Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೈಲಟ್ ಸಾವು, ಟರ್ಕಿಶ್​ ಏರ್​ಲೈನ್ಸ್​ ನ್ಯೂಯಾರ್ಕ್​ನಲ್ಲಿ ತುರ್ತು ಭೂಸ್ಪರ್ಶ

ಪೈಲಟ್​ ಸಾವನ್ನಪ್ಪಿದ ಹಿನ್ನೆಲೆಯಲ್ಲಿಸಿಯಾಟಲ್​ನಿಂದ ಇಸ್ತಾನ್​ಬುಲ್​ಗೆ ಹೊರಟಿದ್ದ ಟರ್ಕಿಶ್​ ಏರ್​ಲೈನ್ಸ್​ ವಿಮಾನವು ನ್ಯೂಯಾರ್ಕ್​ನಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ಏಕಾಏಕಿ ಕ್ಯಾಪ್ಟನ್ ಕುಸಿದುಬಿದ್ದಿದ್ದರು ಎಂದು ವಿಮಾನಯಾನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೈಲಟ್ ಸಾವು, ಟರ್ಕಿಶ್​ ಏರ್​ಲೈನ್ಸ್​ ನ್ಯೂಯಾರ್ಕ್​ನಲ್ಲಿ ತುರ್ತು ಭೂಸ್ಪರ್ಶ
ಟರ್ಕಿಶ್ ವಿಮಾನImage Credit source: USA Today
Follow us
ನಯನಾ ರಾಜೀವ್
|

Updated on: Oct 10, 2024 | 9:47 AM

ಪೈಲಟ್​ ಸಾವನ್ನಪ್ಪಿದ ಹಿನ್ನೆಲೆಯಲ್ಲಿಸಿಯಾಟಲ್​ನಿಂದ ಇಸ್ತಾನ್​ಬುಲ್​ಗೆ ಹೊರಟಿದ್ದ ಟರ್ಕಿಶ್​ ಏರ್​ಲೈನ್ಸ್​ ವಿಮಾನವು ನ್ಯೂಯಾರ್ಕ್​ನಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ಏಕಾಏಕಿ ಕ್ಯಾಪ್ಟನ್ ಕುಸಿದುಬಿದ್ದಿದ್ದರು ಎಂದು ವಿಮಾನಯಾನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಂಗಳವಾರ ರಾತ್ರಿ ಸಿಯಾಟಲ್‌ನಿಂದ 204 ಫ್ಲೈಟ್ ಟೇಕ್ ಆಫ್ ಆದ ನಂತರ ಪೈಲಟ್ ಇಲ್ಸೆಹಿನ್ ಪೆಹ್ಲಿವಾನ್, ಪ್ರಜ್ಞೆ ಕಳೆದುಕೊಂಡರು. ಟರ್ಕಿಶ್ ಏರ್ಲೈನ್ಸ್ ವಕ್ತಾರ ಯಾಹ್ಯಾ ಉಸ್ತುನ್ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ತಕ್ಷಣವೇ ಚಿಕಿತ್ಸೆ ಸಿಕ್ಕರೂ, ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ, ನಂತರ ಮತ್ತೋರ್ವ ಪೈಲಟ್ ಮತ್ತು ಸಹ-ಪೈಲಟ್ ನಿಯಂತ್ರಣವಹಿಸಿಕೊಂಡು ನ್ಯೂಯಾರ್ಕ್​ನಲ್ಲಿ ವಿಮಾನ ಕೆಳಗಿಳಿಸಿದರು.

ಮತ್ತಷ್ಟು ಓದಿ: ಬಾಂಬ್​ ಬೆದರಿಕೆ: ಹೈದರಾಬಾದ್​ಗೆ ತೆರಳುತ್ತಿದ್ದ ಇಂಡಿಗೋ ವಿಮಾನ ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ

ಬುಧವಾರ ಬೆಳಗ್ಗೆ 6 ಗಂಟೆಯ ಮೊದಲು ವಿಮಾನವು ನ್ಯೂಯಾರ್ಕ್‌ನ ಜಾನ್ ಎಫ್ ಕೆನಡಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಿತು. ವಿಮಾನವು ಸಿಯಾಟಲ್‌ನಿಂದ ಹೊರಟ ಎಂಟು ಗಂಟೆಗಳ ನಂತರ ನ್ಯೂಯಾರ್ಕ್‌ನಲ್ಲಿ ಇಳಿಯಿತು. ಪೆಹ್ಲಿವಾನ್ ಅವರು 2007 ರಿಂದ ಟರ್ಕಿಶ್ ಏರ್‌ಲೈನ್ಸ್‌ನಲ್ಲಿ ಮಾಡುತ್ತಿದ್ದಾರೆ.

ಪ್ರಯಾಣಿಕರು ನ್ಯೂಯಾರ್ಕ್‌ನಿಂದ ತಮ್ಮ ಸ್ಥಳಗಳಿಗೆ ತಲುಪಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಏರ್‌ಲೈನ್ ವಕ್ತಾರರು ತಿಳಿಸಿದ್ದಾರೆ.

ಪೈಲಟ್ ಸಾವಿಗೆ ಕಾರಣ ತಿಳಿದುಬಂದಿಲ್ಲ. ಸಾಮಾನ್ಯವಾಗಿ, ಪೈಲಟ್‌ಗಳು ಪ್ರತಿ 12 ತಿಂಗಳಿಗೊಮ್ಮೆ ವೈದ್ಯಕೀಯ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ, ಆದರೆ 40 ವರ್ಷಕ್ಕಿಂತ ಮೇಲ್ಪಟ್ಟವರು ಪ್ರತಿ ಆರು ತಿಂಗಳ ನಂತರ ತಮ್ಮ ವೈದ್ಯಕೀಯ ಪ್ರಮಾಣಪತ್ರವನ್ನು ನವೀಕರಿಸಬೇಕು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ