AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Papua New Guinea Earthquake: ಪಪುವಾ ನ್ಯೂ ಗಿನಿಯಾದಲ್ಲಿ ಪ್ರಬಲ ಭೂಕಂಪ: 7.0 ತೀವ್ರತೆ ದಾಖಲು, ಸುನಾಮಿ ಎಚ್ಚರಿಕೆ

ಪಪುವಾ ನ್ಯೂ ಗಿನಿಯಾದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ, ರಿಕ್ಟರ್ ಮಾಪಕದಲ್ಲಿ 7.0 ತೀವ್ರತೆ ದಾಖಲಾಗಿದೆ. ಟಿಬೆಟ್ ಮತ್ತು ಆಸ್ಟ್ರೇಲಿಯಾದ ಸಮೀಪವಿರುವ ಪಪುವಾ ನ್ಯೂಗಿನಿಯಾದಲ್ಲಿ ಸೋಮವಾರ (ಮಾರ್ಚ್ 3) ಬೆಳಗ್ಗೆ (ಸ್ಥಳೀಯ ಕಾಲಮಾನ) ಭೂಕಂಪನ ಸಂಭವಿಸಿದೆ.

Papua New Guinea Earthquake: ಪಪುವಾ ನ್ಯೂ ಗಿನಿಯಾದಲ್ಲಿ ಪ್ರಬಲ ಭೂಕಂಪ: 7.0 ತೀವ್ರತೆ ದಾಖಲು, ಸುನಾಮಿ ಎಚ್ಚರಿಕೆ
ಭೂಕಂಪ
Follow us
ನಯನಾ ರಾಜೀವ್
|

Updated on: Apr 03, 2023 | 8:03 AM

ಪಪುವಾ ನ್ಯೂ ಗಿನಿಯಾದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ, ರಿಕ್ಟರ್ ಮಾಪಕದಲ್ಲಿ 7.0 ತೀವ್ರತೆ ದಾಖಲಾಗಿದೆ. ಟಿಬೆಟ್ ಮತ್ತು ಆಸ್ಟ್ರೇಲಿಯಾದ ಸಮೀಪವಿರುವ ಪಪುವಾ ನ್ಯೂಗಿನಿಯಾದಲ್ಲಿ ಸೋಮವಾರ (ಮಾರ್ಚ್ 3) ಬೆಳಗ್ಗೆ (ಸ್ಥಳೀಯ ಕಾಲಮಾನ) ಭೂಕಂಪನ ಸಂಭವಿಸಿದೆ. ಟಿಬೆಟ್‌ನ ಶಿಜಾಂಗ್‌ನಲ್ಲಿ ರಿಕ್ಟರ್ ಮಾಪಕದಲ್ಲಿ 4.2 ಅಳತೆಯ ಭೂಕಂಪ ಸಂಭವಿಸಿದರೆ, ವಾಯುವ್ಯ ಪಪುವಾ ನ್ಯೂಗಿನಿಯಾದಲ್ಲಿ 7.0 ಅಳತೆಯ ಪ್ರಬಲ ಭೂಕಂಪ ಸಂಭವಿಸಿದೆ.

ಸೋಮವಾರ ಬೆಳಗ್ಗೆ ಪಪುವಾ ನ್ಯೂಗಿನಿಯಾದಲ್ಲಿ ಸಂಭವಿಸಿದ ಭೂಕಂಪವು ಕರಾವಳಿ ಪಟ್ಟಣವಾದ ವೆವಾಕ್‌ನಿಂದ 97 ಕಿಲೋಮೀಟರ್ (60 ಮೈಲುಗಳು) 62 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ತಿಳಿಸಿದೆ. ಸ್ಥಳೀಯ ಕಾಲಮಾನ ಮುಂಜಾನೆ 4 ಗಂಟೆ ಸುಮಾರಿಗೆ ಈ ಭೂಕಂಪ ಸಂಭವಿಸಿದೆ.

ಮತ್ತಷ್ಟು ಓದಿ: Afghanistan Earthquake: ಅಫ್ಘಾನಿಸ್ತಾನದ ಫಯಾಜಾಬಾದ್​ನಲ್ಲಿ 4.3 ತೀವ್ರತೆಯ ಭೂಕಂಪ

ಈ ಪ್ರದೇಶವು ಕಡಿಮೆ ಜನಸಂಖ್ಯೆಯನ್ನು ಹೊಂದಿದ್ದರೂ, ಅಲ್ಲಿ ವಾಸಿಸುವ ಜನರಿಗೆ ಹಾನಿಯಾಗುವ ಸಾಧ್ಯತೆಯಿದೆ ಎಂದು USGS ಹೇಳುತ್ತದೆ. ದ್ರವೀಕರಣ ಎಂದು ಕರೆಯಲ್ಪಡುವ ನೆಲದ ಈ ಸಡಿಲಗೊಳಿಸುವಿಕೆಯು ಗಣನೀಯವಾಗಿ ನೆಲದ ಕುಸಿತಕ್ಕೆ ಕಾರಣವಾಗಬಹುದು ಎಂದು ಭೂಕಂಪಶಾಸ್ತ್ರ ಸಂಸ್ಥೆ ಹೇಳಿದೆ.

ಈ ಎರಡೂ ಸಂದರ್ಭಗಳಲ್ಲಿ, ದೊಡ್ಡ ನಷ್ಟವಾಗಬಹುದು. ಇಂಡೋನೇಷ್ಯಾ ಗಡಿಯಿಂದ ಪೂರ್ವಕ್ಕೆ 100 ಕಿಲೋಮೀಟರ್ ದೂರದಲ್ಲಿರುವ ಪಪುವಾ ನ್ಯೂಗಿನಿಯಾ ದ್ವೀಪದಲ್ಲಿ ಈ ಭೂಕಂಪವು ಇಡೀ ಪ್ರದೇಶವನ್ನು ನಡುಗಿಸಿದೆ ಎಂದು ವರದಿಯಾಗಿದೆ.

ಹೆಚ್ಚು ಭೂಕಂಪ ಸಂಭವಿಸಿದ ಭಾಗವು ನ್ಯೂ ಬ್ರಿಟನ್ ಪ್ರದೇಶವಾಗಿದೆ. ಇದು ಪೂರ್ವ ಪಪುವಾ ನ್ಯೂಗಿನಿಯಾದ ದ್ವೀಪಸಮೂಹದ ಭಾಗವಾಗಿದೆ. ಈ ವರ್ಷದ ಫೆಬ್ರವರಿ ಅಂತ್ಯದಲ್ಲಿಯೂ 6.2 ತೀವ್ರತೆಯ ಭೂಕಂಪ ಸಂಭವಿಸಿತ್ತು. ಈ ಭೂಕಂಪದಿಂದ ಸಾಕಷ್ಟು ಹಾನಿಯೂ ಸಂಭವಿಸಿದೆ.

ಕರಾವಳಿ ನಗರವಾದ ವೆವಾಕ್‌ನಿಂದ 97 ಕಿಮೀ ದೂರದಲ್ಲಿ 62 ಕಿಮೀ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು USGS ಹೇಳಿದೆ. ಅದರ ಅಪಾಯ ಇನ್ನೂ ತಪ್ಪಿಲ್ಲ. ಈ ಭೂಕಂಪದಿಂದಾಗಿ ಸುನಾಮಿ ಅಪಾಯವೂ ಇದೆ, ಆದರೆ ಇನ್ನೂ ಎಚ್ಚರಿಕೆ ನೀಡಲಾಗಿಲ್ಲ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?