AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024 ಜನವರಿ ಕೊನೆಯ ವಾರದಲ್ಲಿ ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆ

ಆಗಸ್ಟ್ 9 ರಂದು ಅಕಾಲಿಕವಾಗಿ ವಿಸರ್ಜನೆಯಾದ ರಾಷ್ಟ್ರೀಯ ಅಸೆಂಬ್ಲಿಯನ್ನು ವಿಸರ್ಜನೆ ಮಾಡಿದ ನಂತರ 90 ದಿನಗಳಲ್ಲಿ ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆಗಳು ನಡೆಯಲಿವೆ. ಹಿಂದಿನ ಸರ್ಕಾರವು ತನ್ನ ಅವಧಿ ಮುಗಿಯುವ ಕೆಲವೇ ದಿನಗಳ ಮೊದಲು ಹೊಸ ಜನಗಣತಿ ಪೂರ್ಣಗೊಂಡ ನಂತರ ಮತ್ತು ಹೊಸ ಕ್ಷೇತ್ರಗಳ ಗಡಿಯನ್ನು ರಚಿಸಿದ ನಂತರವೇ ಚುನಾವಣೆ ನಡೆಸಬಹುದು ಎಂದು ಘೋಷಿಸಿತು.

2024 ಜನವರಿ ಕೊನೆಯ ವಾರದಲ್ಲಿ ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆ
ಪಾಕಿಸ್ತಾನ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Sep 21, 2023 | 6:02 PM

Share

ಇಸ್ಲಾಮಾಬಾದ್ ಸೆಪ್ಟೆಂಬರ್ 21:ದೇಶದಲ್ಲಿ ಸಾರ್ವತ್ರಿಕ ಚುನಾವಣೆಗಳು ಜನವರಿ 2024 ರ ಕೊನೆಯ ವಾರದಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ (Pakistan) ಚುನಾವಣಾ ಆಯೋಗವು (Election commission) ಗುರುವಾರ ಹೇಳಿದೆ. ಕ್ಷೇತ್ರಗಳ ವಿಂಗಡಣೆಯ (delimitation )ಕೆಲಸವನ್ನು ತಾನು ಪರಿಶೀಲಿಸಿದ್ದು, ಕ್ಷೇತ್ರಗಳ ವಿಂಗಡಣೆಯ ಆರಂಭಿಕ ಪಟ್ಟಿಯನ್ನು ಸೆಪ್ಟೆಂಬರ್ 27 ರಂದು ಪ್ರಕಟಿಸಲಾಗುವುದು ಎಂದು ಚುನಾವಣಾ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ. ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಆಲಿಸಿದ ನಂತರ ನವೆಂಬರ್ 30 ರಂದು ಅಂತಿಮ ಪಟ್ಟಿಯನ್ನು ನೀಡಲಾಗುವುದು ಎಂದು ಅದು ಹೇಳಿದೆ.

2024ರ ಜನವರಿ ಕೊನೆಯ ವಾರದಲ್ಲಿ ಚುನಾವಣೆ ನಡೆಯಲಿದೆ ಎಂದು ಆಯೋಗ ತಿಳಿಸಿದೆ.

ಆಗಸ್ಟ್ 9 ರಂದು ಅಕಾಲಿಕವಾಗಿ ವಿಸರ್ಜನೆಯಾದ ರಾಷ್ಟ್ರೀಯ ಅಸೆಂಬ್ಲಿಯನ್ನು ವಿಸರ್ಜನೆ ಮಾಡಿದ ನಂತರ 90 ದಿನಗಳಲ್ಲಿ ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆಗಳು ನಡೆಯಲಿವೆ. ಹಿಂದಿನ ಸರ್ಕಾರವು ತನ್ನ ಅವಧಿ ಮುಗಿಯುವ ಕೆಲವೇ ದಿನಗಳ ಮೊದಲು ಹೊಸ ಜನಗಣತಿ ಪೂರ್ಣಗೊಂಡ ನಂತರ ಮತ್ತು ಹೊಸ ಕ್ಷೇತ್ರಗಳ ಗಡಿಯನ್ನು ರಚಿಸಿದ ನಂತರವೇ ಚುನಾವಣೆ ನಡೆಸಬಹುದು ಎಂದು ಘೋಷಿಸಿತು.

ಈ ಕ್ರಮವು 90 ದಿನಗಳೊಳಗೆ ನಡೆಯಬೇಕಿದ್ದ ಚುನಾವಣೆಯು ಮುಂದಿನ ವರ್ಷಕ್ಕೆ ವಿಳಂಬವಾಗಬಹುದು ಎಂಬ ಆತಂಕವನ್ನು ಉಂಟುಮಾಡಿದೆ. ಏಕೆಂದರೆ ಕ್ಷೇತ್ರ ವಿಂಗಡಣೆ ಪ್ರಕ್ರಿಯೆಯು ಪೂರ್ಣಗೊಳ್ಳಲು ಸುಮಾರು ನಾಲ್ಕು ತಿಂಗಳುಗಳನ್ನು ತೆಗೆದುಕೊಳ್ಳುತ್ತದೆ. ಆದಷ್ಟು ಬೇಗನೆ ಚುನಾವಣೆಗಳಿಗೆ ಒತ್ತಾಯಿಸಿದ ಹಲವಾರು ರಾಜಕೀಯ ಪಕ್ಷಗಳಿಂದ ಇಸಿಪಿ ಮೇಲೆ ಹೆಚ್ಚುತ್ತಿರುವ ಒತ್ತಡದ ಮಧ್ಯೆ ಡಿಲಿಮಿಟೇಶನ್‌ನ ಅವಧಿಯನ್ನು ಕಡಿಮೆ ಮಾಡುವ ನಿರ್ಧಾರವು ಬಂದಿದೆ.

ಇದನ್ನೂ ಓದಿ:  ಅದ್ದೂರಿ ಮದುವೆ, ಬಾಲಿವುಡ್ ಸೆಲಬ್ರಿಟಿಗಳ ಪಾತ್ರ, ಪಾಕಿಸ್ತಾನದ ನಂಟು; ಬೆಟ್ಟಿಂಗ್ ಮಾದೇವನ ಕರ್ಮಕಾಂಡ

ಇಸಿಪಿ 120 ದಿನಗಳಲ್ಲಿ ಡಿಲಿಮಿಟೇಶನ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಸಂವಿಧಾನವು ಹೇಳುತ್ತದೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ