AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ: ರನ್‌ವೇಯಿಂದ ಸ್ಕಿಡ್ ಆಗಿ ಹೊತ್ತಿ ಉರಿದ ಟಿಬೆಟ್ ಏರ್‌ಲೈನ್ಸ್‌ನ ವಿಮಾನ; ಪ್ರಯಾಣಿಕರು ಸುರಕ್ಷಿತ

"ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ" ಎಂದು ಟಿಬೆಟ್ ಏರ್ ಲೈನ್ಸ್  ಹೇಳಿಕೆಯಲ್ಲಿ ತಿಳಿಸಿದೆ. ಸಣ್ಣಪುಟ್ಟಗಾಯಗೊಂಡ 40 ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚೀನಾ: ರನ್‌ವೇಯಿಂದ ಸ್ಕಿಡ್ ಆಗಿ ಹೊತ್ತಿ ಉರಿದ ಟಿಬೆಟ್ ಏರ್‌ಲೈನ್ಸ್‌ನ ವಿಮಾನ; ಪ್ರಯಾಣಿಕರು ಸುರಕ್ಷಿತ
ಹೊತ್ತಿ ಉರಿದ ವಿಮಾನ
TV9 Web
| Edited By: |

Updated on:May 12, 2022 | 9:55 AM

Share

ಚೀನಾದ ಟಿಬೆಟ್ ಏರ್‌ಲೈನ್ಸ್‌ನ (Tibet Airlines) ಪ್ರಯಾಣಿಕ ವಿಮಾನವು ಗುರುವಾರ ದೇಶದ ನೈಋತ್ಯ ಚಾಂಗ್‌ಕಿಂಗ್ ನಗರದಲ್ಲಿ ಟೇಕಾಫ್ ಆಗುವಾಗ ರನ್‌ವೇಯಿಂದ ಸ್ಕಿಡ್ ಆಗಿ ಬೆಂಕಿ ಹೊತ್ತಿಕೊಂಡಿದೆ. ಸಾವುನೋವುಗಳ  ಬಗ್ಗೆ ತಕ್ಷಣವೇ ತಿಳಿದುಬಂದಿಲ್ಲ ಎಂದು ಸರ್ಕಾರಿ ಮಾಧ್ಯಮ ಸಿಜಿಟಿಎನ್ ವರದಿ ಮಾಡಿದೆ. ಚಾಂಗ್‌ಕಿಂಗ್ ಜಿಯಾಂಗ್‌ಬೀ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (Chongqing Jiangbei international airport) ಟಾರ್‌ಮ್ಯಾಕ್‌ನಲ್ಲಿ ಟಿಬೆಟ್ ಏರ್‌ಲೈನ್ಸ್ ವಿಮಾನದ ಹೊತ್ತಿ ಉರಿಯುತ್ತಿರುವುದು ವಿಡಿಯೊದಲ್ಲಿ ಕಾಣಿಸುತ್ತದೆ. ಹಿಂದಿನ ಬಾಗಿಲಿನ ಇವಾಕ್ಯುವೇಷನ್ ಸ್ಲೈಡ್ ಮೂಲಕ ಜನರು ತಪ್ಪಿಸಿಕೊಂಡ ನಂತರ ವಿಮಾನದಿಂದ ಓಡುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದು. ಚೀನಾದ (China) ವಿಮಾನ ನಿಲ್ದಾಣದಲ್ಲಿ ರನ್‌ವೇಯಿಂದ ಜಾರಿದ ನಂತರ ಟಿಬೆಟ್ ಏರ್‌ಲೈನ್ಸ್ ವಿಮಾನವು ಗುರುವಾರ ಬೆಂಕಿಗೆ ಆಹುತಿಯಾಗಿದೆ. ಆದರೆ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು “ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ” ಎಂದು ಏರ್‌ಲೈನ್ಸ್ ತಿಳಿಸಿದೆ. 113 ಪ್ರಯಾಣಿಕರು ಮತ್ತು ಒಂಬತ್ತು ಸಿಬ್ಬಂದಿಯನ್ನು ಹೊತ್ತ ವಿಮಾನವು ನೈಋತ್ಯ ನಗರವಾದ ಚಾಂಗ್‌ಕಿಂಗ್‌ನಿಂದ ಟಿಬೆಟ್‌ನ ನೈಂಗ್‌ಚಿಗೆ ತೆರಳುತ್ತಿದ್ದಾಗ “ಸಮಸ್ಯೆ” ಗಮನಕ್ಕೆ ಬಂತು. ತಕ್ಷಣವೇ ಟೇಕ್-ಆಫ್ ಅನ್ನು ಸ್ಥಗಿತಗೊಳಿಸಲಾಯಿತು. ಇದರಿಂದಾಗಿ ಜೆಟ್ ರನ್‌ವೇಯಲ್ಲೇ ಉಳಿಯಿತು ಎಂದು ಕಂಪನಿ ಹೇಳಿಕೆಯಲ್ಲಿ ತಿಳಿಸಿದೆ.

“ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ” ಎಂದು ಟಿಬೆಟ್ ಏರ್ ಲೈನ್ಸ್  ಹೇಳಿಕೆಯಲ್ಲಿ ತಿಳಿಸಿದೆ. ಸಣ್ಣಪುಟ್ಟಗಾಯಗೊಂಡ 40 ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಟೇಕ್-ಆಫ್ ಸಮಯದಲ್ಲಿ ಟಿವಿ9833 ಫ್ಲೈಟ್ ರನ್‌ವೇಯಿಂದ ಹೊರಗೆ ಜಾರಿದೆ. “ವಿಮಾನದ ತುದಿಯ ಎಡಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ” ಎಂದು ಚಾಂಗ್‌ಕಿಂಗ್ ಜಿಯಾಂಗ್‌ಬೀ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಪ್ರತ್ಯೇಕ ಹೇಳಿಕೆಯಲ್ಲಿ ತಿಳಿಸಿದೆ.

ಚಾಂಗ್‌ಕಿಂಗ್ ಜಿಯಾಂಗ್‌ಬೀ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯಾಚರಣೆಗಳು ನಂತರ ಸಹಜ ಸ್ಥಿತಿಗೆ ಮರಳಿದೆ. “ಅಪಘಾತಕ್ಕೆ ಕಾರಣವನ್ನು ತನಿಖೆ ಮಾಡಲಾಗುತ್ತಿದೆ” ಎಂದು ವಿಮಾನ ನಿಲ್ದಾಣ ತಿಳಿಸಿದೆ.

Published On - 9:22 am, Thu, 12 May 22

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?