AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

12 ಪ್ರಯಾಣಿಕರಿದ್ದ ಭಾರತದ ವಿಮಾನ ಪಾಕಿಸ್ತಾನದ ಕರಾಚಿ ಏರ್​ಪೋರ್ಟ್​​ನಲ್ಲಿ ಲ್ಯಾಂಡಿಂಗ್

ಭಾರತದ ವಿಮಾನ ಕರಾಚಿಯಲ್ಲಿ ಇಳಿದ ಸ್ವಲ್ಪ ಸಮಯದ ನಂತರ 12 ಪ್ರಯಾಣಿಕರೊಂದಿಗೆ ಮತ್ತೆ ಹಾರಾಟ ನಡೆಸಿತು. ಕರಾಚಿ ವಿಮಾನ ನಿಲ್ದಾಣದಲ್ಲಿ ಆ ವಿಶೇಷ ವಿಮಾನ ಏಕೆ ಇಳಿದಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

12 ಪ್ರಯಾಣಿಕರಿದ್ದ ಭಾರತದ ವಿಮಾನ ಪಾಕಿಸ್ತಾನದ ಕರಾಚಿ ಏರ್​ಪೋರ್ಟ್​​ನಲ್ಲಿ ಲ್ಯಾಂಡಿಂಗ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 16, 2022 | 10:18 AM

Share

ಕರಾಚಿ: 12 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಭಾರತದ ವಿಮಾನ ಸೋಮವಾರ ಪಾಕಿಸ್ತಾನದ ಕರಾಚಿಯಲ್ಲಿರುವ (Karachi Airport) ಜಿನ್ನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ. ಈ ವಿಶೇಷ ವಿಮಾನವು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಮಧ್ಯಾಹ್ನ 12.10ಕ್ಕೆ (ಪಾಕಿಸ್ತಾನದ ಸಮಯ) ಕರಾಚಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು ಎಂದು ಮೂಲಗಳು ತಿಳಿಸಿವೆ.

ಭಾರತದ ನಾಗರಿಕ ವಿಮಾನಯಾನ ಪ್ರಾಧಿಕಾರದ (ಸಿಎಎ) ವಕ್ತಾರರು ಈ ಕುರಿತು ಖಚಿತಪಡಿಸಿದ್ದಾರೆ. ಅಂತಾರಾಷ್ಟ್ರೀಯ ಚಾರ್ಟರ್ ವಿಮಾನವು ಭಾರತದಿಂದ ಪಾಕಿಸ್ತಾನದಲ್ಲಿ ಲ್ಯಾಂಡ್ ಆಗಿದೆ. ಆದರೆ, ಅದನ್ನು ಹೊರತುಪಡಿಸಿ ಪಾಕಿಸ್ತಾನದಿಂದ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: NATO: ನ್ಯಾಟೊ ಜೊತೆಗೆ ಭಾರತದ ಗೌಪ್ಯ ಮಾತುಕತೆ; ಚೀನಾ, ಪಾಕಿಸ್ತಾನ ಉಪಟಳದ ಹಿನ್ನೆಲೆಯಲ್ಲಿ ಮಹತ್ವ ಪಡೆದ ವಿದ್ಯಮಾನ

ಭಾರತದ ವಿಮಾನ ಕರಾಚಿಯಲ್ಲಿ ಇಳಿದ ಸ್ವಲ್ಪ ಸಮಯದ ನಂತರ 12 ಪ್ರಯಾಣಿಕರೊಂದಿಗೆ ಮತ್ತೆ ಹಾರಾಟ ನಡೆಸಿತು. ಕರಾಚಿ ವಿಮಾನ ನಿಲ್ದಾಣದಲ್ಲಿ ಆ ವಿಶೇಷ ವಿಮಾನ ಏಕೆ ಇಳಿದಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ತಾಂತ್ರಿಕ ಸಮಸ್ಯೆಗಳಿಂದಾಗಿ ಕಳೆದ ತಿಂಗಳು ಭಾರತದಿಂದ ಹೊರಟ 2 ವಿಮಾನಗಳು ಕರಾಚಿಯಲ್ಲಿ ಲ್ಯಾಂಡ್ ಆಗಿತ್ತು. ಅದರ ಬೆನ್ನಲ್ಲೇ ಈ ಘಟನೆ ನಡೆದಿದೆ. ಸ್ಪೈಸ್‌ಜೆಟ್‌ನ ದೆಹಲಿ-ದುಬೈ ವಿಮಾನದಲ್ಲಿ ಸಮಸ್ಯೆ ಎದುರಾಗಿದ್ದರಿಂದ ಜುಲೈ 5ರಂದು ಕರಾಚಿಯಲ್ಲಿ ಲ್ಯಾಂಡ್ ಮಾಡಲಾಗಿತ್ತು. ಪೈಲಟ್‌ಗಳು ಎಂಜಿನ್‌ನಲ್ಲಿ ದೋಷವನ್ನು ಗಮನಿಸಿದ ನಂತರ ಇಂಡಿಗೋದ ಶಾರ್ಜಾ-ಹೈದರಾಬಾದ್ ವಿಮಾನವನ್ನು ಜುಲೈ 17ರಂದು ಮುನ್ನೆಚ್ಚರಿಕಾ ಕ್ರಮವಾಗಿ ಕರಾಚಿ ಏರ್​​ಪೋರ್ಟ್​ಗೆ ತಿರುಗಿಸಲಾಗಿತ್ತು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ