AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಷ್ಕರ್ಮಿಗಳಿಗೆ ಶಿಕ್ಷೆ; ಭಯೋತ್ಪಾದನೆ ವಿರುದ್ಧ ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ರಷ್ಯಾ ಅಧ್ಯಕ್ಷ ಪುಟಿನ್

ಇಂದು ಪ್ರಧಾನಿ ನರೇಂದ್ರ ಮೋದಿಗೆ ಫೋನ್ ಮಾಡಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕಾಶ್ಮೀರದ ಪಹಲ್ಗಾಮ್ ದಾಳಿಯನ್ನು ಖಂಡಿಸಿದ್ದಾರೆ. ಪ್ರಧಾನಿ ಮೋದಿ ಅವರೊಂದಿಗೆ ದೂರವಾಣಿ ಕರೆಯಲ್ಲಿ ಮಾತನಾಡಿದ ಪುಟಿನ್ ಅಮಾಯಕರ ಜೀವಹಾನಿಗೆ ತೀವ್ರ ಸಂತಾಪ ಸೂಚಿಸಿದರು. ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದರು.

ದುಷ್ಕರ್ಮಿಗಳಿಗೆ ಶಿಕ್ಷೆ; ಭಯೋತ್ಪಾದನೆ ವಿರುದ್ಧ ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ರಷ್ಯಾ ಅಧ್ಯಕ್ಷ ಪುಟಿನ್
Putin With Pm Modi
Follow us
ಸುಷ್ಮಾ ಚಕ್ರೆ
|

Updated on:May 05, 2025 | 4:40 PM

ನವದೆಹಲಿ, ಮೇ 5: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿ, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು (Pahalgam Terror Attack) ಬಲವಾಗಿ ಖಂಡಿಸಿದ್ದಾರೆ. ರಷ್ಯಾದ ಅಧ್ಯಕ್ಷ ಪುಟಿನ್ ಅಮಾಯಕರ ಜೀವಹಾನಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ ಮತ್ತು ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ.

ಪಹಲ್ಗಾಮ್ ದಾಳಿಯ ಅಪರಾಧಿಗಳು ಮತ್ತು ಅವರ ಬೆಂಬಲಿಗರನ್ನು ಶಿಕ್ಷಿಸಬೇಕು ಎಂದು ರಷ್ಯಾದ ಅಧ್ಯಕ್ಷರು ಒತ್ತಿ ಹೇಳಿದ್ದಾರೆ. ಭಾರತ-ರಷ್ಯಾ ನಡುವಿನ ವಿಶೇಷ ಕಾರ್ಯತಂತ್ರದ ಸಹಭಾಗಿತ್ವವನ್ನು ಇನ್ನಷ್ಟು ಬಲಪಡಿಸಲು ಇಬ್ಬರೂ ನಾಯಕರು ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನಕ್ಕೆ ಭೇಟಿ ನೀಡಬೇಡಿ; ಕಾಶ್ಮೀರದ ಉಗ್ರರ ದಾಳಿ ಬಳಿಕ ತನ್ನ ಪ್ರಜೆಗಳಿಗೆ ರಷ್ಯಾ ಎಚ್ಚರಿಕೆ

ಇದನ್ನೂ ಓದಿ
Image
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
Image
ಐಎಂಎಫ್​​​ಗೆ ಅಯ್ಯರ್; ಪಾಕಿಸ್ತಾನಕ್ಕೆ ಇದೆಯಾ ಆಪತ್ತು?
Image
ಭಾರತಕ್ಕೆ ಹಾನಿ ಮಾಡುವ ಮುನ್ನ ಪಾಕ್ 100 ಬಾರಿ ಯೋಚಿಸಬೇಕು
Image
ಜರ್ಮನಿಯಲ್ಲಿ ಹಿಂದೂ ಸಮುದಾಯದ ಒಗ್ಗಟ್ಟಿನ ಸಂದೇಶ ಸಾರಿದ ಭಾರತೀಯರು

ಭಾರತಕ್ಕೆ ಪುಟಿನ್ ಭೇಟಿ:

“ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿ ಭಾರತದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸಿದರು. ಅಮಾಯಕರ ಜೀವಹಾನಿಗೆ ಅವರು ತೀವ್ರ ಸಂತಾಪ ಸೂಚಿಸಿದರು ಮತ್ತು ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು. ಘೋರ ದಾಳಿಯ ಅಪರಾಧಿಗಳು ಮತ್ತು ಅವರ ಬೆಂಬಲಿಗರಿಗೆ ನ್ಯಾಯಾಂಗದ ಮೂಲಕ ಶಿಕ್ಷೆ ಕೊಡಿಸಬೇಕು ಎಂದು ಅವರು ಒತ್ತಿ ಹೇಳಿದರು. ಭಾರತ-ರಷ್ಯಾ ವಿಶೇಷ ಮತ್ತು ಸವಲತ್ತು ಪಡೆದ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸುವ ಬದ್ಧತೆಯನ್ನು ಇಬ್ಬರೂ ನಾಯಕರು ಪುನರುಚ್ಚರಿಸಿದರು. ವಿಜಯ ದಿನದ 80ನೇ ವಾರ್ಷಿಕೋತ್ಸವದ ಆಚರಣೆಯಂದು ರಷ್ಯಾ ಅಧ್ಯಕ್ಷ ಪುಟಿನ್ ಅವರಿಗೆ ಪ್ರಧಾನಿ ಶುಭಾಶಯಗಳನ್ನು ತಿಳಿಸಿದರು. ಈ ವರ್ಷದ ಕೊನೆಯಲ್ಲಿ ಭಾರತದಲ್ಲಿ ನಡೆಯಲಿರುವ ವಾರ್ಷಿಕ ಶೃಂಗಸಭೆಗೆ ಪ್ರಧಾನಿ ನರೇಂದ್ರ ಮೋದಿ ರಷ್ಯಾ ಅಧ್ಯಕ್ಷ ಪುಟಿನ್ ಅವರನ್ನು ಆಹ್ವಾನಿಸಿದರು. ಪುಟಿನ್ ಭಾರತಕ್ಕೆ ಆಗಮಿಸಲು ಒಪ್ಪಿದ್ದಾರೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.

ಇದನ್ನೂ ಓದಿ: ಭಾರತದೊಂದಿಗಿನ ಉದ್ವಿಗ್ನತೆ ಕಡಿಮೆ ಮಾಡಲು ರಷ್ಯಾದ ಮೊರೆ ಹೋದ ಪಾಕ್

ಇದಕ್ಕೂ ಮೊದಲು ರಷ್ಯಾದ ಮಾಸ್ಕೋದಲ್ಲಿರುವ ಪಾಕಿಸ್ತಾನ ರಾಯಭಾರಿ ಮೊಹಮ್ಮದ್ ಖಾಲಿದ್ ಜಮಾಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಪರಿಸ್ಥಿತಿಯನ್ನು ಶಮನಗೊಳಿಸಲು ರಷ್ಯಾದ ಸಹಾಯವನ್ನು ಕೋರಿದ್ದರು. 1966ರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಸಶಸ್ತ್ರ ಸಂಘರ್ಷವನ್ನು ಕೊನೆಗೊಳಿಸಲು ಸಹಾಯ ಮಾಡಿದ ತಾಷ್ಕೆಂಟ್ ಮಾತುಕತೆಗಳ ಸಮಯದಲ್ಲಿ ರಷ್ಯಾ ಮಾಡಿದಂತೆ ಈ ದ್ವಿಮುಖ ಸಂಬಂಧವನ್ನು ಬಳಸಿಕೊಂಡು ಮಧ್ಯಸ್ಥಿಕೆ ವಹಿಸಬಹುದು ಎಂದು ಅವರ ಮನವಿ ಮಾಡಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 4:37 pm, Mon, 5 May 25

ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ