AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನದ ಟಾಯ್ಲೆಟ್​ನಲ್ಲಿ ಕುಸಿದು ಬಿದ್ದು ಪೈಲಟ್ ಸಾವು, ವಿಮಾನ ತುರ್ತು ಭೂಸ್ಪರ್ಶ

ಮಿಯಾಮಿಯಿಂದ ಚಿಲಿಗೆ ಹೊರಟಿದ್ದ ವಿಮಾನದ ಟಾಯ್ಲೆಟ್​ನಲ್ಲಿ ಪೈಲಟ್​ ಮೃತಪಟ್ಟಿದ್ದು ತಕ್ಷಣವೇ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಯಿತು. 271 ಪ್ರಯಾಣಿಕರೊಂದಿಗೆ ಮಿಯಾಮಿಯಿಂದ ಚಿಲಿಗೆ ಹೊರಟಿದ್ದ ವಾಣಿಜ್ಯ ವಿಮಾನದ ಬಾತ್​ರೂಮಿನಲ್ಲಿ ಕುಸಿದುಬಿದ್ದು ಪೈಲಟ್ ಸಾವನ್ನಪ್ಪಿದ್ದಾರೆ.

ವಿಮಾನದ ಟಾಯ್ಲೆಟ್​ನಲ್ಲಿ ಕುಸಿದು ಬಿದ್ದು ಪೈಲಟ್ ಸಾವು, ವಿಮಾನ ತುರ್ತು ಭೂಸ್ಪರ್ಶ
ಪೈಲಟ್ ಇವಾನ್Image Credit source: NDTV
ನಯನಾ ರಾಜೀವ್
|

Updated on: Aug 17, 2023 | 11:42 AM

Share

ಮಿಯಾಮಿಯಿಂದ ಚಿಲಿಗೆ ಹೊರಟಿದ್ದ ವಿಮಾನ(Flight)ದ ಟಾಯ್ಲೆಟ್​ನಲ್ಲಿ ಪೈಲಟ್​ ಮೃತಪಟ್ಟಿದ್ದು ತಕ್ಷಣವೇ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಯಿತು. 271 ಪ್ರಯಾಣಿಕರೊಂದಿಗೆ ಮಿಯಾಮಿಯಿಂದ ಚಿಲಿಗೆ ಹೊರಟಿದ್ದ ವಾಣಿಜ್ಯ ವಿಮಾನದ ಬಾತ್​ರೂಮಿನಲ್ಲಿ ಕುಸಿದುಬಿದ್ದು ಪೈಲಟ್ ಸಾವನ್ನಪ್ಪಿದ್ದಾರೆ.

ತಕ್ಷಣವೇ ವಿಮಾನವನ್ನು ಪನಾಮದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು, LATAM ಏರ್​ಲೈನ್ಸ್​ ವಿಮಾನ ಟೇಕ್ ಆಫ್ ಆದ ಮೂರು ಗಂಟೆಗಳ ನಂತರ ಸಾವನ್ನಪ್ಪಿದ್ದಾರೆ, ತಕ್ಷಣವೇ ಸಿಬ್ಬಂದಿ ತಿರ್ತು ಚಿಕಿತ್ಸೆ ನೀಡಿದರೂ ಅವರನ್ನು ಬದುಕಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ವಿಮಾನವು ಪನಾಮ ಸಿಟಿಯ ಟೊಕುಮೆನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದಾಗ, ವೈದ್ಯಕೀಯ ತಜ್ಞರು ಪೈಲಟ್ ಅನ್ನು ಪರೀಕ್ಷಿಸಲು ಧಾವಿಸಿದರು, ಆದರೆ ಅಷ್ಟೊರೊಳಗೆ ಅವರು ಮೃತಪಟ್ಟಿದ್ದರು.ಇವಾನ್ ಅವರು 25 ವರ್ಷಗಳ ಅನುಭವ ಹೊಂದಿರುವ ಅನುಭವಿ ಪೈಲಟ್ ಆಗಿದ್ದರು. ವಿಮಾನವು ಮಂಗಳವಾರ ಪನಾಮ ನಗರದಿಂದ ಹೊರಟು ಚಿಲಿಯ ಕಡೆಗೆ ತನ್ನ ಪ್ರಯಾಣವನ್ನು ಮುಂದುವರೆಸಿತು.

ಮತ್ತಷ್ಟು ಓದಿ: Air India: ದೆಹಲಿಯಿಂದ ಅಮೆರಿಕಕ್ಕೆ ಹೊರಟಿದ್ದ ಏರ್​ ಇಂಡಿಯಾ ವಿಮಾನ ಸ್ವೀಡನ್​ನಲ್ಲಿ ತುರ್ತು ಭೂಸ್ಪರ್ಶ

ಇವಾನ್ಅಂದೌರ್​ಗೆ 56 ವರ್ಷ, ಅವರ 25 ವರ್ಷಗಳ ಸೇವೆ, ಸಮರ್ಪಣೆ, ಅಮೂಲ್ಯ ಕೊಡುಗೆಗಾಗಿ ನಾವು ಕೃತಜ್ಞರಾಗಿದ್ದೇವೆ, ಹಾರಾಟದ ಸಮಯದಲ್ಲಿ ಪೈಲಟ್ ಜೀವ ಉಳಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಯಿತು ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ