AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೂಸ್ಟನ್ ಏರ್​ಪೋರ್ಟ್​ನಲ್ಲಿ ಟೇಕಾಫ್ ವೇಳೆ ವಿಮಾನ ಸ್ಫೋಟ; 21 ಪ್ರಯಾಣಿಕರು ಪಾರು

ಹೂಸ್ಟನ್ ಏರ್​ಪೋರ್ಟ್​ನಿಂದ 18 ಪ್ರಯಾಣಿಕರನ್ನು ಹೊತ್ತು ಟೇಕಾಫ್ ಆಗುತ್ತಿದ್ದಂತೆ ಖಾಸಗಿ ವಿಮಾನ ಸ್ಫೋಟಗೊಂಡಿದೆ. ಬೆಂಕಿ ಹೊತ್ತಿಕೊಂಡ ವಿಮಾನದಲ್ಲಿದ್ದ 18 ಪ್ರಯಾಣಿಕರು ಹಾಗೂ ಮೂವರು ಸಿಬ್ಬಂದಿಯನ್ನು ರಕ್ಷಿಸಲಾಗಿದೆ.

ಹೂಸ್ಟನ್ ಏರ್​ಪೋರ್ಟ್​ನಲ್ಲಿ ಟೇಕಾಫ್ ವೇಳೆ ವಿಮಾನ ಸ್ಫೋಟ; 21 ಪ್ರಯಾಣಿಕರು ಪಾರು
ಹೂಸ್ಟನ್​ನಲ್ಲಿ ವಿಮಾನ ಸ್ಫೋಟ
TV9 Web
| Edited By: |

Updated on: Oct 20, 2021 | 1:30 PM

Share

ಹೂಸ್ಟನ್: ಅಮೆರಿಕದ ಹೂಸ್ಟನ್ ವಿಮಾನ ನಿಲ್ದಾಣದಲ್ಲಿ (Houston airport) ನಿನ್ನೆ ವಿಮಾನ ಸ್ಫೋಟಗೊಂಡಿದ್ದು, ಅದೃಷ್ಟವಶಾತ್ ವಿಮಾನದಲ್ಲಿದ್ದ ಪೈಲಟ್ ಸೇರಿ 21 ಪ್ರಯಾಣಿಕರು ಕೂಡ ಬಚಾವಾಗಿದ್ದಾರೆ. ಏರ್​ಪೋರ್ಟ್​ನಿಂದ 18 ಪ್ರಯಾಣಿಕರನ್ನು ಹೊತ್ತು ಟೇಕಾಫ್ ಆಗುತ್ತಿದ್ದಂತೆ ಖಾಸಗಿ ವಿಮಾನ ಗೋಡೆಗೆ ಅಪ್ಪಳಿಸಿದೆ. ಇದರಿಂದ ವಿಮಾನ ಸ್ಫೋಟಗೊಂಡಿದೆ. ಬೆಂಕಿ ಹೊತ್ತಿಕೊಂಡ ವಿಮಾನದಲ್ಲಿದ್ದ 18 ಪ್ರಯಾಣಿಕರು ಹಾಗೂ ಮೂವರು ಸಿಬ್ಬಂದಿಯನ್ನು ರಕ್ಷಿಸಲಾಗಿದೆ.

ಹೀಗಾಗಿ, ಕೂದಲೆಳೆ ಅಂತರದಲ್ಲಿ ಭಾರೀ ಅಪಾಯವೊಂದು ತಪ್ಪಿದೆ. ಏರ್​ಪೋರ್ಟ್ ಸಿಬ್ಬಂದಿ ವಿಮಾನ ಪತನವಾಗಿದ್ದನ್ನು ಗಮನಿಸಿ ತಕ್ಷಣ ರಕ್ಷಣಾ ಕಾರ್ಯಾಚರಣೆ ನಡೆಸಿದ್ದರಿಂದ ಎಲ್ಲ ಪ್ರಯಾಣಿಕರನ್ನು ರಕ್ಷಿಸಲು ಸಾಧ್ಯವಾಯಿತು. ಇಲ್ಲಿದ್ದರೆ ವಿಮಾನದಲ್ಲಿದ್ದ 21 ಜನರೂ ಸುಟ್ಟು ಕರಕಲಾಗುವ ಅಪಾಯವಿತ್ತು. ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅಮೆರಿಕದ ವಾಯುಯಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಮೆಕ್​ಡೊನ್ನೆಲ್ ಡೌಗ್ಲಸ್ ಎಂಡಿ018 ಎಂಬ ಖಾಸಗಿ ಜೆಟ್ ಹೂಸ್ಟನ್ ಎಕ್ಸಿಕ್ಯೂಟಿವ್ ವಿಮಾನ ನಿಲ್ದಾಣದಿಂದ ಟೇಕಾಫ್ ಆಗುವಾಗ ಈ ದುರಂತ ಸಂಭವಿಸಿದೆ. ಟೇಕಾಫ್ ಆಗಲು ಪ್ರಯತ್ನಿಸುತ್ತಿದ್ದಂತೆ ವಿಮಾನ ಪತನಗೊಂಡಿದ್ದು, ಬೆಂಕಿ ಹೊತ್ತಿಕೊಂಡಿದೆ. ವಿಮಾನದಲ್ಲಿದ್ದ ಪ್ರಯಾಣಿಕರು ಮೇಜರ್ ಲೀಗ್ ಬೇಸ್‌ಬಾಲ್‌ನ ಅಮೆರಿಕನ್ ಲೀಗ್ ಚಾಂಪಿಯನ್‌ಶಿಪ್ ಸರಣಿಯ ಗೇಮ್ 4ರಲ್ಲಿ ಹೂಸ್ಟನ್ ಆಸ್ಟ್ರೋಸ್ ರೆಡ್ ಸಾಕ್ಸ್ ಆಡುವುದನ್ನು ನೋಡಲು ಬೋಸ್ಟನ್‌ಗೆ ತೆರಳುತ್ತಿದ್ದರು.

ಇದನ್ನೂ ಓದಿ: ವಿದೇಶಗಳಿಂದ ಬಂದವರಿಗೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಆರ್​ಟಿಪಿಸಿಆರ್​ ಪರೀಕ್ಷೆ ಅಗತ್ಯವಿಲ್ಲ

Modi Kushinagar Airport ಉತ್ತರ ಪ್ರದೇಶ ಕುಶಿನಗರದಲ್ಲಿರುವ ವಿಮಾನ ನಿಲ್ದಾಣ ಉದ್ಘಾಟಿಸಿದ ನರೇಂದ್ರ ಮೋದಿ, ಶ್ರೀಲಂಕಾದಿಂದ ಬಂತು ಮೊದಲ ವಿಮಾನ

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ