AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ: ರನ್‌ವೇಯಿಂದ ಸ್ಕಿಡ್ ಆಗಿ ಹೊತ್ತಿ ಉರಿದ ಟಿಬೆಟ್ ಏರ್‌ಲೈನ್ಸ್‌ನ ವಿಮಾನ; ಪ್ರಯಾಣಿಕರು ಸುರಕ್ಷಿತ

"ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ" ಎಂದು ಟಿಬೆಟ್ ಏರ್ ಲೈನ್ಸ್  ಹೇಳಿಕೆಯಲ್ಲಿ ತಿಳಿಸಿದೆ. ಸಣ್ಣಪುಟ್ಟಗಾಯಗೊಂಡ 40 ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚೀನಾ: ರನ್‌ವೇಯಿಂದ ಸ್ಕಿಡ್ ಆಗಿ ಹೊತ್ತಿ ಉರಿದ ಟಿಬೆಟ್ ಏರ್‌ಲೈನ್ಸ್‌ನ ವಿಮಾನ; ಪ್ರಯಾಣಿಕರು ಸುರಕ್ಷಿತ
ಹೊತ್ತಿ ಉರಿದ ವಿಮಾನ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:May 12, 2022 | 9:55 AM

Share

ಚೀನಾದ ಟಿಬೆಟ್ ಏರ್‌ಲೈನ್ಸ್‌ನ (Tibet Airlines) ಪ್ರಯಾಣಿಕ ವಿಮಾನವು ಗುರುವಾರ ದೇಶದ ನೈಋತ್ಯ ಚಾಂಗ್‌ಕಿಂಗ್ ನಗರದಲ್ಲಿ ಟೇಕಾಫ್ ಆಗುವಾಗ ರನ್‌ವೇಯಿಂದ ಸ್ಕಿಡ್ ಆಗಿ ಬೆಂಕಿ ಹೊತ್ತಿಕೊಂಡಿದೆ. ಸಾವುನೋವುಗಳ  ಬಗ್ಗೆ ತಕ್ಷಣವೇ ತಿಳಿದುಬಂದಿಲ್ಲ ಎಂದು ಸರ್ಕಾರಿ ಮಾಧ್ಯಮ ಸಿಜಿಟಿಎನ್ ವರದಿ ಮಾಡಿದೆ. ಚಾಂಗ್‌ಕಿಂಗ್ ಜಿಯಾಂಗ್‌ಬೀ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (Chongqing Jiangbei international airport) ಟಾರ್‌ಮ್ಯಾಕ್‌ನಲ್ಲಿ ಟಿಬೆಟ್ ಏರ್‌ಲೈನ್ಸ್ ವಿಮಾನದ ಹೊತ್ತಿ ಉರಿಯುತ್ತಿರುವುದು ವಿಡಿಯೊದಲ್ಲಿ ಕಾಣಿಸುತ್ತದೆ. ಹಿಂದಿನ ಬಾಗಿಲಿನ ಇವಾಕ್ಯುವೇಷನ್ ಸ್ಲೈಡ್ ಮೂಲಕ ಜನರು ತಪ್ಪಿಸಿಕೊಂಡ ನಂತರ ವಿಮಾನದಿಂದ ಓಡುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದು. ಚೀನಾದ (China) ವಿಮಾನ ನಿಲ್ದಾಣದಲ್ಲಿ ರನ್‌ವೇಯಿಂದ ಜಾರಿದ ನಂತರ ಟಿಬೆಟ್ ಏರ್‌ಲೈನ್ಸ್ ವಿಮಾನವು ಗುರುವಾರ ಬೆಂಕಿಗೆ ಆಹುತಿಯಾಗಿದೆ. ಆದರೆ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು “ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ” ಎಂದು ಏರ್‌ಲೈನ್ಸ್ ತಿಳಿಸಿದೆ. 113 ಪ್ರಯಾಣಿಕರು ಮತ್ತು ಒಂಬತ್ತು ಸಿಬ್ಬಂದಿಯನ್ನು ಹೊತ್ತ ವಿಮಾನವು ನೈಋತ್ಯ ನಗರವಾದ ಚಾಂಗ್‌ಕಿಂಗ್‌ನಿಂದ ಟಿಬೆಟ್‌ನ ನೈಂಗ್‌ಚಿಗೆ ತೆರಳುತ್ತಿದ್ದಾಗ “ಸಮಸ್ಯೆ” ಗಮನಕ್ಕೆ ಬಂತು. ತಕ್ಷಣವೇ ಟೇಕ್-ಆಫ್ ಅನ್ನು ಸ್ಥಗಿತಗೊಳಿಸಲಾಯಿತು. ಇದರಿಂದಾಗಿ ಜೆಟ್ ರನ್‌ವೇಯಲ್ಲೇ ಉಳಿಯಿತು ಎಂದು ಕಂಪನಿ ಹೇಳಿಕೆಯಲ್ಲಿ ತಿಳಿಸಿದೆ.

“ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ” ಎಂದು ಟಿಬೆಟ್ ಏರ್ ಲೈನ್ಸ್  ಹೇಳಿಕೆಯಲ್ಲಿ ತಿಳಿಸಿದೆ. ಸಣ್ಣಪುಟ್ಟಗಾಯಗೊಂಡ 40 ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಟೇಕ್-ಆಫ್ ಸಮಯದಲ್ಲಿ ಟಿವಿ9833 ಫ್ಲೈಟ್ ರನ್‌ವೇಯಿಂದ ಹೊರಗೆ ಜಾರಿದೆ. “ವಿಮಾನದ ತುದಿಯ ಎಡಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ” ಎಂದು ಚಾಂಗ್‌ಕಿಂಗ್ ಜಿಯಾಂಗ್‌ಬೀ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಪ್ರತ್ಯೇಕ ಹೇಳಿಕೆಯಲ್ಲಿ ತಿಳಿಸಿದೆ.

ಚಾಂಗ್‌ಕಿಂಗ್ ಜಿಯಾಂಗ್‌ಬೀ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯಾಚರಣೆಗಳು ನಂತರ ಸಹಜ ಸ್ಥಿತಿಗೆ ಮರಳಿದೆ. “ಅಪಘಾತಕ್ಕೆ ಕಾರಣವನ್ನು ತನಿಖೆ ಮಾಡಲಾಗುತ್ತಿದೆ” ಎಂದು ವಿಮಾನ ನಿಲ್ದಾಣ ತಿಳಿಸಿದೆ.

Published On - 9:22 am, Thu, 12 May 22

Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!