Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್, ಡೀಸೆಲ್ ಕಾರು ಸಂಪೂರ್ಣ ಬ್ಯಾನ್ ಮಾಡಲು ಬ್ರಿಟನ್ ಪ್ರಧಾನಿ ನಿರ್ಧಾರ

ಬ್ರಿಟನ್ ಸರ್ಕಾರವು 2030ರ ಹೊತ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳನ್ನು ನಿಷೇಧಿಸಿ, ಎಲೆಕ್ಟ್ರಿಕ್ ವಾಹನಗಳನ್ನು ಬಳಕೆಗೆ ತರಲು ಮುಂದಾಗಿದೆ. ವಾಯುಮಾಲಿನ್ಯ ನಿಯಂತ್ರಣಕ್ಕಾಗಿ ಬ್ರಿಟನ್ ಈ ಮಹತ್ವದ ಹೆಜ್ಜೆ ಮುಂದಿಡಲು ನಿರ್ಧಾರ ಮಾಡಿದೆ. ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಮಂಗಳವಾರ ರಾತ್ರಿ ಹೀಗೊಂದು ಪ್ರಮುಖ ಘೋಷಣೆ ಮಾಡಿದ್ದಾರೆ. ಬ್ರಿಟನ್ ಸರ್ಕಾರದ ಮಹತ್ವದ ಯೋಜನೆಯಾದ 12 ಬಿಲಿಯನ್ ಪೌಂಡ್ಸ್ ವೆಚ್ಚದ ‘ಹಸಿರು ಅಜೆಂಡಾ’ದ ಭಾಗವಾಗಿ, 2030ರ ಹೊತ್ತಿಗೆ ಪೆಟ್ರೋಲ್, ಡೀಸೆಲ್ ಕಾರುಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸುವ ಬಗ್ಗೆ ಚಿಂತನೆ […]

ಪೆಟ್ರೋಲ್, ಡೀಸೆಲ್ ಕಾರು ಸಂಪೂರ್ಣ ಬ್ಯಾನ್ ಮಾಡಲು ಬ್ರಿಟನ್ ಪ್ರಧಾನಿ ನಿರ್ಧಾರ
Follow us
ಸಾಧು ಶ್ರೀನಾಥ್​
|

Updated on: Nov 19, 2020 | 5:45 PM

ಬ್ರಿಟನ್ ಸರ್ಕಾರವು 2030ರ ಹೊತ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳನ್ನು ನಿಷೇಧಿಸಿ, ಎಲೆಕ್ಟ್ರಿಕ್ ವಾಹನಗಳನ್ನು ಬಳಕೆಗೆ ತರಲು ಮುಂದಾಗಿದೆ. ವಾಯುಮಾಲಿನ್ಯ ನಿಯಂತ್ರಣಕ್ಕಾಗಿ ಬ್ರಿಟನ್ ಈ ಮಹತ್ವದ ಹೆಜ್ಜೆ ಮುಂದಿಡಲು ನಿರ್ಧಾರ ಮಾಡಿದೆ.

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಮಂಗಳವಾರ ರಾತ್ರಿ ಹೀಗೊಂದು ಪ್ರಮುಖ ಘೋಷಣೆ ಮಾಡಿದ್ದಾರೆ. ಬ್ರಿಟನ್ ಸರ್ಕಾರದ ಮಹತ್ವದ ಯೋಜನೆಯಾದ 12 ಬಿಲಿಯನ್ ಪೌಂಡ್ಸ್ ವೆಚ್ಚದ ‘ಹಸಿರು ಅಜೆಂಡಾ’ದ ಭಾಗವಾಗಿ, 2030ರ ಹೊತ್ತಿಗೆ ಪೆಟ್ರೋಲ್, ಡೀಸೆಲ್ ಕಾರುಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ. ಅದರಲ್ಲಿ 1.3 ಬಿಲಿಯನ್ ಪೌಂಡ್ಸ್ ವೆಚ್ಚದಲ್ಲಿ, ಬ್ರಿಟನ್​ನ ರಸ್ತೆ ಬದಿಗಳು, ವಾಹನ ಮಾರ್ಗಗಳು, ಮನೆಗಳ ಬಳಿ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಪಾಯಿಂಟ್​ಗಳನ್ನು ನಿರ್ಮಿಸಲಾಗುವುದು ಎಂದು ಬೋರಿಸ್ ಜಾನ್ಸನ್ ತಿಳಿಸಿದ್ದಾರೆ.

ಕಾರು ತಯಾರಕರು ಮತ್ತು ಮಾರಾಟಗಾರರ ಒಪ್ಪಂದ ಸಹಿತ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳನ್ನು ಬ್ಯಾನ್ ಮಾಡಲು ಬ್ರಿಟನ್ ಸರ್ಕಾರ ಮುಂದಾಗಿದ್ದು, ಎಲೆಕ್ಟ್ರಿಕ್ ವಾಹನಗಳ ಬ್ಯಾಟರಿ ಅಭಿವೃದ್ಧಿಗಾಗಿ ಮತ್ತು ಉತ್ಪಾದನೆಗಾಗಿ ಮುಂದಿನ ನಾಲ್ಕು ವರ್ಷಗಳಲ್ಲಿ ಸುಮಾರು 500 ಮಿಲಿಯನ್ ಪೌಂಡ್ಸ್ (49,16,49,46,155.00 ರೂಪಾಯಿ) ಮೀಸಲಿಡಲು ಬ್ರಿಟನ್ ಸರ್ಕಾರ ನಿರ್ಧರಿಸಿದೆ.

‘ವಾಹನಗಳ ಹೊಗೆಯಿಂದ ಪ್ರಕೃತಿ ನಾಶವಾಗುತ್ತಿದೆ. ಪರಿಸರವನ್ನು ಕಾಪಾಡಲು ಅನಿವಾರ್ಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳನ್ನು ಸಂಪೂರ್ಣವಾಗಿ ಬ್ಯಾನ್ ಮಾಡಬೇಕಾಗುತ್ತದೆ. ಈ ನಿಟ್ಟಿನಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಬಳಕೆಗೆ ತರಲಾಗುವುದು’ ಎಂದು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ತಿಳಿಸಿದ್ದಾರೆ.

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್