AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿಲಿಪೈನ್ಸ್​​ ಸೇನಾ ವಿಮಾನ ಅಪಘಾತ; 17 ಯೋಧರ ಮರಣ, 40 ಮಂದಿಯ ರಕ್ಷಣೆ-ಸಾವಿನ ಸಂಖ್ಯೆ ಏರುವ ಸಾಧ್ಯತೆ

ಪ್ರಾಂತ್ಯದಲ್ಲಿ ಫಿಲಿಪೈನ್ಸ್​ ಸೈನಿಕರು ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ತನ್ನಿಮಿತ್ತ ದಕ್ಷಿಣದಲ್ಲಿರುವ ಕಾಗಾಯನ್ ಡಿ ಓರೋ ನಗರದಿಂದ ಯೋಧರು ಸುಲು ಪ್ರಾಂತ್ಯಕ್ಕೆ ಈ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದರು.

ಫಿಲಿಪೈನ್ಸ್​​ ಸೇನಾ ವಿಮಾನ ಅಪಘಾತ; 17 ಯೋಧರ ಮರಣ, 40 ಮಂದಿಯ ರಕ್ಷಣೆ-ಸಾವಿನ ಸಂಖ್ಯೆ ಏರುವ ಸಾಧ್ಯತೆ
ಮಿಲಿಟರಿ ವಿಮಾನ ಅಪಘಾತಕ್ಕೀಡಾಗಿರುವುದು
TV9 Web
| Edited By: |

Updated on:Jul 04, 2021 | 12:40 PM

Share

ಫಿಲಿಪೈನ್ಸ್​​ ದೇಶದ ಸೇನಾ ವಿಮಾನ (ಏರ್​ಫೋರ್ಸ್​) C-130 ಅಪಘಾತಕ್ಕೀಡಾಗಿದೆ. ಇದರಲ್ಲಿ ಸುಮಾರು 92 ಮಂದಿ ಇದ್ದರು. ಅವರಲ್ಲೀಗ 17 ಸೇನಾ ಸಿಬ್ಬಂದಿ ಸಾವಿಗೀಡಾಗಿದ್ದು, 40 ಮಂದಿಯನ್ನು ರಕ್ಷಿಸಲಾಗಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ಮುಂದುವರಿಯುತ್ತಿದ್ದು, ಮೃತರ ಸಂಖ್ಯೆ ಏರುವ ಸಾಧ್ಯತೆ ಹೆಚ್ಚಾಗಿದೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. 92 ಮಂದಿಯಲ್ಲಿ ಮೂವರು ಪೈಲಟ್​ಗಳು, ಐವರು ವಿಮಾನ ಸಿಬ್ಬಂದಿಯಾಗಿದ್ದರೆ, ಉಳಿದವರೆಲ್ಲ ಸೈನಿಕರೇ ಆಗಿದ್ದರು. ಮೃತಪಟ್ಟ 17 ಮಂದಿ ಕೂಡ ಸೇನಾ ಸಿಬ್ಬಂದಿಯೇ ಆಗಿದ್ದಾರೆ ಎಂದು ಫಿಲಿಪೈನ್ಸ್ ರಕ್ಷಣಾ ಕಾರ್ಯದರ್ಶಿ ಡೆಲ್ಫಿನ್ ಲೊರೆಂಜಾನಾ ತಿಳಿಸಿದ್ದಾರೆ. ಈ ಸೇನಾವಿಮಾನ ಇನ್ನೇನು ಕೆಲವೇ ಕ್ಷಣ ಕಳೆದರೆ ಲ್ಯಾಂಡ್​ ಆಗುತ್ತಿತ್ತು. ಆದರೆ ದಕ್ಷಿಣದಲ್ಲಿರುವ ಸುಲು ಪ್ರಾಂತ್ಯದಲ್ಲಿರುವ ಪರ್ವತಪ್ರದೇಶದಲ್ಲಿರುವ ಪಟಿಕುಲ್​​ನ ಬಾಂಗ್​ಕಲ್​ ಗ್ರಾಮದ ಬಳಿ ಅಪಘಾತಕ್ಕೀಡಾಗಿದೆ. ನೆಲಕ್ಕೆ ಅಪ್ಪಳಿಸಿದ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡು ದೊಡ್ಡ ಅನಾಹುತವೇ ಆಗಿದೆ.

ಮುಸ್ಲಿಂ ಪ್ರಾಬಲ್ಯದ ಸುಲು ಪ್ರಾಂತ್ಯದಲ್ಲಿ ಫಿಲಿಪೈನ್ಸ್​ ಸೈನಿಕರು ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ತನ್ನಿಮಿತ್ತ ದಕ್ಷಿಣದಲ್ಲಿರುವ ಕಾಗಾಯನ್ ಡಿ ಓರೋ ನಗರದಿಂದ ಯೋಧರು ಸುಲು ಪ್ರಾಂತ್ಯಕ್ಕೆ ಈ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದರು. ಈ ವಿಮಾನ ರನ್​ವೇಯಿಂದ ತಪ್ಪಿತು. ಅದನ್ನು ಸರಿಪಡಿಸಿಕೊಳ್ಳಲು ಪ್ರಯತ್ನಿಸಿದರೂ ಸಾಧ್ಯವಾಗದೆ ವಿಫಲವಾಯಿತು ಎಂದು ಮಿಲಿಟರಿ ಮೂಲಗಳು ತಿಳಿಸಿವೆ ಇನ್ನು ವಿಮಾನ ಅಪಘಾತಕ್ಕೀಡಾಗಲು ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ. ಮಧ್ಯ ಫಿಲಿಪೈನ್ಸ್​​ನಲ್ಲಿ ಸಿಕ್ಕಾಪಟೆ ಮಳೆಯಾಗುತ್ತಿದೆ. ಆದರೆ ಸುಲು ಪ್ರಾಂತ್ಯದಲ್ಲೂ ಅದೇ ವಾತಾವರಣ ಇತ್ತಾ? ಕೆಟ್ಟ ಹವಾಮಾನವೇ ವಿಮಾನ ಅಪಘಾತಕ್ಕೆ ಕಾರಣವಾ? ಎಂಬುದಿನ್ನೂ ಸ್ಪಷ್ಟವಾಗಿಲ್ಲ.

ಇದನ್ನೂ ಓದಿ: ಲಾಕ್​ಡೌನ್​ ಮುಂದುವರಿಯುತ್ತಿದ್ದರೆ ಮಾನವರು ಹೇಗೆ ಕಾಣಿಸಬಹುದು? ವೈರಲ್​ ಆಯ್ತು ಯುವತಿಯ ಫೋಟೋ

Philippine military plane crashes 17 Personnal Died 40 people rescued

Published On - 12:39 pm, Sun, 4 July 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ