AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pervez Musharraf Death: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನಿಧನ

Pervez Musharraf: ಲೇಹ್-ಕಾರ್ಗಿಲ್ ಹೆದ್ದಾರಿ ಸಮೀಪ ಪಾಕಿಸ್ತಾನದ ಸೇನೆಯನ್ನು ಗಡಿ ನಿಯಂತ್ರಣ ರೇಖೆ ದಾಟಿಸಿ, ಭಾರತದೊಂದಿಗೆ ಯುದ್ಧಕ್ಕೂ ಕಾರಣರಾಗಿದ್ದರು ಪರ್ವೇಜ್ ಮುಷರಫ್.

Pervez Musharraf Death: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನಿಧನ
ಜನರಲ್ ಪರ್ವೇಜ್ ಮುಷರಫ್
TV9 Web
| Updated By: Digi Tech Desk|

Updated on:Jun 10, 2022 | 7:04 PM

Share

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಪರ್ವೇಜ್ ಮುಷರಫ್ (78) ಶುಕ್ರವಾರ ದುಬೈನಲ್ಲಿ ನಿಧನರಾದರು. ಕ್ಷಿಪ್ರ ಸೇನಾ ಕ್ರಾಂತಿಯಲ್ಲಿ ಪಾಕಿಸ್ತಾನದ ಅಧಿಕಾರ ಕೈವಶ ಮಾಡಿಕೊಂಡಿದ್ದ ಪರ್ವೇಜ್ ಮುಷರಫ್ ನಂತರದ ದಿನಗಳಲ್ಲಿ ನಡೆದ ಹಲವು ರಾಜಕೀಯ ಬೆಳವಣಿಗೆಗಳಿಂದಾಗಿ ದೇಶದಿಂದ ದೂರವೇ ಉಳಿಯಬೇಕಾಯಿತು. ಭಾರತದ ಜೊತೆಗೆ ಪಾಕಿಸ್ತಾನವು ಶಾಂತಿ ಸ್ಥಾಪನೆಗೆ ಯತ್ನಿಸುತ್ತಿದ್ದಾಗ ಲೇಹ್-ಕಾರ್ಗಿಲ್ ಹೆದ್ದಾರಿ ಸಮೀಪ ಪಾಕಿಸ್ತಾನದ ಸೇನೆಯನ್ನು ಗಡಿ ನಿಯಂತ್ರಣ ರೇಖೆ ದಾಟಿಸಿ, ಯುದ್ಧಕ್ಕೂ ಕಾರಣರಾಗಿದ್ದರು.

ಇತ್ತೀಚಿನ ದಿನಗಳಲ್ಲಿ ತೀವ್ರ ಅನಾರೋಗ್ಯಕ್ಕೀಡಾಗಿದ್ದ ಮುಷರಫ್ ಅವರನ್ನು ದುಬೈನಲ್ಲಿರುವ ಅಮೆರಿಕದ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ವೆಂಟಿಲೇಟರ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮುಷರಫ್ ಅವರನ್ನು ನೋಡಲು ಅವರ ಕುಟುಂಬದ ಸದಸ್ಯರು ತರಾತುರಿಯಲ್ಲಿ ವಿಮಾನದಲ್ಲಿ ದುಬೈಗೆ ಬಂದಿದ್ದರು. ಪರ್ವೇಜ್ ಮುಷರಫ್ ಅವರು 1999ರಿಂದ 2008ರವರೆಗೆ ಪಾಕಿಸ್ತಾನದಲ್ಲಿ ಆಡಳಿತ ನಡೆಸಿದ್ದರು. ನವಾಜ್ ಷರೀಫ್ ಸರ್ಕಾರವನ್ನು ಸೇನಾ ಕ್ರಾಂತಿಯ ಮೂಲಕ ಪದಚ್ಯುತಿಗೊಳಿಸಿದ್ದರು.

ದೇಶ ವಿಭಜನೆ ವೇಳೆ ಕರಾಚಿಗೆ ಹೋದ ಕುಟುಂಬ

ಪರ್ವೇಜ್ ಮುಷರಫ್ ಅವರು ಆಗಸ್ಟ್ 11, 1943ರಂದು ದೆಹಲಿಯಲ್ಲಿ ಸೈಯದ್ ಮುಷಾರಫುದ್ದೀನ್ ಮತ್ತು ಬೇಗಂ ಜರೀನ್ ಮುಷರಫ್ ಅವರ ಪುತ್ರನಾಗಿ ಜನಿಸಿದರು. ಮುಷರಫ್ ಅವರ ತಾಯಿ ಬೇಗಂ ಜರೀನ್ ಲಖನೌ ಮೂಲದವರು. ಅವರು ಅಲ್ಲಿಯೇ ತಮ್ಮ ಶಾಲಾ ಶಿಕ್ಷಣ ಪಡೆದರು. ದೆಹಲಿ ವಿಶ್ವವಿದ್ಯಾಲಯದ ಇಂದ್ರಪ್ರಸ್ಥ ಕಾಲೇಜಿನಲ್ಲಿ ಪದವಿ ಪಡೆದ ಅವರು ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮುಷರಫ್ ಅವರ ಅಪ್ಪ ಸೈಯದ್ ಮುಷಾರಫುದ್ದೀನ್ ಬ್ರಿಟಿಷರ ಆಡಳಿತದ ಭಾರತ ಸರ್ಕಾರದ ವಿದೇಶಾಂಗ ವ್ಯವಹಾರಗಳ ಕಚೇರಿಯಲ್ಲಿ ಅಕೌಂಟೆಂಟ್ ಆಗಿದ್ದರು. ನಂತರ ಅಕೌಂಟಿಂಗ್ ಡೈರೆಕ್ಟರ್ ಆದರು.

1947ರಲ್ಲಿ ದೇಶ ವಿಭಜನೆ ವೇಳೆ ಮುಷರಫ್ ಕುಟುಂಬ ದೆಹಲಿಯಿಂದ ಕರಾಚಿಗೆ ಹೋಯಿತು. 1949-56ರ ಅವಧಿಯಲ್ಲಿ ಮುಷರಫ್ ಕುಟುಂಬ ಟರ್ಕಿಯಲ್ಲಿ ವಾಸವಾಗಿತ್ತು. 1964ರಲ್ಲಿ ಸೇನೆ ಸೇರಿದ ಮುಷರಫ್, ಕ್ವೆಟ್ಟಾದಲ್ಲಿನ ಆರ್ಮಿ ಕಮಾಂಡ್ ಮತ್ತು ಸ್ಟಾಫ್ ಕಾಲೇಜಿನಿಂದ ಪದವಿ ಪಡೆದರು.ನಂತರ ಲಂಡನ್‌ನ ರಾಯಲ್ ಕಾಲೇಜ್ ಆಫ್ ಡಿಫೆನ್ಸ್ ಸ್ಟಡೀಸ್‌ಗೆ ಸೇರಿದರು. ಫಿರಂಗಿ, ಶಸ್ತ್ರಾಸ್ತ್ರ ಕಮಾಂಡೋ ಘಟಕಗಳಲ್ಲಿ ಕಾರ್ಯನಿರ್ವಹಿಸಿದ್ದು ಕ್ವೆಟ್ಟಾದಲ್ಲಿನ ಸಿಬ್ಬಂದಿ ಕಾಲೇಜಿನಲ್ಲಿ ಮತ್ತು ರಾಷ್ಟ್ರೀಯ ರಕ್ಷಣಾ ಕಾಲೇಜಿನ ಯುದ್ಧ ವಿಭಾಗದಲ್ಲಿ ಬೋಧಕರಾಗಿದ್ದರು.

1965 ಮತ್ತು 197ರ ಯುದ್ಧದಲ್ಲಿ ಭಾರತ ವಿರುದ್ಧ ಹೋರಾಡಿದ್ದ ಮುಷರಫ್ ಅವರನ್ನು 1998ರಲ್ಲಿ ಪಾಕ್ ಪ್ರಧಾನಿ ನವಾಜ್ ಷರೀಫ್, ಸೇನಾಪಡೆಯ ಮುಖ್ಯಸ್ಥರನ್ನಾಗಿ ಮಾಡಿದರು. 1999ರಲ್ಲಿ ನಡೆದ ಕಾರ್ಗಿಲ್ ಕದನದಲ್ಲಿ ಪಾಕ್ ಸೇನೆ ನಡೆಸಿದ ಆಕ್ರಮಣದಲ್ಲಿ ಮುಷರಫ್ ಪ್ರಮುಖ ಪಾತ್ರ ವಹಿಸಿದ್ದರು. ಅಕ್ಟೋಬರ್ 12, 1999ರಂದು, ಮುಷರಫ್ ವಿದೇಶದಲ್ಲಿದ್ದಾಗ ಅವರನ್ನು ಸೇನಾ ಮುಖ್ಯಸ್ಥರ ಹುದ್ದೆಯಿಂದ ಅಂದಿನ ಪ್ರಧಾನಿ ನವಾಜ್ ಷರೀಫ್ ವಜಾ ಮಾಡಿದ್ದರು. ಮುಷರಫ್ ಅವರನ್ನು ತವರಿಗೆ ಕರೆತರುತ್ತಿದ್ದ ವಿಮಾನವನ್ನು ಕರಾಚಿ ವಿಮಾನ ನಿಲ್ದಾಣದಲ್ಲಿ ಇಳಿಯದಂತೆ ತಡೆಯಲು ಷರೀಫ್ ಪ್ರಯತ್ನಿಸಿದರು.

ಆದರೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಸಶಸ್ತ್ರ ಪಡೆಗಳು ವಿಮಾನ ನಿಲ್ದಾಣ ಮತ್ತು ಇತರ ಸರ್ಕಾರಿ ಸಂಸ್ಥೆಗಳ ನಿಯಂತ್ರಣವನ್ನು ಸುಪರ್ದಿಗೆ ತೆಗೆದುಕೊಂಡಿತು. ರಾತ್ರೋರಾತ್ರಿ ಷರೀಫ್ ಅವರನ್ನು ಪದಚ್ಯುತಗೊಳಿಸಿದ ಮುಷರಫ್, ಮಿಲಿಟರಿ ಸರ್ಕಾರ ಸ್ಥಾಪಿಸಿದರು.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:21 pm, Fri, 10 June 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?