AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024 ಜನವರಿ ಕೊನೆಯ ವಾರದಲ್ಲಿ ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆ

ಆಗಸ್ಟ್ 9 ರಂದು ಅಕಾಲಿಕವಾಗಿ ವಿಸರ್ಜನೆಯಾದ ರಾಷ್ಟ್ರೀಯ ಅಸೆಂಬ್ಲಿಯನ್ನು ವಿಸರ್ಜನೆ ಮಾಡಿದ ನಂತರ 90 ದಿನಗಳಲ್ಲಿ ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆಗಳು ನಡೆಯಲಿವೆ. ಹಿಂದಿನ ಸರ್ಕಾರವು ತನ್ನ ಅವಧಿ ಮುಗಿಯುವ ಕೆಲವೇ ದಿನಗಳ ಮೊದಲು ಹೊಸ ಜನಗಣತಿ ಪೂರ್ಣಗೊಂಡ ನಂತರ ಮತ್ತು ಹೊಸ ಕ್ಷೇತ್ರಗಳ ಗಡಿಯನ್ನು ರಚಿಸಿದ ನಂತರವೇ ಚುನಾವಣೆ ನಡೆಸಬಹುದು ಎಂದು ಘೋಷಿಸಿತು.

2024 ಜನವರಿ ಕೊನೆಯ ವಾರದಲ್ಲಿ ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆ
ಪಾಕಿಸ್ತಾನ
Follow us
ರಶ್ಮಿ ಕಲ್ಲಕಟ್ಟ
|

Updated on: Sep 21, 2023 | 6:02 PM

ಇಸ್ಲಾಮಾಬಾದ್ ಸೆಪ್ಟೆಂಬರ್ 21:ದೇಶದಲ್ಲಿ ಸಾರ್ವತ್ರಿಕ ಚುನಾವಣೆಗಳು ಜನವರಿ 2024 ರ ಕೊನೆಯ ವಾರದಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ (Pakistan) ಚುನಾವಣಾ ಆಯೋಗವು (Election commission) ಗುರುವಾರ ಹೇಳಿದೆ. ಕ್ಷೇತ್ರಗಳ ವಿಂಗಡಣೆಯ (delimitation )ಕೆಲಸವನ್ನು ತಾನು ಪರಿಶೀಲಿಸಿದ್ದು, ಕ್ಷೇತ್ರಗಳ ವಿಂಗಡಣೆಯ ಆರಂಭಿಕ ಪಟ್ಟಿಯನ್ನು ಸೆಪ್ಟೆಂಬರ್ 27 ರಂದು ಪ್ರಕಟಿಸಲಾಗುವುದು ಎಂದು ಚುನಾವಣಾ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ. ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಆಲಿಸಿದ ನಂತರ ನವೆಂಬರ್ 30 ರಂದು ಅಂತಿಮ ಪಟ್ಟಿಯನ್ನು ನೀಡಲಾಗುವುದು ಎಂದು ಅದು ಹೇಳಿದೆ.

2024ರ ಜನವರಿ ಕೊನೆಯ ವಾರದಲ್ಲಿ ಚುನಾವಣೆ ನಡೆಯಲಿದೆ ಎಂದು ಆಯೋಗ ತಿಳಿಸಿದೆ.

ಆಗಸ್ಟ್ 9 ರಂದು ಅಕಾಲಿಕವಾಗಿ ವಿಸರ್ಜನೆಯಾದ ರಾಷ್ಟ್ರೀಯ ಅಸೆಂಬ್ಲಿಯನ್ನು ವಿಸರ್ಜನೆ ಮಾಡಿದ ನಂತರ 90 ದಿನಗಳಲ್ಲಿ ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆಗಳು ನಡೆಯಲಿವೆ. ಹಿಂದಿನ ಸರ್ಕಾರವು ತನ್ನ ಅವಧಿ ಮುಗಿಯುವ ಕೆಲವೇ ದಿನಗಳ ಮೊದಲು ಹೊಸ ಜನಗಣತಿ ಪೂರ್ಣಗೊಂಡ ನಂತರ ಮತ್ತು ಹೊಸ ಕ್ಷೇತ್ರಗಳ ಗಡಿಯನ್ನು ರಚಿಸಿದ ನಂತರವೇ ಚುನಾವಣೆ ನಡೆಸಬಹುದು ಎಂದು ಘೋಷಿಸಿತು.

ಈ ಕ್ರಮವು 90 ದಿನಗಳೊಳಗೆ ನಡೆಯಬೇಕಿದ್ದ ಚುನಾವಣೆಯು ಮುಂದಿನ ವರ್ಷಕ್ಕೆ ವಿಳಂಬವಾಗಬಹುದು ಎಂಬ ಆತಂಕವನ್ನು ಉಂಟುಮಾಡಿದೆ. ಏಕೆಂದರೆ ಕ್ಷೇತ್ರ ವಿಂಗಡಣೆ ಪ್ರಕ್ರಿಯೆಯು ಪೂರ್ಣಗೊಳ್ಳಲು ಸುಮಾರು ನಾಲ್ಕು ತಿಂಗಳುಗಳನ್ನು ತೆಗೆದುಕೊಳ್ಳುತ್ತದೆ. ಆದಷ್ಟು ಬೇಗನೆ ಚುನಾವಣೆಗಳಿಗೆ ಒತ್ತಾಯಿಸಿದ ಹಲವಾರು ರಾಜಕೀಯ ಪಕ್ಷಗಳಿಂದ ಇಸಿಪಿ ಮೇಲೆ ಹೆಚ್ಚುತ್ತಿರುವ ಒತ್ತಡದ ಮಧ್ಯೆ ಡಿಲಿಮಿಟೇಶನ್‌ನ ಅವಧಿಯನ್ನು ಕಡಿಮೆ ಮಾಡುವ ನಿರ್ಧಾರವು ಬಂದಿದೆ.

ಇದನ್ನೂ ಓದಿ:  ಅದ್ದೂರಿ ಮದುವೆ, ಬಾಲಿವುಡ್ ಸೆಲಬ್ರಿಟಿಗಳ ಪಾತ್ರ, ಪಾಕಿಸ್ತಾನದ ನಂಟು; ಬೆಟ್ಟಿಂಗ್ ಮಾದೇವನ ಕರ್ಮಕಾಂಡ

ಇಸಿಪಿ 120 ದಿನಗಳಲ್ಲಿ ಡಿಲಿಮಿಟೇಶನ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಸಂವಿಧಾನವು ಹೇಳುತ್ತದೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?