AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

12 ಪ್ರಯಾಣಿಕರಿದ್ದ ಭಾರತದ ವಿಮಾನ ಪಾಕಿಸ್ತಾನದ ಕರಾಚಿ ಏರ್​ಪೋರ್ಟ್​​ನಲ್ಲಿ ಲ್ಯಾಂಡಿಂಗ್

ಭಾರತದ ವಿಮಾನ ಕರಾಚಿಯಲ್ಲಿ ಇಳಿದ ಸ್ವಲ್ಪ ಸಮಯದ ನಂತರ 12 ಪ್ರಯಾಣಿಕರೊಂದಿಗೆ ಮತ್ತೆ ಹಾರಾಟ ನಡೆಸಿತು. ಕರಾಚಿ ವಿಮಾನ ನಿಲ್ದಾಣದಲ್ಲಿ ಆ ವಿಶೇಷ ವಿಮಾನ ಏಕೆ ಇಳಿದಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

12 ಪ್ರಯಾಣಿಕರಿದ್ದ ಭಾರತದ ವಿಮಾನ ಪಾಕಿಸ್ತಾನದ ಕರಾಚಿ ಏರ್​ಪೋರ್ಟ್​​ನಲ್ಲಿ ಲ್ಯಾಂಡಿಂಗ್
ಸಾಂದರ್ಭಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on: Aug 16, 2022 | 10:18 AM

Share

ಕರಾಚಿ: 12 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಭಾರತದ ವಿಮಾನ ಸೋಮವಾರ ಪಾಕಿಸ್ತಾನದ ಕರಾಚಿಯಲ್ಲಿರುವ (Karachi Airport) ಜಿನ್ನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ. ಈ ವಿಶೇಷ ವಿಮಾನವು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಮಧ್ಯಾಹ್ನ 12.10ಕ್ಕೆ (ಪಾಕಿಸ್ತಾನದ ಸಮಯ) ಕರಾಚಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು ಎಂದು ಮೂಲಗಳು ತಿಳಿಸಿವೆ.

ಭಾರತದ ನಾಗರಿಕ ವಿಮಾನಯಾನ ಪ್ರಾಧಿಕಾರದ (ಸಿಎಎ) ವಕ್ತಾರರು ಈ ಕುರಿತು ಖಚಿತಪಡಿಸಿದ್ದಾರೆ. ಅಂತಾರಾಷ್ಟ್ರೀಯ ಚಾರ್ಟರ್ ವಿಮಾನವು ಭಾರತದಿಂದ ಪಾಕಿಸ್ತಾನದಲ್ಲಿ ಲ್ಯಾಂಡ್ ಆಗಿದೆ. ಆದರೆ, ಅದನ್ನು ಹೊರತುಪಡಿಸಿ ಪಾಕಿಸ್ತಾನದಿಂದ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: NATO: ನ್ಯಾಟೊ ಜೊತೆಗೆ ಭಾರತದ ಗೌಪ್ಯ ಮಾತುಕತೆ; ಚೀನಾ, ಪಾಕಿಸ್ತಾನ ಉಪಟಳದ ಹಿನ್ನೆಲೆಯಲ್ಲಿ ಮಹತ್ವ ಪಡೆದ ವಿದ್ಯಮಾನ

ಭಾರತದ ವಿಮಾನ ಕರಾಚಿಯಲ್ಲಿ ಇಳಿದ ಸ್ವಲ್ಪ ಸಮಯದ ನಂತರ 12 ಪ್ರಯಾಣಿಕರೊಂದಿಗೆ ಮತ್ತೆ ಹಾರಾಟ ನಡೆಸಿತು. ಕರಾಚಿ ವಿಮಾನ ನಿಲ್ದಾಣದಲ್ಲಿ ಆ ವಿಶೇಷ ವಿಮಾನ ಏಕೆ ಇಳಿದಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ತಾಂತ್ರಿಕ ಸಮಸ್ಯೆಗಳಿಂದಾಗಿ ಕಳೆದ ತಿಂಗಳು ಭಾರತದಿಂದ ಹೊರಟ 2 ವಿಮಾನಗಳು ಕರಾಚಿಯಲ್ಲಿ ಲ್ಯಾಂಡ್ ಆಗಿತ್ತು. ಅದರ ಬೆನ್ನಲ್ಲೇ ಈ ಘಟನೆ ನಡೆದಿದೆ. ಸ್ಪೈಸ್‌ಜೆಟ್‌ನ ದೆಹಲಿ-ದುಬೈ ವಿಮಾನದಲ್ಲಿ ಸಮಸ್ಯೆ ಎದುರಾಗಿದ್ದರಿಂದ ಜುಲೈ 5ರಂದು ಕರಾಚಿಯಲ್ಲಿ ಲ್ಯಾಂಡ್ ಮಾಡಲಾಗಿತ್ತು. ಪೈಲಟ್‌ಗಳು ಎಂಜಿನ್‌ನಲ್ಲಿ ದೋಷವನ್ನು ಗಮನಿಸಿದ ನಂತರ ಇಂಡಿಗೋದ ಶಾರ್ಜಾ-ಹೈದರಾಬಾದ್ ವಿಮಾನವನ್ನು ಜುಲೈ 17ರಂದು ಮುನ್ನೆಚ್ಚರಿಕಾ ಕ್ರಮವಾಗಿ ಕರಾಚಿ ಏರ್​​ಪೋರ್ಟ್​ಗೆ ತಿರುಗಿಸಲಾಗಿತ್ತು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್