AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ: ರನ್‌ವೇಯಿಂದ ಸ್ಕಿಡ್ ಆಗಿ ಹೊತ್ತಿ ಉರಿದ ಟಿಬೆಟ್ ಏರ್‌ಲೈನ್ಸ್‌ನ ವಿಮಾನ; ಪ್ರಯಾಣಿಕರು ಸುರಕ್ಷಿತ

"ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ" ಎಂದು ಟಿಬೆಟ್ ಏರ್ ಲೈನ್ಸ್  ಹೇಳಿಕೆಯಲ್ಲಿ ತಿಳಿಸಿದೆ. ಸಣ್ಣಪುಟ್ಟಗಾಯಗೊಂಡ 40 ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚೀನಾ: ರನ್‌ವೇಯಿಂದ ಸ್ಕಿಡ್ ಆಗಿ ಹೊತ್ತಿ ಉರಿದ ಟಿಬೆಟ್ ಏರ್‌ಲೈನ್ಸ್‌ನ ವಿಮಾನ; ಪ್ರಯಾಣಿಕರು ಸುರಕ್ಷಿತ
ಹೊತ್ತಿ ಉರಿದ ವಿಮಾನ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:May 12, 2022 | 9:55 AM

Share

ಚೀನಾದ ಟಿಬೆಟ್ ಏರ್‌ಲೈನ್ಸ್‌ನ (Tibet Airlines) ಪ್ರಯಾಣಿಕ ವಿಮಾನವು ಗುರುವಾರ ದೇಶದ ನೈಋತ್ಯ ಚಾಂಗ್‌ಕಿಂಗ್ ನಗರದಲ್ಲಿ ಟೇಕಾಫ್ ಆಗುವಾಗ ರನ್‌ವೇಯಿಂದ ಸ್ಕಿಡ್ ಆಗಿ ಬೆಂಕಿ ಹೊತ್ತಿಕೊಂಡಿದೆ. ಸಾವುನೋವುಗಳ  ಬಗ್ಗೆ ತಕ್ಷಣವೇ ತಿಳಿದುಬಂದಿಲ್ಲ ಎಂದು ಸರ್ಕಾರಿ ಮಾಧ್ಯಮ ಸಿಜಿಟಿಎನ್ ವರದಿ ಮಾಡಿದೆ. ಚಾಂಗ್‌ಕಿಂಗ್ ಜಿಯಾಂಗ್‌ಬೀ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (Chongqing Jiangbei international airport) ಟಾರ್‌ಮ್ಯಾಕ್‌ನಲ್ಲಿ ಟಿಬೆಟ್ ಏರ್‌ಲೈನ್ಸ್ ವಿಮಾನದ ಹೊತ್ತಿ ಉರಿಯುತ್ತಿರುವುದು ವಿಡಿಯೊದಲ್ಲಿ ಕಾಣಿಸುತ್ತದೆ. ಹಿಂದಿನ ಬಾಗಿಲಿನ ಇವಾಕ್ಯುವೇಷನ್ ಸ್ಲೈಡ್ ಮೂಲಕ ಜನರು ತಪ್ಪಿಸಿಕೊಂಡ ನಂತರ ವಿಮಾನದಿಂದ ಓಡುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದು. ಚೀನಾದ (China) ವಿಮಾನ ನಿಲ್ದಾಣದಲ್ಲಿ ರನ್‌ವೇಯಿಂದ ಜಾರಿದ ನಂತರ ಟಿಬೆಟ್ ಏರ್‌ಲೈನ್ಸ್ ವಿಮಾನವು ಗುರುವಾರ ಬೆಂಕಿಗೆ ಆಹುತಿಯಾಗಿದೆ. ಆದರೆ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು “ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ” ಎಂದು ಏರ್‌ಲೈನ್ಸ್ ತಿಳಿಸಿದೆ. 113 ಪ್ರಯಾಣಿಕರು ಮತ್ತು ಒಂಬತ್ತು ಸಿಬ್ಬಂದಿಯನ್ನು ಹೊತ್ತ ವಿಮಾನವು ನೈಋತ್ಯ ನಗರವಾದ ಚಾಂಗ್‌ಕಿಂಗ್‌ನಿಂದ ಟಿಬೆಟ್‌ನ ನೈಂಗ್‌ಚಿಗೆ ತೆರಳುತ್ತಿದ್ದಾಗ “ಸಮಸ್ಯೆ” ಗಮನಕ್ಕೆ ಬಂತು. ತಕ್ಷಣವೇ ಟೇಕ್-ಆಫ್ ಅನ್ನು ಸ್ಥಗಿತಗೊಳಿಸಲಾಯಿತು. ಇದರಿಂದಾಗಿ ಜೆಟ್ ರನ್‌ವೇಯಲ್ಲೇ ಉಳಿಯಿತು ಎಂದು ಕಂಪನಿ ಹೇಳಿಕೆಯಲ್ಲಿ ತಿಳಿಸಿದೆ.

“ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ” ಎಂದು ಟಿಬೆಟ್ ಏರ್ ಲೈನ್ಸ್  ಹೇಳಿಕೆಯಲ್ಲಿ ತಿಳಿಸಿದೆ. ಸಣ್ಣಪುಟ್ಟಗಾಯಗೊಂಡ 40 ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಟೇಕ್-ಆಫ್ ಸಮಯದಲ್ಲಿ ಟಿವಿ9833 ಫ್ಲೈಟ್ ರನ್‌ವೇಯಿಂದ ಹೊರಗೆ ಜಾರಿದೆ. “ವಿಮಾನದ ತುದಿಯ ಎಡಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ” ಎಂದು ಚಾಂಗ್‌ಕಿಂಗ್ ಜಿಯಾಂಗ್‌ಬೀ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಪ್ರತ್ಯೇಕ ಹೇಳಿಕೆಯಲ್ಲಿ ತಿಳಿಸಿದೆ.

ಚಾಂಗ್‌ಕಿಂಗ್ ಜಿಯಾಂಗ್‌ಬೀ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯಾಚರಣೆಗಳು ನಂತರ ಸಹಜ ಸ್ಥಿತಿಗೆ ಮರಳಿದೆ. “ಅಪಘಾತಕ್ಕೆ ಕಾರಣವನ್ನು ತನಿಖೆ ಮಾಡಲಾಗುತ್ತಿದೆ” ಎಂದು ವಿಮಾನ ನಿಲ್ದಾಣ ತಿಳಿಸಿದೆ.

Published On - 9:22 am, Thu, 12 May 22

Follow Us
ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕಟ್ಟುನಿಟ್ಟಿನ ಕ್ರಮ; ಖರ್ಗೆ ಘೋಷಣೆ
ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕಟ್ಟುನಿಟ್ಟಿನ ಕ್ರಮ; ಖರ್ಗೆ ಘೋಷಣೆ
ಖಾಲಿ ಸೈಟ್​ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು: ಸಿಎಂ ಖಡಕ್ ಸೂಚನೆ
ಖಾಲಿ ಸೈಟ್​ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು: ಸಿಎಂ ಖಡಕ್ ಸೂಚನೆ
‘ಪ್ರಜ್ವಲ್​​ಗೆ ಜಿಮ್ ಟ್ರೇನರ್ ಕೊಟ್ಟಿದ್ವಿ, ಆದರೂ ಅಚಿವ್​ ಮಾಡಿಲ್ಲ’
‘ಪ್ರಜ್ವಲ್​​ಗೆ ಜಿಮ್ ಟ್ರೇನರ್ ಕೊಟ್ಟಿದ್ವಿ, ಆದರೂ ಅಚಿವ್​ ಮಾಡಿಲ್ಲ’
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ