AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಮಹಿಳೆಯರನ್ನು ಕಾಡುತ್ತಿದೆ ಸ್ತನ ಕ್ಯಾನ್ಸರ್: ಏಷ್ಯಾದಲ್ಲೇ ಹೆಚ್ಚು ಪ್ರಕರಣಗಳು

ಪಾಕಿಸ್ತಾನದ ಸ್ತನ ಕ್ಯಾನ್ಸರ್ ಇರುವ ಹತ್ತು ಜನ ಮಹಿಳೆಯರಲ್ಲಿ ಕೇವಲ ಒಬ್ಬರು ಮಾತ್ರ ಧೀರ್ಘಾವಧಿಯವರೆಗೆ ಬದುಕುಳಿಯುತ್ತಾರೆಂದು ಅಂದಾಜಿಲಾಗಿದೆ.

ಪಾಕಿಸ್ತಾನದ ಮಹಿಳೆಯರನ್ನು ಕಾಡುತ್ತಿದೆ ಸ್ತನ ಕ್ಯಾನ್ಸರ್: ಏಷ್ಯಾದಲ್ಲೇ ಹೆಚ್ಚು ಪ್ರಕರಣಗಳು
ಪ್ರಾತಿನಿಧಿಕ ಚಿತ್ರ
sandhya thejappa
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Nov 30, 2020 | 5:28 PM

Share

ಇಸ್ಲಾಮಾಬಾದ್: ಏಷ್ಯಾದಲ್ಲಿಯೇ ಅತಿಹೆಚ್ಚು ಸ್ತನ ಕ್ಯಾನ್ಸರ್​ ಪ್ರಕರಣಗಳು ಪಾಕಿಸ್ತಾನದಲ್ಲಿ ಕಂಡುಬಂದಿದೆ. ಪ್ರತಿ ವರ್ಷ ಸುಮಾರು 90,000 ಪಾಕ್ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್​ ಪತ್ತೆಯಾಗುತ್ತದೆ, ಸುಮಾರು 40,000 ಮಹಿಳೆಯರು ಸಾವನ್ನಪ್ಪುತ್ತಿದ್ದಾರೆ.

ಸ್ತನ ಕ್ಯಾನ್ಸರ್ ಪತ್ತೆಯಾದ 10 ಮಂದಿಯ ಪೈಕಿ ಕೇವಲ ಇಬ್ಬರು ಮಾತ್ರ ದೀರ್ಘಾವಧಿಯವರೆಗೆ ಬದುಕುಳಿಯುತ್ತಾರೆ ಎಂದು ಅಂದಾಜಿಲಾಗಿದೆ.

ವಿಜ್ಞಾನ ಮತ್ತು ತಂತ್ರಜ್ಞಾನ ಆಯೋಗ ಆಯೋಜಿಸಿದ್ದ ‘ಸ್ತನ ಕ್ಯಾನ್ಸರ್ ಜಾಗೃತಿ: ಭರವಸೆ ನೀಡಿ, ಜೀವ ಉಳಿಸಿ’ (Breast cancer awareness: give hope, save lives)  ವೆಬಿನಾರ್​ನಲ್ಲಿ ಈ ಕುರಿತ ಅಂಕಿಅಂಶಗಳನ್ನು ಬಹಿರಂಗಪಡಿಸಲಾಯಿತು.

ವೆಬಿನಾರ್​ನಲ್ಲಿ ಮಾತನಾಡಿದ ಮಾಜಿ ರಾಯಭಾರಿ ಫೌಜಿಯಾ ನಸ್ರಿನ್​, ಜ್ಞಾನದ ಕೊರತೆ, ಸೂಕ್ತ ಸೌಲಭ್ಯಗಳು, ಕುಟುಂಬದ ಬೆಂಬಲ ಮತ್ತು ಕ್ಯಾನ್ಸರ್​ಗೆ ಸಂಬಂಧಿಸಿದ ಭಯವನ್ನು ನಿವಾರಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಮಹತ್ವವನ್ನು ಒತ್ತಿ ಹೇಳಿದರು.

ಕಾಯಿಲೆಯನ್ನು ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚಿ, ವೈದ್ಯರ ಸಲಹೆಗಳನ್ನು ಗಂಭೀರವಾಗಿ ತೆಗೆದುಕೊಂಡಾಗ ಕಾಯಿಲೆಯ ತೀವ್ರತೆ ಕಡಿಮೆ ಮಾಡಬಹುದು. ಮಹಿಳೆಯರು ಈ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಿರಬೇಕು ಎಂದು ಹೆಲ್ತ್ ಸರ್ವೀಸಸ್ ಅಕಾಡೆಮಿಯ ಮಾಜಿ ಸಹಾಯಕ ಪ್ರಾಧ್ಯಾಪಕ ಹಾಗೂ ಪಾಕಿಸ್ತಾನದ ವಿಶ್ವ ಆರೋಗ್ಯ ಸಂಸ್ಥೆಯ ಸಲಹೆಗಾರ ಡಾ.ಸಮೀನಾ ನಯೀಮ್ ನುಡಿದರು.

ನಂತರ ಮಹಿಳೆಯರ ಆರ್ಥಿಕ, ಮಾನಸಿಕ, ಸಾಂಸ್ಕೃತಿಕ ಮತ್ತು ದೈಹಿಕ ಅಗತ್ಯಗಳನ್ನು ಒಂದೇ ಸೂರಿನಡಿ ಪರಿಹರಿಸುವ ಉದ್ದೇಶದಿಂದ ಒಂದು ಸ್ತನ ಕ್ಯಾನ್ಸರ್ ಚಿಕಿತ್ಸಾಲಯವನ್ನು ಸ್ಥಾಪಿಸಲು ಪಾಕಿಸ್ತಾನ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವಿಕಿರಣ ಶಾಸ್ತ್ರ ವಿಭಾಗದ ಫರ್ಹೀನ್ ರಾಝಾ ಸಲಹೆಯನ್ನು ನೀಡಿದರು.

ಇದನ್ನೂ ಓದಿ: ನಿದ್ರೆ ಮಾತ್ರೆ ಸೇವಿಸುವುದರಿಂದ ಸಮಸ್ಯೆಗಳು ಒಂದಾ, ಎರಡಾ..?

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ