AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆಗೂ ತಪ್ಪಲಿಲ್ಲ ಹ್ಯಾಕರ್ಸ್​ ಕಾಟ; ಸೈಬರ್​ ಅಟ್ಯಾಕ್​ಗೆ ಬೆದರಿದ ಫೈಜರ್​, ಬಯೋಎನ್​ಟೆಕ್

ಕೊರೊನಾ ಲಸಿಕೆಗೆ ಸಂಬಂಧಿಸಿದ ಡೇಟಾ ಕಾನೂನು ಬಾಹಿರವಾಗಿ ಹ್ಯಾಕರ್​ಗಳ ಕೈ ಸೇರಿದೆ ಎಂದು ಫೈಜರ್ ಮತ್ತು ಬಯೋಎನ್​ಟೆಕ್​ ಸಂಸ್ಥೆಗಳು ಹೇಳಿಕೊಂಡಿವೆ. ಡೇಟಾ ಯಾರ ಕೈ ಸೇರಿದೆ ಎಂಬುದೂ ತಿಳಿಯುತ್ತಿಲ್ಲವೆಂದು ಆತಂಕ ವ್ಯಕ್ತಪಡಿಸಿವೆ.

ಕೊರೊನಾ ಲಸಿಕೆಗೂ ತಪ್ಪಲಿಲ್ಲ ಹ್ಯಾಕರ್ಸ್​ ಕಾಟ; ಸೈಬರ್​ ಅಟ್ಯಾಕ್​ಗೆ ಬೆದರಿದ ಫೈಜರ್​, ಬಯೋಎನ್​ಟೆಕ್
ಸಾಂದರ್ಭಿಕ ಚಿತ್ರ
Skanda
| Edited By: |

Updated on:Dec 10, 2020 | 7:24 PM

Share

ಲಂಡನ್: ಕೊರೊನಾ ಲಸಿಕೆಗೆ ಸೇರಿದ ಬಹುಮುಖ್ಯ ಮಾಹಿತಿ ಸೋರಿಕೆಯಾಗಿದೆ ಎಂದು ಫೈಜರ್​ ಮತ್ತು ಬಯೋಎನ್​ಟೆಕ್​ ಸಂಸ್ಥೆಗಳು ಆರೋಪ ಮಾಡಿವೆ. ಯುರೋಪ್​ ದೇಶದ ಔಷಧೀಯ ಸಂಸ್ಥೆಯು (EMA) ತನ್ನ ಮೇಲೆ ಸೈಬರ್​ ಅಟ್ಯಾಕ್​ ಆಗಿದೆಯೆಂದು ಹೇಳಿದ ಬೆನ್ನಲ್ಲೇ ಈ ಮಾಹಿತಿ ಹೊರಬಿದ್ದಿದೆ.

ಕೊರೊನಾ ಲಸಿಕೆಗೆ ಸಂಬಂಧಿಸಿದ ಡೇಟಾ ಕಾನೂನು ಬಾಹಿರವಾಗಿ ಹ್ಯಾಕರ್​ಗಳ ಕೈ ಸೇರಿದೆ ಎಂದು ಫೈಜರ್ ಮತ್ತು ಬಯೋಎನ್​ಟೆಕ್ ಸಂಸ್ಥೆಗಳು ಹೇಳಿಕೊಂಡಿವೆ. ಡೇಟಾ ಸೋರಿಕೆಯಾಗುತ್ತಿರುವ ಕುರಿತು ನಮಗೆ ಯಾವುದೇ ಮಾಹಿತಿ ತಿಳಿದಿರಲಿಲ್ಲ. ಡೇಟಾ ಯಾರ ಕೈ ಸೇರಿದೆ ಎಂಬುದೂ ತಿಳಿಯುತ್ತಿಲ್ಲವೆಂದು ಆತಂಕ ವ್ಯಕ್ತಪಡಿಸಿವೆ.

ಈ ಕುರಿತು ಪ್ರತಿಕ್ರಿಯಿಸಿರುವ EMA ಹ್ಯಾಕರ್​ಗಳನ್ನು ಪತ್ತೆ ಹಚ್ಚಲು ಕಾನೂನು ತಜ್ಞರ ಸಹಾಯ ಪಡೆದಿದ್ದೇವೆ. ಕೊರೊನಾ ಲಸಿಕೆ ಉತ್ಪಾದಕ ಸಂಸ್ಥೆಗಳಿಗೆ ಯಾವುದೇ ರೀತಿಯ ತೊಂದರೆಯಾಗದು ಎಂದು ಭರವಸೆ ನೀಡಿದೆ. ಈ ವರ್ಷದ ಆರಂಭದಲ್ಲಿ ಬ್ರಿಟನ್​ ದೇಶವು ತನ್ನಲ್ಲಿರುವ ಕೊವಿಡ್​ ಲಸಿಕೆ ಸಂಬಂಧಿತ ವಿಷಯಗಳನ್ನು ರಷ್ಯಾದ ಹ್ಯಾಕರ್ಸ್​ ಅಕ್ರಮವಾಗಿ ಸಂಗ್ರಹಿಸುತ್ತಿದ್ದಾರೆ ಎಂದು ಆರೋಪಿಸಿತ್ತು.

ಇಷ್ಟೇ ಅಲ್ಲದೇ.. ಜಾನ್ಸನ್ ಅಂಡ್ ಜಾನ್ಸನ್, ನೋವಾವ್ಯಾಕ್ಸ್, ಆಸ್ಟ್ರಾಜೆನೆಕಾ ಹಾಗೂ ಸೌತ್ ಕೊರಿಯನ್​ ಪ್ರಯೋಗಶಾಲೆಗಳ ಮಾಹಿತಿಯನ್ನು ಕದಿಯಲು ಹ್ಯಾಕರ್ಸ್​ ಯತ್ನಿಸಿದ್ದಾರೆ ಎಂದು ವಾಲ್​ ಸ್ಟ್ರೀಟ್ ಜರ್ನಲ್​ ವರದಿ ಮಾಡಿದೆ.

ಬಡರಾಷ್ಟ್ರಗಳ ಬಡಪಾಯಿಗಳಿಗೆ ಕೊರೊನಾ ಲಸಿಕೆ ಮರೀಚಿಕೆಯಷ್ಟೇ.. ಅಧ್ಯಯನ ಹೇಳಿದ ಕಟು ಸತ್ಯ ಇಲ್ಲಿದೆ

Published On - 7:22 pm, Thu, 10 December 20

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?