AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಮಹಿಳೆಯರನ್ನು ಕಾಡುತ್ತಿದೆ ಸ್ತನ ಕ್ಯಾನ್ಸರ್: ಏಷ್ಯಾದಲ್ಲೇ ಹೆಚ್ಚು ಪ್ರಕರಣಗಳು

ಪಾಕಿಸ್ತಾನದ ಸ್ತನ ಕ್ಯಾನ್ಸರ್ ಇರುವ ಹತ್ತು ಜನ ಮಹಿಳೆಯರಲ್ಲಿ ಕೇವಲ ಒಬ್ಬರು ಮಾತ್ರ ಧೀರ್ಘಾವಧಿಯವರೆಗೆ ಬದುಕುಳಿಯುತ್ತಾರೆಂದು ಅಂದಾಜಿಲಾಗಿದೆ.

ಪಾಕಿಸ್ತಾನದ ಮಹಿಳೆಯರನ್ನು ಕಾಡುತ್ತಿದೆ ಸ್ತನ ಕ್ಯಾನ್ಸರ್: ಏಷ್ಯಾದಲ್ಲೇ ಹೆಚ್ಚು ಪ್ರಕರಣಗಳು
ಪ್ರಾತಿನಿಧಿಕ ಚಿತ್ರ
Follow us
sandhya thejappa
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Nov 30, 2020 | 5:28 PM

ಇಸ್ಲಾಮಾಬಾದ್: ಏಷ್ಯಾದಲ್ಲಿಯೇ ಅತಿಹೆಚ್ಚು ಸ್ತನ ಕ್ಯಾನ್ಸರ್​ ಪ್ರಕರಣಗಳು ಪಾಕಿಸ್ತಾನದಲ್ಲಿ ಕಂಡುಬಂದಿದೆ. ಪ್ರತಿ ವರ್ಷ ಸುಮಾರು 90,000 ಪಾಕ್ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್​ ಪತ್ತೆಯಾಗುತ್ತದೆ, ಸುಮಾರು 40,000 ಮಹಿಳೆಯರು ಸಾವನ್ನಪ್ಪುತ್ತಿದ್ದಾರೆ.

ಸ್ತನ ಕ್ಯಾನ್ಸರ್ ಪತ್ತೆಯಾದ 10 ಮಂದಿಯ ಪೈಕಿ ಕೇವಲ ಇಬ್ಬರು ಮಾತ್ರ ದೀರ್ಘಾವಧಿಯವರೆಗೆ ಬದುಕುಳಿಯುತ್ತಾರೆ ಎಂದು ಅಂದಾಜಿಲಾಗಿದೆ.

ವಿಜ್ಞಾನ ಮತ್ತು ತಂತ್ರಜ್ಞಾನ ಆಯೋಗ ಆಯೋಜಿಸಿದ್ದ ‘ಸ್ತನ ಕ್ಯಾನ್ಸರ್ ಜಾಗೃತಿ: ಭರವಸೆ ನೀಡಿ, ಜೀವ ಉಳಿಸಿ’ (Breast cancer awareness: give hope, save lives)  ವೆಬಿನಾರ್​ನಲ್ಲಿ ಈ ಕುರಿತ ಅಂಕಿಅಂಶಗಳನ್ನು ಬಹಿರಂಗಪಡಿಸಲಾಯಿತು.

ವೆಬಿನಾರ್​ನಲ್ಲಿ ಮಾತನಾಡಿದ ಮಾಜಿ ರಾಯಭಾರಿ ಫೌಜಿಯಾ ನಸ್ರಿನ್​, ಜ್ಞಾನದ ಕೊರತೆ, ಸೂಕ್ತ ಸೌಲಭ್ಯಗಳು, ಕುಟುಂಬದ ಬೆಂಬಲ ಮತ್ತು ಕ್ಯಾನ್ಸರ್​ಗೆ ಸಂಬಂಧಿಸಿದ ಭಯವನ್ನು ನಿವಾರಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಮಹತ್ವವನ್ನು ಒತ್ತಿ ಹೇಳಿದರು.

ಕಾಯಿಲೆಯನ್ನು ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚಿ, ವೈದ್ಯರ ಸಲಹೆಗಳನ್ನು ಗಂಭೀರವಾಗಿ ತೆಗೆದುಕೊಂಡಾಗ ಕಾಯಿಲೆಯ ತೀವ್ರತೆ ಕಡಿಮೆ ಮಾಡಬಹುದು. ಮಹಿಳೆಯರು ಈ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಿರಬೇಕು ಎಂದು ಹೆಲ್ತ್ ಸರ್ವೀಸಸ್ ಅಕಾಡೆಮಿಯ ಮಾಜಿ ಸಹಾಯಕ ಪ್ರಾಧ್ಯಾಪಕ ಹಾಗೂ ಪಾಕಿಸ್ತಾನದ ವಿಶ್ವ ಆರೋಗ್ಯ ಸಂಸ್ಥೆಯ ಸಲಹೆಗಾರ ಡಾ.ಸಮೀನಾ ನಯೀಮ್ ನುಡಿದರು.

ನಂತರ ಮಹಿಳೆಯರ ಆರ್ಥಿಕ, ಮಾನಸಿಕ, ಸಾಂಸ್ಕೃತಿಕ ಮತ್ತು ದೈಹಿಕ ಅಗತ್ಯಗಳನ್ನು ಒಂದೇ ಸೂರಿನಡಿ ಪರಿಹರಿಸುವ ಉದ್ದೇಶದಿಂದ ಒಂದು ಸ್ತನ ಕ್ಯಾನ್ಸರ್ ಚಿಕಿತ್ಸಾಲಯವನ್ನು ಸ್ಥಾಪಿಸಲು ಪಾಕಿಸ್ತಾನ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವಿಕಿರಣ ಶಾಸ್ತ್ರ ವಿಭಾಗದ ಫರ್ಹೀನ್ ರಾಝಾ ಸಲಹೆಯನ್ನು ನೀಡಿದರು.

ಇದನ್ನೂ ಓದಿ: ನಿದ್ರೆ ಮಾತ್ರೆ ಸೇವಿಸುವುದರಿಂದ ಸಮಸ್ಯೆಗಳು ಒಂದಾ, ಎರಡಾ..?

ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು