ಪೆಟ್ರೋಲ್, ಡೀಸೆಲ್ ಕಾರು ಸಂಪೂರ್ಣ ಬ್ಯಾನ್ ಮಾಡಲು ಬ್ರಿಟನ್ ಪ್ರಧಾನಿ ನಿರ್ಧಾರ

ಬ್ರಿಟನ್ ಸರ್ಕಾರವು 2030ರ ಹೊತ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳನ್ನು ನಿಷೇಧಿಸಿ, ಎಲೆಕ್ಟ್ರಿಕ್ ವಾಹನಗಳನ್ನು ಬಳಕೆಗೆ ತರಲು ಮುಂದಾಗಿದೆ. ವಾಯುಮಾಲಿನ್ಯ ನಿಯಂತ್ರಣಕ್ಕಾಗಿ ಬ್ರಿಟನ್ ಈ ಮಹತ್ವದ ಹೆಜ್ಜೆ ಮುಂದಿಡಲು ನಿರ್ಧಾರ ಮಾಡಿದೆ. ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಮಂಗಳವಾರ ರಾತ್ರಿ ಹೀಗೊಂದು ಪ್ರಮುಖ ಘೋಷಣೆ ಮಾಡಿದ್ದಾರೆ. ಬ್ರಿಟನ್ ಸರ್ಕಾರದ ಮಹತ್ವದ ಯೋಜನೆಯಾದ 12 ಬಿಲಿಯನ್ ಪೌಂಡ್ಸ್ ವೆಚ್ಚದ ‘ಹಸಿರು ಅಜೆಂಡಾ’ದ ಭಾಗವಾಗಿ, 2030ರ ಹೊತ್ತಿಗೆ ಪೆಟ್ರೋಲ್, ಡೀಸೆಲ್ ಕಾರುಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸುವ ಬಗ್ಗೆ ಚಿಂತನೆ […]

ಪೆಟ್ರೋಲ್, ಡೀಸೆಲ್ ಕಾರು ಸಂಪೂರ್ಣ ಬ್ಯಾನ್ ಮಾಡಲು ಬ್ರಿಟನ್ ಪ್ರಧಾನಿ ನಿರ್ಧಾರ
ಸಾಧು ಶ್ರೀನಾಥ್​

Updated on: Nov 19, 2020 | 5:45 PM

ಬ್ರಿಟನ್ ಸರ್ಕಾರವು 2030ರ ಹೊತ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳನ್ನು ನಿಷೇಧಿಸಿ, ಎಲೆಕ್ಟ್ರಿಕ್ ವಾಹನಗಳನ್ನು ಬಳಕೆಗೆ ತರಲು ಮುಂದಾಗಿದೆ. ವಾಯುಮಾಲಿನ್ಯ ನಿಯಂತ್ರಣಕ್ಕಾಗಿ ಬ್ರಿಟನ್ ಈ ಮಹತ್ವದ ಹೆಜ್ಜೆ ಮುಂದಿಡಲು ನಿರ್ಧಾರ ಮಾಡಿದೆ.

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಮಂಗಳವಾರ ರಾತ್ರಿ ಹೀಗೊಂದು ಪ್ರಮುಖ ಘೋಷಣೆ ಮಾಡಿದ್ದಾರೆ. ಬ್ರಿಟನ್ ಸರ್ಕಾರದ ಮಹತ್ವದ ಯೋಜನೆಯಾದ 12 ಬಿಲಿಯನ್ ಪೌಂಡ್ಸ್ ವೆಚ್ಚದ ‘ಹಸಿರು ಅಜೆಂಡಾ’ದ ಭಾಗವಾಗಿ, 2030ರ ಹೊತ್ತಿಗೆ ಪೆಟ್ರೋಲ್, ಡೀಸೆಲ್ ಕಾರುಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ. ಅದರಲ್ಲಿ 1.3 ಬಿಲಿಯನ್ ಪೌಂಡ್ಸ್ ವೆಚ್ಚದಲ್ಲಿ, ಬ್ರಿಟನ್​ನ ರಸ್ತೆ ಬದಿಗಳು, ವಾಹನ ಮಾರ್ಗಗಳು, ಮನೆಗಳ ಬಳಿ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಪಾಯಿಂಟ್​ಗಳನ್ನು ನಿರ್ಮಿಸಲಾಗುವುದು ಎಂದು ಬೋರಿಸ್ ಜಾನ್ಸನ್ ತಿಳಿಸಿದ್ದಾರೆ.

ಕಾರು ತಯಾರಕರು ಮತ್ತು ಮಾರಾಟಗಾರರ ಒಪ್ಪಂದ ಸಹಿತ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳನ್ನು ಬ್ಯಾನ್ ಮಾಡಲು ಬ್ರಿಟನ್ ಸರ್ಕಾರ ಮುಂದಾಗಿದ್ದು, ಎಲೆಕ್ಟ್ರಿಕ್ ವಾಹನಗಳ ಬ್ಯಾಟರಿ ಅಭಿವೃದ್ಧಿಗಾಗಿ ಮತ್ತು ಉತ್ಪಾದನೆಗಾಗಿ ಮುಂದಿನ ನಾಲ್ಕು ವರ್ಷಗಳಲ್ಲಿ ಸುಮಾರು 500 ಮಿಲಿಯನ್ ಪೌಂಡ್ಸ್ (49,16,49,46,155.00 ರೂಪಾಯಿ) ಮೀಸಲಿಡಲು ಬ್ರಿಟನ್ ಸರ್ಕಾರ ನಿರ್ಧರಿಸಿದೆ.

‘ವಾಹನಗಳ ಹೊಗೆಯಿಂದ ಪ್ರಕೃತಿ ನಾಶವಾಗುತ್ತಿದೆ. ಪರಿಸರವನ್ನು ಕಾಪಾಡಲು ಅನಿವಾರ್ಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳನ್ನು ಸಂಪೂರ್ಣವಾಗಿ ಬ್ಯಾನ್ ಮಾಡಬೇಕಾಗುತ್ತದೆ. ಈ ನಿಟ್ಟಿನಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಬಳಕೆಗೆ ತರಲಾಗುವುದು’ ಎಂದು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ತಿಳಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us