AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆಗೂ ತಪ್ಪಲಿಲ್ಲ ಹ್ಯಾಕರ್ಸ್​ ಕಾಟ; ಸೈಬರ್​ ಅಟ್ಯಾಕ್​ಗೆ ಬೆದರಿದ ಫೈಜರ್​, ಬಯೋಎನ್​ಟೆಕ್

ಕೊರೊನಾ ಲಸಿಕೆಗೆ ಸಂಬಂಧಿಸಿದ ಡೇಟಾ ಕಾನೂನು ಬಾಹಿರವಾಗಿ ಹ್ಯಾಕರ್​ಗಳ ಕೈ ಸೇರಿದೆ ಎಂದು ಫೈಜರ್ ಮತ್ತು ಬಯೋಎನ್​ಟೆಕ್​ ಸಂಸ್ಥೆಗಳು ಹೇಳಿಕೊಂಡಿವೆ. ಡೇಟಾ ಯಾರ ಕೈ ಸೇರಿದೆ ಎಂಬುದೂ ತಿಳಿಯುತ್ತಿಲ್ಲವೆಂದು ಆತಂಕ ವ್ಯಕ್ತಪಡಿಸಿವೆ.

ಕೊರೊನಾ ಲಸಿಕೆಗೂ ತಪ್ಪಲಿಲ್ಲ ಹ್ಯಾಕರ್ಸ್​ ಕಾಟ; ಸೈಬರ್​ ಅಟ್ಯಾಕ್​ಗೆ ಬೆದರಿದ ಫೈಜರ್​, ಬಯೋಎನ್​ಟೆಕ್
ಸಾಂದರ್ಭಿಕ ಚಿತ್ರ
Skanda
| Edited By: |

Updated on:Dec 10, 2020 | 7:24 PM

Share

ಲಂಡನ್: ಕೊರೊನಾ ಲಸಿಕೆಗೆ ಸೇರಿದ ಬಹುಮುಖ್ಯ ಮಾಹಿತಿ ಸೋರಿಕೆಯಾಗಿದೆ ಎಂದು ಫೈಜರ್​ ಮತ್ತು ಬಯೋಎನ್​ಟೆಕ್​ ಸಂಸ್ಥೆಗಳು ಆರೋಪ ಮಾಡಿವೆ. ಯುರೋಪ್​ ದೇಶದ ಔಷಧೀಯ ಸಂಸ್ಥೆಯು (EMA) ತನ್ನ ಮೇಲೆ ಸೈಬರ್​ ಅಟ್ಯಾಕ್​ ಆಗಿದೆಯೆಂದು ಹೇಳಿದ ಬೆನ್ನಲ್ಲೇ ಈ ಮಾಹಿತಿ ಹೊರಬಿದ್ದಿದೆ.

ಕೊರೊನಾ ಲಸಿಕೆಗೆ ಸಂಬಂಧಿಸಿದ ಡೇಟಾ ಕಾನೂನು ಬಾಹಿರವಾಗಿ ಹ್ಯಾಕರ್​ಗಳ ಕೈ ಸೇರಿದೆ ಎಂದು ಫೈಜರ್ ಮತ್ತು ಬಯೋಎನ್​ಟೆಕ್ ಸಂಸ್ಥೆಗಳು ಹೇಳಿಕೊಂಡಿವೆ. ಡೇಟಾ ಸೋರಿಕೆಯಾಗುತ್ತಿರುವ ಕುರಿತು ನಮಗೆ ಯಾವುದೇ ಮಾಹಿತಿ ತಿಳಿದಿರಲಿಲ್ಲ. ಡೇಟಾ ಯಾರ ಕೈ ಸೇರಿದೆ ಎಂಬುದೂ ತಿಳಿಯುತ್ತಿಲ್ಲವೆಂದು ಆತಂಕ ವ್ಯಕ್ತಪಡಿಸಿವೆ.

ಈ ಕುರಿತು ಪ್ರತಿಕ್ರಿಯಿಸಿರುವ EMA ಹ್ಯಾಕರ್​ಗಳನ್ನು ಪತ್ತೆ ಹಚ್ಚಲು ಕಾನೂನು ತಜ್ಞರ ಸಹಾಯ ಪಡೆದಿದ್ದೇವೆ. ಕೊರೊನಾ ಲಸಿಕೆ ಉತ್ಪಾದಕ ಸಂಸ್ಥೆಗಳಿಗೆ ಯಾವುದೇ ರೀತಿಯ ತೊಂದರೆಯಾಗದು ಎಂದು ಭರವಸೆ ನೀಡಿದೆ. ಈ ವರ್ಷದ ಆರಂಭದಲ್ಲಿ ಬ್ರಿಟನ್​ ದೇಶವು ತನ್ನಲ್ಲಿರುವ ಕೊವಿಡ್​ ಲಸಿಕೆ ಸಂಬಂಧಿತ ವಿಷಯಗಳನ್ನು ರಷ್ಯಾದ ಹ್ಯಾಕರ್ಸ್​ ಅಕ್ರಮವಾಗಿ ಸಂಗ್ರಹಿಸುತ್ತಿದ್ದಾರೆ ಎಂದು ಆರೋಪಿಸಿತ್ತು.

ಇಷ್ಟೇ ಅಲ್ಲದೇ.. ಜಾನ್ಸನ್ ಅಂಡ್ ಜಾನ್ಸನ್, ನೋವಾವ್ಯಾಕ್ಸ್, ಆಸ್ಟ್ರಾಜೆನೆಕಾ ಹಾಗೂ ಸೌತ್ ಕೊರಿಯನ್​ ಪ್ರಯೋಗಶಾಲೆಗಳ ಮಾಹಿತಿಯನ್ನು ಕದಿಯಲು ಹ್ಯಾಕರ್ಸ್​ ಯತ್ನಿಸಿದ್ದಾರೆ ಎಂದು ವಾಲ್​ ಸ್ಟ್ರೀಟ್ ಜರ್ನಲ್​ ವರದಿ ಮಾಡಿದೆ.

ಬಡರಾಷ್ಟ್ರಗಳ ಬಡಪಾಯಿಗಳಿಗೆ ಕೊರೊನಾ ಲಸಿಕೆ ಮರೀಚಿಕೆಯಷ್ಟೇ.. ಅಧ್ಯಯನ ಹೇಳಿದ ಕಟು ಸತ್ಯ ಇಲ್ಲಿದೆ

Published On - 7:22 pm, Thu, 10 December 20

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ