AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್, ಡೀಸೆಲ್ ಕಾರು ಸಂಪೂರ್ಣ ಬ್ಯಾನ್ ಮಾಡಲು ಬ್ರಿಟನ್ ಪ್ರಧಾನಿ ನಿರ್ಧಾರ

ಬ್ರಿಟನ್ ಸರ್ಕಾರವು 2030ರ ಹೊತ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳನ್ನು ನಿಷೇಧಿಸಿ, ಎಲೆಕ್ಟ್ರಿಕ್ ವಾಹನಗಳನ್ನು ಬಳಕೆಗೆ ತರಲು ಮುಂದಾಗಿದೆ. ವಾಯುಮಾಲಿನ್ಯ ನಿಯಂತ್ರಣಕ್ಕಾಗಿ ಬ್ರಿಟನ್ ಈ ಮಹತ್ವದ ಹೆಜ್ಜೆ ಮುಂದಿಡಲು ನಿರ್ಧಾರ ಮಾಡಿದೆ. ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಮಂಗಳವಾರ ರಾತ್ರಿ ಹೀಗೊಂದು ಪ್ರಮುಖ ಘೋಷಣೆ ಮಾಡಿದ್ದಾರೆ. ಬ್ರಿಟನ್ ಸರ್ಕಾರದ ಮಹತ್ವದ ಯೋಜನೆಯಾದ 12 ಬಿಲಿಯನ್ ಪೌಂಡ್ಸ್ ವೆಚ್ಚದ ‘ಹಸಿರು ಅಜೆಂಡಾ’ದ ಭಾಗವಾಗಿ, 2030ರ ಹೊತ್ತಿಗೆ ಪೆಟ್ರೋಲ್, ಡೀಸೆಲ್ ಕಾರುಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸುವ ಬಗ್ಗೆ ಚಿಂತನೆ […]

ಪೆಟ್ರೋಲ್, ಡೀಸೆಲ್ ಕಾರು ಸಂಪೂರ್ಣ ಬ್ಯಾನ್ ಮಾಡಲು ಬ್ರಿಟನ್ ಪ್ರಧಾನಿ ನಿರ್ಧಾರ
ಸಾಧು ಶ್ರೀನಾಥ್​
|

Updated on: Nov 19, 2020 | 5:45 PM

Share

ಬ್ರಿಟನ್ ಸರ್ಕಾರವು 2030ರ ಹೊತ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳನ್ನು ನಿಷೇಧಿಸಿ, ಎಲೆಕ್ಟ್ರಿಕ್ ವಾಹನಗಳನ್ನು ಬಳಕೆಗೆ ತರಲು ಮುಂದಾಗಿದೆ. ವಾಯುಮಾಲಿನ್ಯ ನಿಯಂತ್ರಣಕ್ಕಾಗಿ ಬ್ರಿಟನ್ ಈ ಮಹತ್ವದ ಹೆಜ್ಜೆ ಮುಂದಿಡಲು ನಿರ್ಧಾರ ಮಾಡಿದೆ.

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಮಂಗಳವಾರ ರಾತ್ರಿ ಹೀಗೊಂದು ಪ್ರಮುಖ ಘೋಷಣೆ ಮಾಡಿದ್ದಾರೆ. ಬ್ರಿಟನ್ ಸರ್ಕಾರದ ಮಹತ್ವದ ಯೋಜನೆಯಾದ 12 ಬಿಲಿಯನ್ ಪೌಂಡ್ಸ್ ವೆಚ್ಚದ ‘ಹಸಿರು ಅಜೆಂಡಾ’ದ ಭಾಗವಾಗಿ, 2030ರ ಹೊತ್ತಿಗೆ ಪೆಟ್ರೋಲ್, ಡೀಸೆಲ್ ಕಾರುಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ. ಅದರಲ್ಲಿ 1.3 ಬಿಲಿಯನ್ ಪೌಂಡ್ಸ್ ವೆಚ್ಚದಲ್ಲಿ, ಬ್ರಿಟನ್​ನ ರಸ್ತೆ ಬದಿಗಳು, ವಾಹನ ಮಾರ್ಗಗಳು, ಮನೆಗಳ ಬಳಿ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಪಾಯಿಂಟ್​ಗಳನ್ನು ನಿರ್ಮಿಸಲಾಗುವುದು ಎಂದು ಬೋರಿಸ್ ಜಾನ್ಸನ್ ತಿಳಿಸಿದ್ದಾರೆ.

ಕಾರು ತಯಾರಕರು ಮತ್ತು ಮಾರಾಟಗಾರರ ಒಪ್ಪಂದ ಸಹಿತ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳನ್ನು ಬ್ಯಾನ್ ಮಾಡಲು ಬ್ರಿಟನ್ ಸರ್ಕಾರ ಮುಂದಾಗಿದ್ದು, ಎಲೆಕ್ಟ್ರಿಕ್ ವಾಹನಗಳ ಬ್ಯಾಟರಿ ಅಭಿವೃದ್ಧಿಗಾಗಿ ಮತ್ತು ಉತ್ಪಾದನೆಗಾಗಿ ಮುಂದಿನ ನಾಲ್ಕು ವರ್ಷಗಳಲ್ಲಿ ಸುಮಾರು 500 ಮಿಲಿಯನ್ ಪೌಂಡ್ಸ್ (49,16,49,46,155.00 ರೂಪಾಯಿ) ಮೀಸಲಿಡಲು ಬ್ರಿಟನ್ ಸರ್ಕಾರ ನಿರ್ಧರಿಸಿದೆ.

‘ವಾಹನಗಳ ಹೊಗೆಯಿಂದ ಪ್ರಕೃತಿ ನಾಶವಾಗುತ್ತಿದೆ. ಪರಿಸರವನ್ನು ಕಾಪಾಡಲು ಅನಿವಾರ್ಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳನ್ನು ಸಂಪೂರ್ಣವಾಗಿ ಬ್ಯಾನ್ ಮಾಡಬೇಕಾಗುತ್ತದೆ. ಈ ನಿಟ್ಟಿನಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಬಳಕೆಗೆ ತರಲಾಗುವುದು’ ಎಂದು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ತಿಳಿಸಿದ್ದಾರೆ.

ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ