ಜಲಗಡಿ ಪ್ರವೇಶಿಸಿದ ಭಾರತದ ಜಲಾಂತರ್ಗಾಮಿ ನೌಕೆಯನ್ನು ತಡೆದಿದ್ದೇವೆ ಎಂದ ಪಾಕ್ ನೌಕಾ ಪಡೆ

ಅಕ್ಟೋಬರ್ 16 ರಂದು ಪಾಕಿಸ್ತಾನದ ನೌಕಾಪಡೆಯ (PN) ಗಸ್ತು ವಿಮಾನವು ಭಾರತೀಯ ಜಲಾಂತರ್ಗಾಮಿ ನೌಕೆ ಪತ್ತೆ ಮಾಡಿದಾಗ ಈ ಘಟನೆ ಸಂಭವಿಸಿದೆ ಎಂದು ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ.

ಜಲಗಡಿ ಪ್ರವೇಶಿಸಿದ ಭಾರತದ ಜಲಾಂತರ್ಗಾಮಿ ನೌಕೆಯನ್ನು ತಡೆದಿದ್ದೇವೆ ಎಂದ ಪಾಕ್ ನೌಕಾ ಪಡೆ
ಪಾಕಿಸ್ತಾನ ನೌಕಾಪಡೆ
Follow us
| Updated By: ರಶ್ಮಿ ಕಲ್ಲಕಟ್ಟ

Updated on: Oct 19, 2021 | 7:59 PM

ದೆಹಲಿ: ಪಾಕಿಸ್ತಾನದ ಸೇನೆಯು ಮಂಗಳವಾರ ತನ್ನ ನೌಕಾಪಡೆಯು ಕಳೆದ ವಾರ ಭಾರತದ ಜಲಾಂತರ್ಗಾಮಿ ನೌಕೆಯನ್ನು ತಮ್ಮ ದೇಶದ ಜಲಪ್ರದೇಶಕ್ಕೆ ಪ್ರವೇಶಿಸದಂತೆ ನಿರ್ಬಂಧಿಸಿದೆ ಎಂದು ಹೇಳಿದೆ. ಅಕ್ಟೋಬರ್ 16 ರಂದು ಪಾಕಿಸ್ತಾನದ ನೌಕಾಪಡೆಯ (PN) ಗಸ್ತು ವಿಮಾನವು ಭಾರತೀಯ ಜಲಾಂತರ್ಗಾಮಿ ನೌಕೆ ಪತ್ತೆ ಮಾಡಿದಾಗ ಈ ಘಟನೆ ಸಂಭವಿಸಿದೆ ಎಂದು ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ. ಹೇಳಿಕೆಯ ಪ್ರಕಾರ ನೌಕಾಪಡೆಯು “2021 ಅಕ್ಟೋಬರ್ 16ರಂದು ಭಾರತೀಯ ಜಲಾಂತರ್ಗಾಮಿ ನೌಕೆಯನ್ನು ಪತ್ತೆ ಮಾಡಿ ನಿರ್ಬಂಧಿಸಿತು”. ಚಾಲ್ತಿಯಲ್ಲಿರುವ ಭದ್ರತಾ ವಾತಾವರಣದಲ್ಲಿ ಪಾಕಿಸ್ತಾನದ ನೌಕಾಪಡೆಯು ದೇಶದ ಕಡಲ ಗಡಿಗಳನ್ನು ರಕ್ಷಿಸಲು ಕಟ್ಟುನಿಟ್ಟಾದ ಮೇಲ್ವಿಚಾರಣಾ ನಿಗಾ ಇರಿಸಲಾಗಿದೆ ಎಂದು ಅದು ಹೇಳಿದೆ.

ಹೇಳಿಕೆಯ ಪ್ರಕಾರ ಪಾಕಿಸ್ತಾನದ ನೌಕಾಪಡೆಯ ಲಾಂಗ್ ರೇಂಜ್ ಮ್ಯಾರಿಟೈಮ್ ಪೆಟ್ರೋಲ್ ಏರ್‌ಕ್ರಾಫ್ಟ್‌ನಿಂದ ಭಾರತೀಯ ನೌಕಾ ಜಲಾಂತರ್ಗಾಮಿ ನೌಕೆಯನ್ನು ಪತ್ತೆಹಚ್ಚಿ ಮತ್ತು ಟ್ರ್ಯಾಕ್ ಮಾಡಲಾಗುತ್ತಿರುವ ಮೂರನೇ ಘಟನೆ ಇದಾಗಿದೆ.  ಸೇನೆಯು ಹೇಳಲಾದ ಘಟನೆಯ ಸಣ್ಣ ದೃಶ್ಯ ತುಣುಕನ್ನು ಸಹ ಹಂಚಿಕೊಂಡಿದೆ.

ಭಾರತೀಯ ಜಲಾಂತರ್ಗಾಮಿ ನೌಕೆಯ ಪ್ರವೇಶ ಪ್ರಯತ್ನವನ್ನು ನೌಕಾಪಡೆ ಪತ್ತೆಹಚ್ಚಿದಾಗ ಮತ್ತು ವಿಫಲಗೊಳಿಸಿದಾಗ ಈ ರೀತಿಯ ಘಟನೆಯನ್ನು ಕೊನೆಯದಾಗಿ ಮಾರ್ಚ್ 2019 ರಲ್ಲಿ ವರದಿ ಮಾಡಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಜಲಾಂತರ್ಗಾಮಿ ನೌಕೆಯನ್ನು ತಡೆಯಲು ಪಾಕಿಸ್ತಾನದ ನೌಕಾಪಡೆಯು ತನ್ನ ವಿಶೇಷ ಕೌಶಲ್ಯಗಳನ್ನು ಬಳಸಿತು, ಅದನ್ನು ಪಾಕಿಸ್ತಾನದ ನೀರಿನಲ್ಲಿ ಪ್ರವೇಶಿಸದಂತೆ ಯಶಸ್ವಿಯಾಗಿ ಇರಿಸಿತು, “ಎಂದು ಪಿಎನ್ ಈ ಹಿಂದೆ ಹೇಳಿತ್ತು. ನವೆಂಬರ್ 2016 ರಲ್ಲಿ ಭಾರತೀಯ ಜಲಾಂತರ್ಗಾಮಿ ನೌಕೆಯನ್ನು ಪಾಕಿಸ್ತಾನದ ನೀರಿನಿಂದ ಹೊರಗೆ ತಳ್ಳಲಾಯಿತು ಎಂದು ಅದು ಹೇಳಿಕೊಂಡಿದೆ.

ಇದನ್ನೂ ಓದಿ: T20 World Cup: ಕೊಳಕು ಮನಸ್ಥಿತಿಯ ದೇಶದ ಜೊತೆ ಆಟವಾಡುವ ಅವಶ್ಯಕತೆ ಏನಿದೆ; ಜನರಲ್ ವಿಕೆ ಸಿಂಗ್

ತಾಜಾ ಸುದ್ದಿ
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್