AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Period Leave: ಸ್ಪೇನ್​ನಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ತಿಂಗಳಲ್ಲಿ 3 ದಿನ ಮುಟ್ಟಿನ ರಜೆ ಘೋಷಣೆ

Menstrual Leave: ಜಪಾನ್, ದಕ್ಷಿಣ ಕೊರಿಯಾ, ಇಂಡೋನೇಷ್ಯಾ ಮತ್ತು ಜಾಂಬಿಯಾ ಸೇರಿದಂತೆ ವಿಶ್ವದ ಇತರ ದೇಶಗಳು ಈಗಾಗಲೇ ಮುಟ್ಟಿನ ರಜೆಯನ್ನು ನೀಡುತ್ತಿವೆ. ಸ್ಪೇನ್​ನಲ್ಲಿ ಮಹಿಳೆಯರಿಗೆ ತಿಂಗಳಿಗೆ ಮೂರು ದಿನಗಳ ಋತುಚಕ್ರದ ರಜೆಯನ್ನು ನಿಗದಿಪಡಿಸಲಾಗಿದೆ.

Period Leave: ಸ್ಪೇನ್​ನಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ತಿಂಗಳಲ್ಲಿ 3 ದಿನ ಮುಟ್ಟಿನ ರಜೆ ಘೋಷಣೆ
ಸಾಂದರ್ಭಿಕ ಚಿತ್ರImage Credit source: Getty Image
TV9 Web
| Updated By: ಸುಷ್ಮಾ ಚಕ್ರೆ|

Updated on:May 12, 2022 | 2:14 PM

Share

ಸ್ಪೇನ್: ಆಫೀಸಿಗೆ ಹೋಗುವ ಶೇ. 65ರಷ್ಟು ಮಹಿಳೆಯರು ತಮ್ಮ ಋತುಚಕ್ರದ ಸಂದರ್ಭದಲ್ಲಿ ಕಚೇರಿಯಲ್ಲಿ ಕಿರಿಕಿರಿಯನ್ನು ಅನುಭವಿಸುತ್ತಾರೆ. ಹಾಗಂತ ಮನೆಯಲ್ಲಿರುವವರಿಗೆ ಈ ಮೂರ್ನಾಲ್ಕು ದಿನಗಳ ಕಾಲ ಕಿರಿಕಿರಿ ಆಗುವುದಿಲ್ಲ ಎಂದು ಅರ್ಥವಲ್ಲ. ಮನೆಯಲ್ಲಿದ್ದರೆ ವಿಶ್ರಾಂತಿ ಪಡೆಯಲು ಅವಕಾಶ ಇರುತ್ತದೆ. ಆದರೆ, ಕಚೇರಿಯಲ್ಲಿ ಆ ಆಯ್ಕೆ ಇಲ್ಲದ ಕಾರಣದಿಂದ ಮಹಿಳೆಯರು ತಮ್ಮ ಪಿರಿಯಡ್​ನ (menstrual) ಸಮಯದಲ್ಲಿ ಮಾನಸಿಕವಾಗಿ ಮತ್ತು ದೈಹಿಕವಾಗಿ ಸುಸ್ತಾಗುತ್ತಾರೆ. ಭಾರತದಲ್ಲೂ ಕೆಲವು ಆಫೀಸ್​ಗಳಲ್ಲಿ ಇದೇ ಕಾರಣಕ್ಕೆ ಮಹಿಳೆಯರಿಗೆ ರೆಸ್ಟ್​ ರೂಂ ಸೌಲಭ್ಯವನ್ನು ಒದಗಿಸಲಾಗುತ್ತದೆ. ಆದರೆ, ಸ್ಪೇನ್​ನಲ್ಲಿ ಮೊದಲ ಬಾರಿಗೆ ಮಹಿಳೆಯರಿಗೆ ಋತುಚಕ್ರದ ಸಮಯದಲ್ಲಿ ‘ಪಿರಿಯಡ್ ರಜೆ’ (Period Leave) ನೀಡಲು ನಿರ್ಧರಿಸಲಾಗಿದೆ. ಈ ಮೂಲದ ಋತುಚಕ್ರದ ರಜೆ ನೀಡುತ್ತಿರುವ ಮೊದಲ ಪಾಶ್ಚಿಮಾತ್ಯ ದೇಶವೆಂಬ ಹೆಗ್ಗಳಿಕೆಗೆ ಸ್ಪೇನ್ ಪಾತ್ರವಾಗಿದೆ. ಸ್ಪೇನ್​ನಲ್ಲಿ ಮಹಿಳೆಯರಿಗೆ ತಿಂಗಳಿಗೆ ಮೂರು ದಿನಗಳ ವಿಶೇಷ ರಜೆಯನ್ನು ನಿಗದಿಪಡಿಸಲಾಗಿದೆ.

ಸ್ಪ್ಯಾನಿಷ್ ಸರ್ಕಾರವು ಮುಂದಿನ ವಾರ ಈ ನಿಯಮವನ್ನು ಅನುಮೋದಿಸಲಿದೆ ಎಂದು ಕ್ಯಾಡೆನಾ ಸೆರ್ ರೇಡಿಯೊ ಸ್ಟೇಷನ್ ಘೋಷಿಸಿದೆ. ಜಪಾನ್, ದಕ್ಷಿಣ ಕೊರಿಯಾ, ಇಂಡೋನೇಷ್ಯಾ ಮತ್ತು ಜಾಂಬಿಯಾ ಸೇರಿದಂತೆ ವಿಶ್ವದ ಇತರ ದೇಶಗಳು ಈಗಾಗಲೇ ಮುಟ್ಟಿನ ರಜೆಯನ್ನು ನೀಡುತ್ತಿವೆ. ಮಂಗಳವಾರ ನಡೆಯಲಿರುವ ಸ್ಪೇನ್‌ನ ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಜಾರಿಗೆ ಬರಲಿರುವ ಸುಧಾರಣಾ ಪ್ಯಾಕೇಜ್ ಅಡಿಯಲ್ಲಿ ಶಾಲೆಗಳು ಅಗತ್ಯವಿರುವ ಹುಡುಗಿಯರಿಗೆ ಸ್ಯಾನಿಟರಿ ಪ್ಯಾಡ್‌ಗಳನ್ನು ಒದಗಿಸಲು ಸೂಚಿಸಲಾಗಿದೆ.

ಈ ಋತುಚಕ್ರದ ರಜೆ ವಿಶೇಷವಾಗಿ ಮುಟ್ಟಿನ ನೋವಿನಿಂದ ಬಳಲುತ್ತಿರುವ ಮಹಿಳೆಯರಿಗೆ ಪ್ರಯೋಜನವನ್ನು ನೀಡುತ್ತದೆ. ಮುಟ್ಟಿನ ಸಂದರ್ಭದಲ್ಲಿ ಅನೇಕ ಮಹಿಳೆಯರು ಡಿಸ್ಮೆನೊರಿಯಾ ಎಂದು ಕರೆಯಲ್ಪಡುವ ತೀವ್ರವಾದ ನೋವಿನಿಂದ ಬಳಲುತ್ತಾರೆ. ಕೆಲವೊಮ್ಮೆ ಈ ನೋವು ಗಂಭೀರ ಆರೋಗ್ಯ ಸಮಸ್ಯೆಗೂ ಕಾರಣವಾಗಬಹುದು. ಋತುಚಕ್ರದ ಸಂದರ್ಭದಲ್ಲಿ ಕೆಲವು ಮಹಿಳೆಯರಿಗೆ ತಲೆ ಸುತ್ತುವರಿಕೆ, ಹೊಟ್ಟೆ ನೋವು, ವಾಂತಿ, ಭೇದಿ, ತೀವ್ರವಾದ ತಲೆನೋವು ಮುಂತಾದ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಹೀಗಾಗಿ, ಋತುಚಕ್ರದ ರಜೆ ನೀಡಲು ನಿರ್ಧರಿಸಲಾಗಿದೆ ಎಂದು ಸ್ಪೇನ್ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ
Image
ನೈಟ್​ಶಿಫ್ಟ್​ನಲ್ಲಿ ಕೆಲಸ ಮಾಡ್ತಿದ್ದೀರಾ? ಹಾಗಾದರೆ ಈ ಸಲಹೆ ತಪ್ಪದೆ ಪಾಲಿಸಿ
Image
Healthy Drinks: ವ್ಯಾಯಾಮದ ನಂತರ ಮನೆಯಲ್ಲಿ ತಯಾರಿಸಿದ ಈ ಎನರ್ಜಿ ಡ್ರಿಂಕ್ಸ್ ಸೇವಿಸಿ, ಉತ್ತಮ ಆರೋಗ್ಯ ಪಡೆಯಿರಿ
Image
ಹೆಚ್ಚಿನ ವ್ಯಾಯಾಮ ಕೂಡ ಅನಿಯಮಿತ ಮುಟ್ಟಿಗೆ ಕಾರಣವಾಗಬಹುದು

ಸ್ಪ್ಯಾನಿಷ್ ಸ್ತ್ರೀರೋಗ ಶಾಸ್ತ್ರ ಮತ್ತು ಪ್ರಸೂತಿ ಸೊಸೈಟಿಯು ಮುಟ್ಟಿನ ಸಂದರ್ಭದಲ್ಲಿ ಸುಮಾರು ಮೂರನೇ ಒಂದು ಭಾಗದಷ್ಟು ಮಹಿಳೆಯರು ತೀವ್ರವಾದ ನೋವಿನಿಂದ ಬಳಲುತ್ತಿದ್ದಾರೆ ಎಂದು ಹೇಳುತ್ತದೆ. ಈ ನೋವನ್ನು ಡಿಸ್ಮೆನೊರಿಯಾ ಎಂದು ಕರೆಯಲಾಗುತ್ತದೆ. ಡಿಸ್ಮೆನೊರಿಯಾದ ಲಕ್ಷಣಗಳು ತೀವ್ರವಾದ ಹೊಟ್ಟೆ ನೋವು, ತಲೆನೋವು, ಅತಿಸಾರ ಮತ್ತು ಜ್ವರವನ್ನು ಒಳಗೊಂಡಿರುತ್ತದೆ. ಹೊಸ ಯೋಜನೆಯ ಪ್ರಕಾರ, ಸ್ಪೇನ್‌ನ ಶಾಲೆಗಳು ಸ್ಯಾನಿಟರಿ ಪ್ಯಾಡ್‌ಗಳನ್ನು ಒದಗಿಸುತ್ತವೆ.

ಮುಂದಿನ ಮಂಗಳವಾರದ ಕ್ಯಾಬಿನೆಟ್ ಸಭೆಯಲ್ಲಿ ಜಾರಿಗೆ ಬರಲಿರುವ ಸುಧಾರಣೆಯು ಮುಟ್ಟಿನ ಆರೋಗ್ಯವನ್ನು ಸುಧಾರಿಸಲು ಇತರ ಕ್ರಮಗಳನ್ನು ಒಳಗೊಂಡಿದೆ. ಇದು ಅಗತ್ಯವಿರುವ ಹುಡುಗಿಯರಿಗೆ ಸ್ಯಾನಿಟರಿ ಪ್ಯಾಡ್‌ಗಳನ್ನು ಒದಗಿಸುವಂತೆ ಶಾಲೆಗಳನ್ನು ಕಡ್ಡಾಯಗೊಳಿಸುತ್ತದೆ.

ಇತರೆ ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:13 pm, Thu, 12 May 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ