AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ಟೇಕ್​ ಆಫ್​ ಆಗುವ ಸಮಯದಲ್ಲಿ ಇಂಜಿನ್​ನಲ್ಲಿ ಸಿಲುಕಿ ವ್ಯಕ್ತಿ ಸಾವು

ನೆದರ್ಲೆಂಡ್​ನ ಆಮ್​ಸ್ಟರ್​ಡಾಂನ ಶಿಪೋಲ್ ವಿಮಾನ ನಿಲ್ದಾಣದಲ್ಲಿ ಟೇಕ್​ ಆಫ್​ಗೆ ಸಿದ್ಧವಾಗಿದ್ದ ವಿಮಾನದ ಇಂಜಿನ್​ನೊಳಗೆ ಕಾಲುಜಾರಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನ ಟೇಕ್​ ಆಫ್​ ಆಗುವ ಸಮಯದಲ್ಲಿ ಇಂಜಿನ್​ನಲ್ಲಿ ಸಿಲುಕಿ ವ್ಯಕ್ತಿ ಸಾವು
ನಯನಾ ರಾಜೀವ್
|

Updated on: May 31, 2024 | 9:06 AM

Share

ನೆದರ್ಲೆಂಡ್​ನ ಆಮ್​ಸ್ಟರ್​ಡಾಂನ ಶಿಪೋಲ್ ವಿಮಾನ ನಿಲ್ದಾಣ(Airport)ದಲ್ಲಿ ವಿಮಾನದ ಇಂಜಿನ್​ಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ವರದಿಯಾಗಿದೆ. KL1341 ವಿಮಾನವು ಡೆನ್ಮಾರ್ಕ್‌ನ ಬಿಲ್ಲುಂಡ್‌ಗೆ ಟೇಕ್ ಆಫ್ ಮಾಡಲು ಸಿದ್ಧವಾಗಿತ್ತು. ಆಗ ಅಪಘಾತ ಸಂಭವಿಸಿದೆ.

ಟೇಕ್ ಆಫ್ ಆಗುವ ಮೊದಲು ಜೆಟ್‌ನ ತಿರುಗುವ ಟರ್ಬೈನ್‌ಗೆ ವ್ಯಕ್ತಿ ಬಿದ್ದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ, ಇದು ಅಪಘಾತವೋ ಅಥವಾ ಆತ್ಮಹತ್ಯೆಯೋ ಎಂದು ಹೇಳಲು ಸಾಧ್ಯವಾಗುತ್ತಿಲ್ಲ. ವರದಿಯ ಪ್ರಕಾರ , ಮೇ 29 ರ ಮಧ್ಯಾಹ್ನ, ಕೆಎಲ್ 1341 ವಿಮಾನವು ಡೆನ್ಮಾರ್ಕ್‌ನ ಬಿಲ್ಲುಂಡ್‌ಗೆ ಟೇಕ್ ಆಫ್ ಮಾಡಲು ಸಿದ್ಧವಾಗಿತ್ತು. ಆಗ ಅಪಘಾತ ಸಂಭವಿಸಿದೆ.

ಈ ವಿಮಾನವು ಕಡಿಮೆ-ಶ್ರೇಣಿಯ ಎಂಬ್ರೇರ್ ಜೆಟ್ ಆಗಿದ್ದು, ಇದನ್ನು KLM ನ ಸಿಟಿಹಾಪರ್ ಸೇವೆಯ ಅಡಿಯಲ್ಲಿ ಬಳಸಲಾಗುತ್ತದೆ.

ಮತ್ತಷ್ಟು ಓದಿ: ಆಗಸದಲ್ಲಿ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ ಪ್ರಯಾಣಿಕ

ಯುರೋಪಿನೊಳಗೆ ಹತ್ತಿರದ ಸ್ಥಳಗಳ ನಡುವೆ ವಿಮಾನಗಳು ಕಾರ್ಯನಿರ್ವಹಿಸುತ್ತಿಲ್ಲ. ಕೆಎಲ್‌ಎಂ ಏರ್‌ಲೈನ್ಸ್ ಹೇಳಿಕೆಯಲ್ಲಿ ತಿಳಿಸಿದೆ. ಘಟನೆಯ ನಂತರ ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸಲಾಯಿತು.

ಕಳೆದ ವರ್ಷ, ಟೆಕ್ಸಾಸ್‌ನ ಸ್ಯಾನ್ ಆಂಟೋನಿಯೊದಲ್ಲಿ 27 ವರ್ಷದ ವಿಮಾನ ನಿಲ್ದಾಣದ ಸಿಬ್ಬಂದಿ, ಡೆಲ್ಟಾ ಪ್ರಯಾಣಿಕ ವಿಮಾನದ ಇಂಜಿನ್‌ನಲ್ಲಿ ಸಿಲುಕಿ ಸಾವನ್ನಪ್ಪಿದರು.

ಅದೇ ರೀತಿ ಮೃತೊಟ್ಟವರು ಟಗ್ ನಿರ್ವಾಹಕರು ಅಥವಾ ವಿಮಾನ ನಿಲ್ದಾಣದ ಸಿಬ್ಬಂದಿಯಾಗಿರಬಹುದು ಎಂದು ಹೇಳಲಾಗುತ್ತಿದೆ.

ವಿಮಾನವು ಡೆನ್ಮಾರ್ಕ್​ನಲ್ಲಿ ಪ್ರಯಾಣಕ್ಕೆ ಸಿದ್ಧಗೊಂಡಿದ್ದಾಗ ವಿಮಾನದ ರೆಕ್ಕೆಯ ಮೇಲೆ ಓಡಿ ಬಂದ ವ್ಯಕ್ತಿಯೊಬ್ಬ ಕಾಲುಜಾರಿ ಇಂಜಿನ್​ನ ಒಳಗಿರುವ ಕೂಲಿಂಗ್ ಫ್ಯಾನ್​ನ ರೆಕ್ಕೆಗಳಿಗೆ ಸಿಕ್ಕಿ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿಯ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು