AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್, ಡೀಸೆಲ್ ಕಾರು ಸಂಪೂರ್ಣ ಬ್ಯಾನ್ ಮಾಡಲು ಬ್ರಿಟನ್ ಪ್ರಧಾನಿ ನಿರ್ಧಾರ

ಬ್ರಿಟನ್ ಸರ್ಕಾರವು 2030ರ ಹೊತ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳನ್ನು ನಿಷೇಧಿಸಿ, ಎಲೆಕ್ಟ್ರಿಕ್ ವಾಹನಗಳನ್ನು ಬಳಕೆಗೆ ತರಲು ಮುಂದಾಗಿದೆ. ವಾಯುಮಾಲಿನ್ಯ ನಿಯಂತ್ರಣಕ್ಕಾಗಿ ಬ್ರಿಟನ್ ಈ ಮಹತ್ವದ ಹೆಜ್ಜೆ ಮುಂದಿಡಲು ನಿರ್ಧಾರ ಮಾಡಿದೆ. ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಮಂಗಳವಾರ ರಾತ್ರಿ ಹೀಗೊಂದು ಪ್ರಮುಖ ಘೋಷಣೆ ಮಾಡಿದ್ದಾರೆ. ಬ್ರಿಟನ್ ಸರ್ಕಾರದ ಮಹತ್ವದ ಯೋಜನೆಯಾದ 12 ಬಿಲಿಯನ್ ಪೌಂಡ್ಸ್ ವೆಚ್ಚದ ‘ಹಸಿರು ಅಜೆಂಡಾ’ದ ಭಾಗವಾಗಿ, 2030ರ ಹೊತ್ತಿಗೆ ಪೆಟ್ರೋಲ್, ಡೀಸೆಲ್ ಕಾರುಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸುವ ಬಗ್ಗೆ ಚಿಂತನೆ […]

ಪೆಟ್ರೋಲ್, ಡೀಸೆಲ್ ಕಾರು ಸಂಪೂರ್ಣ ಬ್ಯಾನ್ ಮಾಡಲು ಬ್ರಿಟನ್ ಪ್ರಧಾನಿ ನಿರ್ಧಾರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 19, 2020 | 5:45 PM

Share

ಬ್ರಿಟನ್ ಸರ್ಕಾರವು 2030ರ ಹೊತ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳನ್ನು ನಿಷೇಧಿಸಿ, ಎಲೆಕ್ಟ್ರಿಕ್ ವಾಹನಗಳನ್ನು ಬಳಕೆಗೆ ತರಲು ಮುಂದಾಗಿದೆ. ವಾಯುಮಾಲಿನ್ಯ ನಿಯಂತ್ರಣಕ್ಕಾಗಿ ಬ್ರಿಟನ್ ಈ ಮಹತ್ವದ ಹೆಜ್ಜೆ ಮುಂದಿಡಲು ನಿರ್ಧಾರ ಮಾಡಿದೆ.

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಮಂಗಳವಾರ ರಾತ್ರಿ ಹೀಗೊಂದು ಪ್ರಮುಖ ಘೋಷಣೆ ಮಾಡಿದ್ದಾರೆ. ಬ್ರಿಟನ್ ಸರ್ಕಾರದ ಮಹತ್ವದ ಯೋಜನೆಯಾದ 12 ಬಿಲಿಯನ್ ಪೌಂಡ್ಸ್ ವೆಚ್ಚದ ‘ಹಸಿರು ಅಜೆಂಡಾ’ದ ಭಾಗವಾಗಿ, 2030ರ ಹೊತ್ತಿಗೆ ಪೆಟ್ರೋಲ್, ಡೀಸೆಲ್ ಕಾರುಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ. ಅದರಲ್ಲಿ 1.3 ಬಿಲಿಯನ್ ಪೌಂಡ್ಸ್ ವೆಚ್ಚದಲ್ಲಿ, ಬ್ರಿಟನ್​ನ ರಸ್ತೆ ಬದಿಗಳು, ವಾಹನ ಮಾರ್ಗಗಳು, ಮನೆಗಳ ಬಳಿ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಪಾಯಿಂಟ್​ಗಳನ್ನು ನಿರ್ಮಿಸಲಾಗುವುದು ಎಂದು ಬೋರಿಸ್ ಜಾನ್ಸನ್ ತಿಳಿಸಿದ್ದಾರೆ.

ಕಾರು ತಯಾರಕರು ಮತ್ತು ಮಾರಾಟಗಾರರ ಒಪ್ಪಂದ ಸಹಿತ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳನ್ನು ಬ್ಯಾನ್ ಮಾಡಲು ಬ್ರಿಟನ್ ಸರ್ಕಾರ ಮುಂದಾಗಿದ್ದು, ಎಲೆಕ್ಟ್ರಿಕ್ ವಾಹನಗಳ ಬ್ಯಾಟರಿ ಅಭಿವೃದ್ಧಿಗಾಗಿ ಮತ್ತು ಉತ್ಪಾದನೆಗಾಗಿ ಮುಂದಿನ ನಾಲ್ಕು ವರ್ಷಗಳಲ್ಲಿ ಸುಮಾರು 500 ಮಿಲಿಯನ್ ಪೌಂಡ್ಸ್ (49,16,49,46,155.00 ರೂಪಾಯಿ) ಮೀಸಲಿಡಲು ಬ್ರಿಟನ್ ಸರ್ಕಾರ ನಿರ್ಧರಿಸಿದೆ.

‘ವಾಹನಗಳ ಹೊಗೆಯಿಂದ ಪ್ರಕೃತಿ ನಾಶವಾಗುತ್ತಿದೆ. ಪರಿಸರವನ್ನು ಕಾಪಾಡಲು ಅನಿವಾರ್ಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳನ್ನು ಸಂಪೂರ್ಣವಾಗಿ ಬ್ಯಾನ್ ಮಾಡಬೇಕಾಗುತ್ತದೆ. ಈ ನಿಟ್ಟಿನಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಬಳಕೆಗೆ ತರಲಾಗುವುದು’ ಎಂದು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ತಿಳಿಸಿದ್ದಾರೆ.

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು