AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆಗೂ ತಪ್ಪಲಿಲ್ಲ ಹ್ಯಾಕರ್ಸ್​ ಕಾಟ; ಸೈಬರ್​ ಅಟ್ಯಾಕ್​ಗೆ ಬೆದರಿದ ಫೈಜರ್​, ಬಯೋಎನ್​ಟೆಕ್

ಕೊರೊನಾ ಲಸಿಕೆಗೆ ಸಂಬಂಧಿಸಿದ ಡೇಟಾ ಕಾನೂನು ಬಾಹಿರವಾಗಿ ಹ್ಯಾಕರ್​ಗಳ ಕೈ ಸೇರಿದೆ ಎಂದು ಫೈಜರ್ ಮತ್ತು ಬಯೋಎನ್​ಟೆಕ್​ ಸಂಸ್ಥೆಗಳು ಹೇಳಿಕೊಂಡಿವೆ. ಡೇಟಾ ಯಾರ ಕೈ ಸೇರಿದೆ ಎಂಬುದೂ ತಿಳಿಯುತ್ತಿಲ್ಲವೆಂದು ಆತಂಕ ವ್ಯಕ್ತಪಡಿಸಿವೆ.

ಕೊರೊನಾ ಲಸಿಕೆಗೂ ತಪ್ಪಲಿಲ್ಲ ಹ್ಯಾಕರ್ಸ್​ ಕಾಟ; ಸೈಬರ್​ ಅಟ್ಯಾಕ್​ಗೆ ಬೆದರಿದ ಫೈಜರ್​, ಬಯೋಎನ್​ಟೆಕ್
ಸಾಂದರ್ಭಿಕ ಚಿತ್ರ
Skanda
| Edited By: |

Updated on:Dec 10, 2020 | 7:24 PM

Share

ಲಂಡನ್: ಕೊರೊನಾ ಲಸಿಕೆಗೆ ಸೇರಿದ ಬಹುಮುಖ್ಯ ಮಾಹಿತಿ ಸೋರಿಕೆಯಾಗಿದೆ ಎಂದು ಫೈಜರ್​ ಮತ್ತು ಬಯೋಎನ್​ಟೆಕ್​ ಸಂಸ್ಥೆಗಳು ಆರೋಪ ಮಾಡಿವೆ. ಯುರೋಪ್​ ದೇಶದ ಔಷಧೀಯ ಸಂಸ್ಥೆಯು (EMA) ತನ್ನ ಮೇಲೆ ಸೈಬರ್​ ಅಟ್ಯಾಕ್​ ಆಗಿದೆಯೆಂದು ಹೇಳಿದ ಬೆನ್ನಲ್ಲೇ ಈ ಮಾಹಿತಿ ಹೊರಬಿದ್ದಿದೆ.

ಕೊರೊನಾ ಲಸಿಕೆಗೆ ಸಂಬಂಧಿಸಿದ ಡೇಟಾ ಕಾನೂನು ಬಾಹಿರವಾಗಿ ಹ್ಯಾಕರ್​ಗಳ ಕೈ ಸೇರಿದೆ ಎಂದು ಫೈಜರ್ ಮತ್ತು ಬಯೋಎನ್​ಟೆಕ್ ಸಂಸ್ಥೆಗಳು ಹೇಳಿಕೊಂಡಿವೆ. ಡೇಟಾ ಸೋರಿಕೆಯಾಗುತ್ತಿರುವ ಕುರಿತು ನಮಗೆ ಯಾವುದೇ ಮಾಹಿತಿ ತಿಳಿದಿರಲಿಲ್ಲ. ಡೇಟಾ ಯಾರ ಕೈ ಸೇರಿದೆ ಎಂಬುದೂ ತಿಳಿಯುತ್ತಿಲ್ಲವೆಂದು ಆತಂಕ ವ್ಯಕ್ತಪಡಿಸಿವೆ.

ಈ ಕುರಿತು ಪ್ರತಿಕ್ರಿಯಿಸಿರುವ EMA ಹ್ಯಾಕರ್​ಗಳನ್ನು ಪತ್ತೆ ಹಚ್ಚಲು ಕಾನೂನು ತಜ್ಞರ ಸಹಾಯ ಪಡೆದಿದ್ದೇವೆ. ಕೊರೊನಾ ಲಸಿಕೆ ಉತ್ಪಾದಕ ಸಂಸ್ಥೆಗಳಿಗೆ ಯಾವುದೇ ರೀತಿಯ ತೊಂದರೆಯಾಗದು ಎಂದು ಭರವಸೆ ನೀಡಿದೆ. ಈ ವರ್ಷದ ಆರಂಭದಲ್ಲಿ ಬ್ರಿಟನ್​ ದೇಶವು ತನ್ನಲ್ಲಿರುವ ಕೊವಿಡ್​ ಲಸಿಕೆ ಸಂಬಂಧಿತ ವಿಷಯಗಳನ್ನು ರಷ್ಯಾದ ಹ್ಯಾಕರ್ಸ್​ ಅಕ್ರಮವಾಗಿ ಸಂಗ್ರಹಿಸುತ್ತಿದ್ದಾರೆ ಎಂದು ಆರೋಪಿಸಿತ್ತು.

ಇಷ್ಟೇ ಅಲ್ಲದೇ.. ಜಾನ್ಸನ್ ಅಂಡ್ ಜಾನ್ಸನ್, ನೋವಾವ್ಯಾಕ್ಸ್, ಆಸ್ಟ್ರಾಜೆನೆಕಾ ಹಾಗೂ ಸೌತ್ ಕೊರಿಯನ್​ ಪ್ರಯೋಗಶಾಲೆಗಳ ಮಾಹಿತಿಯನ್ನು ಕದಿಯಲು ಹ್ಯಾಕರ್ಸ್​ ಯತ್ನಿಸಿದ್ದಾರೆ ಎಂದು ವಾಲ್​ ಸ್ಟ್ರೀಟ್ ಜರ್ನಲ್​ ವರದಿ ಮಾಡಿದೆ.

ಬಡರಾಷ್ಟ್ರಗಳ ಬಡಪಾಯಿಗಳಿಗೆ ಕೊರೊನಾ ಲಸಿಕೆ ಮರೀಚಿಕೆಯಷ್ಟೇ.. ಅಧ್ಯಯನ ಹೇಳಿದ ಕಟು ಸತ್ಯ ಇಲ್ಲಿದೆ

Published On - 7:22 pm, Thu, 10 December 20

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ