ಪೈಲಟ್ ಸಾವು, ಟರ್ಕಿಶ್​ ಏರ್​ಲೈನ್ಸ್​ ನ್ಯೂಯಾರ್ಕ್​ನಲ್ಲಿ ತುರ್ತು ಭೂಸ್ಪರ್ಶ

ಪೈಲಟ್​ ಸಾವನ್ನಪ್ಪಿದ ಹಿನ್ನೆಲೆಯಲ್ಲಿಸಿಯಾಟಲ್​ನಿಂದ ಇಸ್ತಾನ್​ಬುಲ್​ಗೆ ಹೊರಟಿದ್ದ ಟರ್ಕಿಶ್​ ಏರ್​ಲೈನ್ಸ್​ ವಿಮಾನವು ನ್ಯೂಯಾರ್ಕ್​ನಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ಏಕಾಏಕಿ ಕ್ಯಾಪ್ಟನ್ ಕುಸಿದುಬಿದ್ದಿದ್ದರು ಎಂದು ವಿಮಾನಯಾನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೈಲಟ್ ಸಾವು, ಟರ್ಕಿಶ್​ ಏರ್​ಲೈನ್ಸ್​ ನ್ಯೂಯಾರ್ಕ್​ನಲ್ಲಿ ತುರ್ತು ಭೂಸ್ಪರ್ಶ
ಟರ್ಕಿಶ್ ವಿಮಾನImage Credit source: USA Today
Follow us
|

Updated on: Oct 10, 2024 | 9:47 AM

ಪೈಲಟ್​ ಸಾವನ್ನಪ್ಪಿದ ಹಿನ್ನೆಲೆಯಲ್ಲಿಸಿಯಾಟಲ್​ನಿಂದ ಇಸ್ತಾನ್​ಬುಲ್​ಗೆ ಹೊರಟಿದ್ದ ಟರ್ಕಿಶ್​ ಏರ್​ಲೈನ್ಸ್​ ವಿಮಾನವು ನ್ಯೂಯಾರ್ಕ್​ನಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ಏಕಾಏಕಿ ಕ್ಯಾಪ್ಟನ್ ಕುಸಿದುಬಿದ್ದಿದ್ದರು ಎಂದು ವಿಮಾನಯಾನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಂಗಳವಾರ ರಾತ್ರಿ ಸಿಯಾಟಲ್‌ನಿಂದ 204 ಫ್ಲೈಟ್ ಟೇಕ್ ಆಫ್ ಆದ ನಂತರ ಪೈಲಟ್ ಇಲ್ಸೆಹಿನ್ ಪೆಹ್ಲಿವಾನ್, ಪ್ರಜ್ಞೆ ಕಳೆದುಕೊಂಡರು. ಟರ್ಕಿಶ್ ಏರ್ಲೈನ್ಸ್ ವಕ್ತಾರ ಯಾಹ್ಯಾ ಉಸ್ತುನ್ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ತಕ್ಷಣವೇ ಚಿಕಿತ್ಸೆ ಸಿಕ್ಕರೂ, ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ, ನಂತರ ಮತ್ತೋರ್ವ ಪೈಲಟ್ ಮತ್ತು ಸಹ-ಪೈಲಟ್ ನಿಯಂತ್ರಣವಹಿಸಿಕೊಂಡು ನ್ಯೂಯಾರ್ಕ್​ನಲ್ಲಿ ವಿಮಾನ ಕೆಳಗಿಳಿಸಿದರು.

ಮತ್ತಷ್ಟು ಓದಿ: ಬಾಂಬ್​ ಬೆದರಿಕೆ: ಹೈದರಾಬಾದ್​ಗೆ ತೆರಳುತ್ತಿದ್ದ ಇಂಡಿಗೋ ವಿಮಾನ ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ

ಬುಧವಾರ ಬೆಳಗ್ಗೆ 6 ಗಂಟೆಯ ಮೊದಲು ವಿಮಾನವು ನ್ಯೂಯಾರ್ಕ್‌ನ ಜಾನ್ ಎಫ್ ಕೆನಡಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಿತು. ವಿಮಾನವು ಸಿಯಾಟಲ್‌ನಿಂದ ಹೊರಟ ಎಂಟು ಗಂಟೆಗಳ ನಂತರ ನ್ಯೂಯಾರ್ಕ್‌ನಲ್ಲಿ ಇಳಿಯಿತು. ಪೆಹ್ಲಿವಾನ್ ಅವರು 2007 ರಿಂದ ಟರ್ಕಿಶ್ ಏರ್‌ಲೈನ್ಸ್‌ನಲ್ಲಿ ಮಾಡುತ್ತಿದ್ದಾರೆ.

ಪ್ರಯಾಣಿಕರು ನ್ಯೂಯಾರ್ಕ್‌ನಿಂದ ತಮ್ಮ ಸ್ಥಳಗಳಿಗೆ ತಲುಪಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಏರ್‌ಲೈನ್ ವಕ್ತಾರರು ತಿಳಿಸಿದ್ದಾರೆ.

ಪೈಲಟ್ ಸಾವಿಗೆ ಕಾರಣ ತಿಳಿದುಬಂದಿಲ್ಲ. ಸಾಮಾನ್ಯವಾಗಿ, ಪೈಲಟ್‌ಗಳು ಪ್ರತಿ 12 ತಿಂಗಳಿಗೊಮ್ಮೆ ವೈದ್ಯಕೀಯ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ, ಆದರೆ 40 ವರ್ಷಕ್ಕಿಂತ ಮೇಲ್ಪಟ್ಟವರು ಪ್ರತಿ ಆರು ತಿಂಗಳ ನಂತರ ತಮ್ಮ ವೈದ್ಯಕೀಯ ಪ್ರಮಾಣಪತ್ರವನ್ನು ನವೀಕರಿಸಬೇಕು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನರಕದವರನ್ನು ಒಲಿಸಲು ತಪ್ಪು ನಿರ್ಧಾರ ತೆಗೆದುಕೊಂಡ್ರಾ ಹಂಸಾ?
ನರಕದವರನ್ನು ಒಲಿಸಲು ತಪ್ಪು ನಿರ್ಧಾರ ತೆಗೆದುಕೊಂಡ್ರಾ ಹಂಸಾ?
Navaratri 2024: ನವರಾತ್ರಿ 8ನೇ ದಿನ ಪೂಜಿಸಲಾಗುವ ಮಹಾಗೌರಿ ಮಹತ್ವವೇನು?
Navaratri 2024: ನವರಾತ್ರಿ 8ನೇ ದಿನ ಪೂಜಿಸಲಾಗುವ ಮಹಾಗೌರಿ ಮಹತ್ವವೇನು?
ಈ ರಾಶಿಯವರಿಗೆ ಮರೆವಿನ ಕಾರಣಕ್ಕೆ ಉದ್ಯೋಗದಲ್ಲಿ ಹಿನ್ನಡೆಯೆನಿಸುವುದು
ಈ ರಾಶಿಯವರಿಗೆ ಮರೆವಿನ ಕಾರಣಕ್ಕೆ ಉದ್ಯೋಗದಲ್ಲಿ ಹಿನ್ನಡೆಯೆನಿಸುವುದು
ಬಾಂಗ್ಲಾ ಬೌಲರ್​ಗಳ ಬೆಂಡೆತ್ತಿದ ಭಾರತೀಯರು: ಇಲ್ಲಿದೆ ನೋಡಿ ಹೈಲೈಟ್ಸ್
ಬಾಂಗ್ಲಾ ಬೌಲರ್​ಗಳ ಬೆಂಡೆತ್ತಿದ ಭಾರತೀಯರು: ಇಲ್ಲಿದೆ ನೋಡಿ ಹೈಲೈಟ್ಸ್
ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ
ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ
ಟೋಲ್​ನಲ್ಲಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾ ಸಿಬ್ಬಂದಿಯ ಹತ್ಯೆ
ಟೋಲ್​ನಲ್ಲಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾ ಸಿಬ್ಬಂದಿಯ ಹತ್ಯೆ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ
ಕೊಲ್ಕತ್ತಾದಲ್ಲಿ ಜನರ ಮನಸೆಳೆಯುತ್ತಿದೆ ಮಳೆಹನಿ ಥೀಮ್​ನ ದುರ್ಗಾ ಪೆಂಡಾಲ್
ಕೊಲ್ಕತ್ತಾದಲ್ಲಿ ಜನರ ಮನಸೆಳೆಯುತ್ತಿದೆ ಮಳೆಹನಿ ಥೀಮ್​ನ ದುರ್ಗಾ ಪೆಂಡಾಲ್
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?