AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೈಲಟ್ ಸಾವು, ಟರ್ಕಿಶ್​ ಏರ್​ಲೈನ್ಸ್​ ನ್ಯೂಯಾರ್ಕ್​ನಲ್ಲಿ ತುರ್ತು ಭೂಸ್ಪರ್ಶ

ಪೈಲಟ್​ ಸಾವನ್ನಪ್ಪಿದ ಹಿನ್ನೆಲೆಯಲ್ಲಿಸಿಯಾಟಲ್​ನಿಂದ ಇಸ್ತಾನ್​ಬುಲ್​ಗೆ ಹೊರಟಿದ್ದ ಟರ್ಕಿಶ್​ ಏರ್​ಲೈನ್ಸ್​ ವಿಮಾನವು ನ್ಯೂಯಾರ್ಕ್​ನಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ಏಕಾಏಕಿ ಕ್ಯಾಪ್ಟನ್ ಕುಸಿದುಬಿದ್ದಿದ್ದರು ಎಂದು ವಿಮಾನಯಾನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೈಲಟ್ ಸಾವು, ಟರ್ಕಿಶ್​ ಏರ್​ಲೈನ್ಸ್​ ನ್ಯೂಯಾರ್ಕ್​ನಲ್ಲಿ ತುರ್ತು ಭೂಸ್ಪರ್ಶ
ಟರ್ಕಿಶ್ ವಿಮಾನImage Credit source: USA Today
ನಯನಾ ರಾಜೀವ್
|

Updated on: Oct 10, 2024 | 9:47 AM

Share

ಪೈಲಟ್​ ಸಾವನ್ನಪ್ಪಿದ ಹಿನ್ನೆಲೆಯಲ್ಲಿಸಿಯಾಟಲ್​ನಿಂದ ಇಸ್ತಾನ್​ಬುಲ್​ಗೆ ಹೊರಟಿದ್ದ ಟರ್ಕಿಶ್​ ಏರ್​ಲೈನ್ಸ್​ ವಿಮಾನವು ನ್ಯೂಯಾರ್ಕ್​ನಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ಏಕಾಏಕಿ ಕ್ಯಾಪ್ಟನ್ ಕುಸಿದುಬಿದ್ದಿದ್ದರು ಎಂದು ವಿಮಾನಯಾನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಂಗಳವಾರ ರಾತ್ರಿ ಸಿಯಾಟಲ್‌ನಿಂದ 204 ಫ್ಲೈಟ್ ಟೇಕ್ ಆಫ್ ಆದ ನಂತರ ಪೈಲಟ್ ಇಲ್ಸೆಹಿನ್ ಪೆಹ್ಲಿವಾನ್, ಪ್ರಜ್ಞೆ ಕಳೆದುಕೊಂಡರು. ಟರ್ಕಿಶ್ ಏರ್ಲೈನ್ಸ್ ವಕ್ತಾರ ಯಾಹ್ಯಾ ಉಸ್ತುನ್ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ತಕ್ಷಣವೇ ಚಿಕಿತ್ಸೆ ಸಿಕ್ಕರೂ, ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ, ನಂತರ ಮತ್ತೋರ್ವ ಪೈಲಟ್ ಮತ್ತು ಸಹ-ಪೈಲಟ್ ನಿಯಂತ್ರಣವಹಿಸಿಕೊಂಡು ನ್ಯೂಯಾರ್ಕ್​ನಲ್ಲಿ ವಿಮಾನ ಕೆಳಗಿಳಿಸಿದರು.

ಮತ್ತಷ್ಟು ಓದಿ: ಬಾಂಬ್​ ಬೆದರಿಕೆ: ಹೈದರಾಬಾದ್​ಗೆ ತೆರಳುತ್ತಿದ್ದ ಇಂಡಿಗೋ ವಿಮಾನ ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ

ಬುಧವಾರ ಬೆಳಗ್ಗೆ 6 ಗಂಟೆಯ ಮೊದಲು ವಿಮಾನವು ನ್ಯೂಯಾರ್ಕ್‌ನ ಜಾನ್ ಎಫ್ ಕೆನಡಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಿತು. ವಿಮಾನವು ಸಿಯಾಟಲ್‌ನಿಂದ ಹೊರಟ ಎಂಟು ಗಂಟೆಗಳ ನಂತರ ನ್ಯೂಯಾರ್ಕ್‌ನಲ್ಲಿ ಇಳಿಯಿತು. ಪೆಹ್ಲಿವಾನ್ ಅವರು 2007 ರಿಂದ ಟರ್ಕಿಶ್ ಏರ್‌ಲೈನ್ಸ್‌ನಲ್ಲಿ ಮಾಡುತ್ತಿದ್ದಾರೆ.

ಪ್ರಯಾಣಿಕರು ನ್ಯೂಯಾರ್ಕ್‌ನಿಂದ ತಮ್ಮ ಸ್ಥಳಗಳಿಗೆ ತಲುಪಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಏರ್‌ಲೈನ್ ವಕ್ತಾರರು ತಿಳಿಸಿದ್ದಾರೆ.

ಪೈಲಟ್ ಸಾವಿಗೆ ಕಾರಣ ತಿಳಿದುಬಂದಿಲ್ಲ. ಸಾಮಾನ್ಯವಾಗಿ, ಪೈಲಟ್‌ಗಳು ಪ್ರತಿ 12 ತಿಂಗಳಿಗೊಮ್ಮೆ ವೈದ್ಯಕೀಯ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ, ಆದರೆ 40 ವರ್ಷಕ್ಕಿಂತ ಮೇಲ್ಪಟ್ಟವರು ಪ್ರತಿ ಆರು ತಿಂಗಳ ನಂತರ ತಮ್ಮ ವೈದ್ಯಕೀಯ ಪ್ರಮಾಣಪತ್ರವನ್ನು ನವೀಕರಿಸಬೇಕು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್