಲಿಯಿಂದ ಕಾಲು ಕತ್ತರಿಸಿ ಓಡಿ ಹೋಗಿದ್ದಾರೆ. ರಕ್ತದ ಮಡುವಿನಲ್ಲಿ ಒದ್ದಾಡುತ್ತಾ ಆಕೆ ಸಹಾಯಕ್ಕಾಗಿ ಬೇಡುತ್ತಿದ್ದರು ಎಂದು ಜಿಯೋ ನ್ಯೂಸ್ ವರದಿ ಹೇಳಿದೆ.  ಪೊಲೀಸರು ಅಪರಾಧ ಸ್ಥಳಕ್ಕೆ ತಲುಪಿದ ತಕ್ಷಣ ಸೋಬಿಯಾ ಅವರನ್ನು ನವಾಬ್ ಶಾ ಆಸ್ಪತ್ರೆಗೆ ಸಾಗಿಸಲಾಯಿತು.

ತನ್ನ ಪತಿ ತನ್ನನ್ನು ನಿಂದಿಸುತ್ತಾನೆ. ಇಬ್ಬರು ಮಕ್ಕಳನ್ನು ಕೂಡಾ ನೋಡುವ ಜವಾಬ್ದಾರಿ ಆತನಿಗಿಲ್ಲ. ಕರಾಚಿಯಲ್ಲಿ ನಾನು ಒಬ್ಬಳೇ ಎಲ್ಲವನ್ನೂ ನಿಭಾಯಿಸಿಕೊಂಡು ಹೋಗುತ್ತಿದ್ದೇನೆ ಎಂದು ಮಹಿಳೆ ಪೊಲೀಸರಿಗೆ ಹೇಳಿದ್ದಾರೆ. ನಾನು ಪಡುತ್ತಿರುವ ಕಷ್ಟ, ಅನುಭವಿಸುತ್ತಿರುವ ದೌರ್ಜನ್ಯ ಬಗ್ಗೆ ಪೋಷಕರಲ್ಲಿ ಹೇಳುತ್ತಲೇ ಇದ್ದೆ. ಅವರು ಇದಕ್ಕೆ ಕಿವಿಗೊಡಲೇ ಇಲ್ಲ. ಹೀಗೆಲ್ಲ ಗಂಡನ ಬಗ್ಗೆ ದೂರುವುದು ಅವಮಾನ ಎಂದು ಕುಟುಂಬ ಆಕೆಯ ಮಾತನ್ನು ತಳ್ಳಿತ್ತು ಎಂದು ಮಹಿಳೆ ಹೇಳಿರುವುದಾಗಿ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ.

ದೌರ್ಜನ್ಯದಿಂದ ಕೂಡಿದ ವೈವಾಹಿಕ ಸಂಬಂಧದಿಂದ ಹೊರಬರಲು ನಿರ್ಧರಿಸಿದ ನಂತರ, ಸೋಬಿಯಾ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಇದು  ಆಕೆಯ ತಂದೆ ಮತ್ತು ಚಿಕ್ಕಪ್ಪನನ್ನು ಕೆರಳಿಸಿತ್ತು.

ಸೋಬಿಯಾ ಬಗ್ಗೆ ಕೋಪಗೊಂಡ ಪೋಷಕರು ಆಕೆ ಪತಿ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವ ಮೂಲಕ ಕುಟುಂಬಕ್ಕೆ ಅವಮಾನ ಮಾಡಿದ್ದಾಳೆ ಎಂದು ಸಿಟ್ಟುಗೊಂಡಿದ್ದರು ಎಂದಿದ್ದಾರೆ ಪೊಲೀಸರು. ಆಕೆ ತನ್ನ ಪ್ರಕರಣವನ್ನು ಹಿಂಪಡೆಯಲು ನಿರಾಕರಿಸಿದಾಗ, ಅವರು ಆಕೆಯ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿದ್ದಾರೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ.

ಇದನ್ನೂ ಓದಿ: ಅಮೆರಿಕದಲ್ಲಿ ನಕಲಿ ಕ್ಯಾನ್ಸರ್ ಔಷಧಿ ಮಾರಾಟ; ಭಾರತೀಯ ಮೂಲದ ವ್ಯಕ್ತಿಯ ಬಂಧನ

ನೌಶರೋಫೆರೋಜ್‌ನ ಹಿರಿಯ ಪೊಲೀಸ್ ಅಧೀಕ್ಷಕರು (ಎಸ್‌ಎಸ್‌ಪಿ) ಎಲ್ಲಾ ಆರೋಪಿಗಳ ವಿರುದ್ಧ ಕ್ರಮ ಮತ್ತು ಸಂತ್ರಸ್ತೆಯ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಸ್ಥಳೀಯ ಠಾಣಾಧಿಕಾರಿ (ಎಸ್‌ಎಚ್‌ಒ) ಅವರಿಗೆ ಆದೇಶಿಸಿದರು. ನಿರ್ದೇಶನಗಳಿಗೆ ಪ್ರತಿಕ್ರಿಯಿಸಿದ ಪೊಲೀಸರು ಇಲ್ಲಿಯವರೆಗೆ ಒಬ್ಬ ಶಂಕಿತ ಮುಷ್ತಾಕ್ ಷಾನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಉಳಿದ ಅಪರಾಧಿಗಳ ಹುಡುಕಾಟ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು