AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್, ಡೀಸೆಲ್ ಕಾರು ಸಂಪೂರ್ಣ ಬ್ಯಾನ್ ಮಾಡಲು ಬ್ರಿಟನ್ ಪ್ರಧಾನಿ ನಿರ್ಧಾರ

ಬ್ರಿಟನ್ ಸರ್ಕಾರವು 2030ರ ಹೊತ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳನ್ನು ನಿಷೇಧಿಸಿ, ಎಲೆಕ್ಟ್ರಿಕ್ ವಾಹನಗಳನ್ನು ಬಳಕೆಗೆ ತರಲು ಮುಂದಾಗಿದೆ. ವಾಯುಮಾಲಿನ್ಯ ನಿಯಂತ್ರಣಕ್ಕಾಗಿ ಬ್ರಿಟನ್ ಈ ಮಹತ್ವದ ಹೆಜ್ಜೆ ಮುಂದಿಡಲು ನಿರ್ಧಾರ ಮಾಡಿದೆ. ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಮಂಗಳವಾರ ರಾತ್ರಿ ಹೀಗೊಂದು ಪ್ರಮುಖ ಘೋಷಣೆ ಮಾಡಿದ್ದಾರೆ. ಬ್ರಿಟನ್ ಸರ್ಕಾರದ ಮಹತ್ವದ ಯೋಜನೆಯಾದ 12 ಬಿಲಿಯನ್ ಪೌಂಡ್ಸ್ ವೆಚ್ಚದ ‘ಹಸಿರು ಅಜೆಂಡಾ’ದ ಭಾಗವಾಗಿ, 2030ರ ಹೊತ್ತಿಗೆ ಪೆಟ್ರೋಲ್, ಡೀಸೆಲ್ ಕಾರುಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸುವ ಬಗ್ಗೆ ಚಿಂತನೆ […]

ಪೆಟ್ರೋಲ್, ಡೀಸೆಲ್ ಕಾರು ಸಂಪೂರ್ಣ ಬ್ಯಾನ್ ಮಾಡಲು ಬ್ರಿಟನ್ ಪ್ರಧಾನಿ ನಿರ್ಧಾರ
ಸಾಧು ಶ್ರೀನಾಥ್​
|

Updated on: Nov 19, 2020 | 5:45 PM

Share

ಬ್ರಿಟನ್ ಸರ್ಕಾರವು 2030ರ ಹೊತ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳನ್ನು ನಿಷೇಧಿಸಿ, ಎಲೆಕ್ಟ್ರಿಕ್ ವಾಹನಗಳನ್ನು ಬಳಕೆಗೆ ತರಲು ಮುಂದಾಗಿದೆ. ವಾಯುಮಾಲಿನ್ಯ ನಿಯಂತ್ರಣಕ್ಕಾಗಿ ಬ್ರಿಟನ್ ಈ ಮಹತ್ವದ ಹೆಜ್ಜೆ ಮುಂದಿಡಲು ನಿರ್ಧಾರ ಮಾಡಿದೆ.

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಮಂಗಳವಾರ ರಾತ್ರಿ ಹೀಗೊಂದು ಪ್ರಮುಖ ಘೋಷಣೆ ಮಾಡಿದ್ದಾರೆ. ಬ್ರಿಟನ್ ಸರ್ಕಾರದ ಮಹತ್ವದ ಯೋಜನೆಯಾದ 12 ಬಿಲಿಯನ್ ಪೌಂಡ್ಸ್ ವೆಚ್ಚದ ‘ಹಸಿರು ಅಜೆಂಡಾ’ದ ಭಾಗವಾಗಿ, 2030ರ ಹೊತ್ತಿಗೆ ಪೆಟ್ರೋಲ್, ಡೀಸೆಲ್ ಕಾರುಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ. ಅದರಲ್ಲಿ 1.3 ಬಿಲಿಯನ್ ಪೌಂಡ್ಸ್ ವೆಚ್ಚದಲ್ಲಿ, ಬ್ರಿಟನ್​ನ ರಸ್ತೆ ಬದಿಗಳು, ವಾಹನ ಮಾರ್ಗಗಳು, ಮನೆಗಳ ಬಳಿ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಪಾಯಿಂಟ್​ಗಳನ್ನು ನಿರ್ಮಿಸಲಾಗುವುದು ಎಂದು ಬೋರಿಸ್ ಜಾನ್ಸನ್ ತಿಳಿಸಿದ್ದಾರೆ.

ಕಾರು ತಯಾರಕರು ಮತ್ತು ಮಾರಾಟಗಾರರ ಒಪ್ಪಂದ ಸಹಿತ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳನ್ನು ಬ್ಯಾನ್ ಮಾಡಲು ಬ್ರಿಟನ್ ಸರ್ಕಾರ ಮುಂದಾಗಿದ್ದು, ಎಲೆಕ್ಟ್ರಿಕ್ ವಾಹನಗಳ ಬ್ಯಾಟರಿ ಅಭಿವೃದ್ಧಿಗಾಗಿ ಮತ್ತು ಉತ್ಪಾದನೆಗಾಗಿ ಮುಂದಿನ ನಾಲ್ಕು ವರ್ಷಗಳಲ್ಲಿ ಸುಮಾರು 500 ಮಿಲಿಯನ್ ಪೌಂಡ್ಸ್ (49,16,49,46,155.00 ರೂಪಾಯಿ) ಮೀಸಲಿಡಲು ಬ್ರಿಟನ್ ಸರ್ಕಾರ ನಿರ್ಧರಿಸಿದೆ.

‘ವಾಹನಗಳ ಹೊಗೆಯಿಂದ ಪ್ರಕೃತಿ ನಾಶವಾಗುತ್ತಿದೆ. ಪರಿಸರವನ್ನು ಕಾಪಾಡಲು ಅನಿವಾರ್ಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳನ್ನು ಸಂಪೂರ್ಣವಾಗಿ ಬ್ಯಾನ್ ಮಾಡಬೇಕಾಗುತ್ತದೆ. ಈ ನಿಟ್ಟಿನಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಬಳಕೆಗೆ ತರಲಾಗುವುದು’ ಎಂದು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ತಿಳಿಸಿದ್ದಾರೆ.

ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ