Peru Gold Mine Tragedy: ಧಗ ಧಗನೆ ಹೊತ್ತಿ ಉರಿದ ಚಿನ್ನದ ಗಣಿ, 27 ಮಂದಿ ಸಾವು

ಪೆರುವಿನ ಚಿನ್ನದ ಗಣಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ, 27 ಮಂದಿ ಕಾರ್ಮಿಕರು ಜೀವ ಕಳೆದುಕೊಂಡಿದ್ದಾರೆ. ಘಟನೆ ನಡೆದ ಸ್ಥಳ ಚಿಕ್ಕ ಚಿನ್ನದ ಗಣಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Peru Gold Mine Tragedy: ಧಗ ಧಗನೆ ಹೊತ್ತಿ ಉರಿದ ಚಿನ್ನದ ಗಣಿ, 27 ಮಂದಿ ಸಾವು
ಚಿನ್ನದ ಗಣಿ ಅಗ್ನಿ ಅವಘಡ
Follow us
|

Updated on:May 08, 2023 | 7:52 AM

ಪೆರುವಿನ ಚಿನ್ನದ ಗಣಿ(Gold Mine) ಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ, 27 ಮಂದಿ ಕಾರ್ಮಿಕರು ಜೀವ ಕಳೆದುಕೊಂಡಿದ್ದಾರೆ. ಘಟನೆ ನಡೆದ ಸ್ಥಳ ಚಿಕ್ಕ ಚಿನ್ನದ ಗಣಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದ ಚಿನ್ನದ ಗಣಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಿದ್ದಾರೆ. ಯಾಂಕ್ವಿಹುವಾ ಈ ಚಿಕ್ಕ ಚಿನ್ನದ ಗಣಿ ನಡೆಸುತ್ತಿದ್ದಾರೆ. ಸದ್ಯ ಈ ಘಟನೆಗೆ ಸಂಬಂಧಿಸಿದಂತೆ ಕಂಪನಿಯಿಂದ ಯಾವುದೇ ಹೇಳಿಕೆ ನೀಡಿಲ್ಲ. ಸ್ಥಳೀಯ ಪ್ರಾಸಿಕ್ಯೂಟರ್ ಜಿಯೋವಾನಿ ಮ್ಯಾಟೋಸ್ ಸ್ಥಳೀಯ ಸುದ್ದಿವಾಹಿನಿಗೆ ಮಾಹಿತಿ ನೀಡಿದ್ದಾರೆ. ಚಿನ್ನದ ಗಣಿ ಬೆಂಕಿಯ ಘಟನೆಯಲ್ಲಿ 27 ಜನರು ಸಾವನ್ನಪ್ಪಿದ್ದಾರೆ, ಇದನ್ನು ಯಾಂಕ್ವಿಹುವಾ ಪೊಲೀಸ್ ಠಾಣೆ ದೃಢಪಡಿಸಿದೆ.

ಪೆರು ವಿಶ್ವದ ಅಗ್ರ ಹಾಗೂ ಎರಡನೇ ಅತಿದೊಡ್ಡ ತಾಮ್ರ ಉತ್ಪಾದಿಸುವ ದೇಶ, ಪೆರುವಿನ ಇಂಧನ ಮತ್ತು ಗಣಿ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಈ ಘಟನೆಯು 2000 ರಿಂದೀಚೆಗೆ ನಡೆದ ಅತ್ಯಂತ ಭೀಕರ ಗಣಿ ಅಪಘಾತವಾಗಿದೆ. ಇಲ್ಲಿ ಗಣಿಗಾರಿಕೆಗೆ ಸಂಬಂಧಿಸಿದ ಅಪಘಾತಗಳು ನಡೆಯುತ್ತಲೇ ಇರುತ್ತವೆ.

ಮತ್ತಷ್ಟು ಓದಿ: ಚಿನ್ನದಂತಹ ಬದುಕು ನಡೆಸಬೇಕಿದ್ದ ಹಟ್ಟಿ ಚಿನ್ನದ ಗಣಿ ಕಾರ್ಮಿಕರ ಜೀವನ ಮೂರಾಬಟ್ಟೆಯಾಗಿದೆ! ಲಾಭವೇ ತಂದುಕೊಟ್ಟರೂ ಸರ್ಕಾರದ ನಿರ್ಲಕ್ಷ್ಯ

ಕಳೆದ ವರ್ಷ ದೇಶಾದ್ಯಂತ ಸುಮಾರು 38 ಮಂದಿ ಸಾವನ್ನಪ್ಪಿದ್ದರು. 2002 ರಲ್ಲಿ, ಪೆರುವಿನಲ್ಲಿ ವಿವಿಧ ಗಣಿಗಾರಿಕೆ ಅಪಘಾತಗಳಲ್ಲಿ ಸುಮಾರು 73 ಜನರು ಸಾವನ್ನಪ್ಪಿದ್ದರು. ದೂರದ ಕಾಂಡೆಸುಯೋಸ್ ಪ್ರಾಂತ್ಯದ ಗಣಿಯಲ್ಲಿ ಸ್ಫೋಟದ ನಂತರ ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ಥಳೀಯ ಮಾಧ್ಯಮಗಳು ತಿಳಿಸಿವೆ.

ಸಂತ್ರಸ್ತರ ಶವಗಳನ್ನು ಹೊರತೆಗೆಯುವ ಮೊದಲು ರಕ್ಷಣಾ ತಂಡಗಳು ಗಣಿ ಭದ್ರತೆಗೆ ಪ್ರಯತ್ನಿಸುತ್ತಿವೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಅರೆಕ್ವಿಪಾ ಪ್ರದೇಶದ ಲಾ ಎಸ್ಪೆರಾಂಜಾ ಗಣಿಯಲ್ಲಿರುವ ಸುರಂಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ಮತ್ತು ಪಬ್ಲಿಕ್ ಪ್ರಾಸಿಕ್ಯೂಟರ್ ಕಚೇರಿ ತಿಳಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:51 am, Mon, 8 May 23

ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?
ವೇಸ್ಟ್ ಪ್ಲಾಸ್ಟಿಕ್ ಬಳಸಿ ಗಣೇಶನಿಗೆ ರೂಪ ಕೊಟ್ಟ ಚಿತ್ರಕಲಾ ವಿದ್ಯಾರ್ಥಿಗಳು
ವೇಸ್ಟ್ ಪ್ಲಾಸ್ಟಿಕ್ ಬಳಸಿ ಗಣೇಶನಿಗೆ ರೂಪ ಕೊಟ್ಟ ಚಿತ್ರಕಲಾ ವಿದ್ಯಾರ್ಥಿಗಳು
ತಾಯಿಯ ಮೇಲೆ ಮಗುಚಿ ಬಿದ್ದ ಆಟೋ, ಅಮ್ಮನ ಉಳಿಸಲು ಆಟೋವನ್ನೇ ಎತ್ತಿದ ಬಾಲಕಿ
ತಾಯಿಯ ಮೇಲೆ ಮಗುಚಿ ಬಿದ್ದ ಆಟೋ, ಅಮ್ಮನ ಉಳಿಸಲು ಆಟೋವನ್ನೇ ಎತ್ತಿದ ಬಾಲಕಿ
ಎದೆ ಝಲ್​ ಎನಿಸುವ ದೃಶ್ಯ: ಬಾಲಕನ ಮೇಲೆ ಹರಿದ ಸರ್ಕಾರಿ ಬಸ್
ಎದೆ ಝಲ್​ ಎನಿಸುವ ದೃಶ್ಯ: ಬಾಲಕನ ಮೇಲೆ ಹರಿದ ಸರ್ಕಾರಿ ಬಸ್
Duleep Trophy 2024: 9 ವಿಕೆಟ್ ಕಬಳಿಸಿ ಮಿಂಚಿದ ಆಕಾಶ್ ದೀಪ್
Duleep Trophy 2024: 9 ವಿಕೆಟ್ ಕಬಳಿಸಿ ಮಿಂಚಿದ ಆಕಾಶ್ ದೀಪ್
'ಕಲ್ಕಿ' ಅವತಾರದಲ್ಲಿ ಗಣಪತಿ, ತಮಿಳುನಾಡಿನಲ್ಲಿ ಯಾಸ್ಕಿನ್ ಲೋಕ ಸೃಷ್ಟಿ
'ಕಲ್ಕಿ' ಅವತಾರದಲ್ಲಿ ಗಣಪತಿ, ತಮಿಳುನಾಡಿನಲ್ಲಿ ಯಾಸ್ಕಿನ್ ಲೋಕ ಸೃಷ್ಟಿ
ಭಾವೈಕ್ಯತೆ ಸಂದೇಶ ಸಾರಿದ ಮುಸ್ಲಿಂ ಕುಟುಂಬ, 24 ವರ್ಷಗಳಿಂದ ಗಣೇಶ ಹಬ್ಬಆಚರಣೆ
ಭಾವೈಕ್ಯತೆ ಸಂದೇಶ ಸಾರಿದ ಮುಸ್ಲಿಂ ಕುಟುಂಬ, 24 ವರ್ಷಗಳಿಂದ ಗಣೇಶ ಹಬ್ಬಆಚರಣೆ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ