AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕ ಸಾವು: ಜೆಡ್ಡಾದಿಂದ ಹೈದರಾಬಾದ್​ಗೆ ಬರುತ್ತಿದ್ದ ಇಂಡಿಗೋ ವಿಮಾನ ಕರಾಚಿಯಲ್ಲಿ ತುರ್ತು ಭೂಸ್ಪರ್ಶ

ಜೆಡ್ಡಾ(Jeddah)ದಿಂದ ಹೈದರಾಬಾದ್​(Hyderabad)ಗೆ ಬರುತ್ತಿದ್ದ ಇಂಡಿಗೋ(IndiGo) ವಿಮಾನದಲ್ಲಿ ಪ್ರಯಾಣಿಕರೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಕರಾಚಿಯಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಯಿತು. ಜೆಡ್ಡಾದಿಂದ ಹೈದರಾಬಾದ್‌ಗೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಕರಾಚಿಯಲ್ಲಿ ವಿಮಾನವನ್ನು ಇಳಿಸಲಾಯಿತು.

ಪ್ರಯಾಣಿಕ ಸಾವು: ಜೆಡ್ಡಾದಿಂದ ಹೈದರಾಬಾದ್​ಗೆ ಬರುತ್ತಿದ್ದ ಇಂಡಿಗೋ ವಿಮಾನ ಕರಾಚಿಯಲ್ಲಿ ತುರ್ತು ಭೂಸ್ಪರ್ಶ
ಇಂಡಿಗೋ ವಿಮಾನ
ನಯನಾ ರಾಜೀವ್
|

Updated on:Nov 24, 2023 | 10:09 AM

Share

ಜೆಡ್ಡಾ(Jeddah)ದಿಂದ ಹೈದರಾಬಾದ್​(Hyderabad)ಗೆ ಬರುತ್ತಿದ್ದ ಇಂಡಿಗೋ(IndiGo) ವಿಮಾನದಲ್ಲಿ ಪ್ರಯಾಣಿಕರೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಕರಾಚಿಯಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಯಿತು. ಜೆಡ್ಡಾದಿಂದ ಹೈದರಾಬಾದ್‌ಗೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಕರಾಚಿಯಲ್ಲಿ ವಿಮಾನವನ್ನು ಇಳಿಸಲಾಯಿತು.

ಪ್ರಯಾಣಿಕರಿಗೆ ಸೂಕ್ತ ಚಿಕಿತ್ಸೆ ನೀಡಿದರೂ ವೈದ್ಯರು ಆತನನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಇಂಡಿಗೋ ಅಧಿಕಾರಿಗಳು ಮೃತರ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದಾರೆ ಎಂಬುದು ತಿಳಿದುಬಂದಿದೆ. ವೈದ್ಯಕೀಯ ತುರ್ತುಸ್ಥಿತಿಯಿಂದಾಗಿ ಜೆಡ್ಡಾದಿಂದ ಹೈದರಾಬಾದ್‌ಗೆ 6E68 ವಿಮಾನವು ಕರಾಚಿಯಲ್ಲಿ ದೀರ್ಘ ನಿಲುಗಡೆ ಮಾಡಬೇಕಾಯಿತು ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ಘೋಷಿಸಿದ ನಂತರ ಔಪಚಾರಿಕತೆಗಳನ್ನು ಪೂರ್ಣಗೊಳಿಸಲಾಯಿತು. ಇದಾದ ಬಳಿಕ ಗುರುವಾರ ಬೆಳಗ್ಗೆ ವಿಮಾನ ಹೈದರಾಬಾದ್‌ಗೆ ಬಂದಿಳಿಯಿತು.

ಮತ್ತಷ್ಟು ಓದಿ: Air India: ದೆಹಲಿಯಿಂದ ಅಮೆರಿಕಕ್ಕೆ ಹೊರಟಿದ್ದ ಏರ್​ ಇಂಡಿಯಾ ವಿಮಾನ ಸ್ವೀಡನ್​ನಲ್ಲಿ ತುರ್ತು ಭೂಸ್ಪರ್ಶ

ಫ್ಲೈಟ್ ಕ್ಯಾಪ್ಟನ್ ವಿಮಾನವನ್ನು ಕರಾಚಿಗೆ ತಿರುಗಿಸಿದರು ಎಂದು ಇಂಡಿಗೋ ಹೇಳಿಕೆಯಲ್ಲಿ ತಿಳಿಸಿದೆ. ವಿಮಾನವನ್ನು ಇಳಿಸಿದ ನಂತರ ಪ್ರಯಾಣಿಕನನ್ನು ಪರೀಕ್ಷಿಸಿದ ವೈದ್ಯರು ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ. ಏರ್‌ಲೈನ್ಸ್ ಪ್ರಕಾರ, ಎಲ್ಲಾ ಔಪಚಾರಿಕತೆಗಳನ್ನು ಪೂರ್ಣಗೊಳಿಸಿದ ನಂತರ, ವಿಮಾನವು ಕರಾಚಿಯಿಂದ ಹೊರಟು ಗುರುವಾರ ಬೆಳಗ್ಗೆ 09.08 ಕ್ಕೆ ಹೈದರಾಬಾದ್‌ಗೆ ಬಂದಿಳಿಯಿತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:08 am, Fri, 24 November 23

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ